ಕಾಂಗ್ರೆಸ್ನಲ್ಲಿ ಸೋತ ಅಭ್ಯರ್ಥಿಗಳಿಗೆ ಬಿಜೆಪಿ ಗಾಳ, ಏನಿದು ಹೊಸ ತಂತ್ರ
Recommended Video

ಬೆಂಗಳೂರು, ಅಕ್ಟೋಬರ್ 09: ಸರ್ಕಾರ ರಚಿಸಲು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿಸಿ ಆ ನಂತರ ಸುಮ್ಮನಾಗಿದ್ದ ಬಿಜೆಪಿ ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತಿದ್ದ ಅಭ್ಯರ್ಥಿಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಗಳನ್ನು ಆರಂಭಿಸಿದೆ.
ಕಳೆದ ಚುನಾವಣೆಯಲ್ಲಿ ಮಂಡ್ಯದ ನಾಗಮಂಗಲದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾಜಿ ಸಚಿವ ಚೆಲುವರಾಯಸ್ವಾಮಿ ಹಾಗೂ ಮತ್ತೊಬ್ಬ ಸೋತ ಅಭ್ಯರ್ಥಿ ಬಾಲಕೃಷ್ಣ ಅವರನ್ನು ಬಿಜೆಪಿ ಸಂಪರ್ಕಿಸಿದ್ದು ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದೆ.
ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆರ್.ಅಶೋಕ್ ಅವರು ನಿರಾಕರಿಸಿದ ಬೆನ್ನಲ್ಲೇ ಈ ಯತ್ನಗಳು ಆರಂಭವಾಗಿರುವುದು ಕುತೂಹಲ ಕೆರಳಿಸಿದೆ. ಅಲ್ಲದೆ ಸೋತ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೆಳೆಯುವ ಯತ್ನ ಮಾಡುತ್ತಿರುವುದೇಕೆ ಅದರಿಂದ ಬಿಜೆಪಿಗಾಗುವ ಲಾಭವೇನು ಎಂಬ ಅನುಮಾನ ಸಹ ಮೂಡಿದೆ.

ಚೆಲುವರಾಯಸ್ವಾಮಿಗೆ ಟಿಕೆಟ್ ಭರವಸೆ
ಲೋಕಸಭೆ ಉಪಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಟಿಕೆಟ್ ಸಹ ನೀಡುವುದಾಗಿ ಚೆಲುವರಾಯಸ್ವಾಮಿ ಅವರಿಗೆ ಬಿಜೆಪಿ ಹೇಳಿದ್ದು. ಈ ಬಗ್ಗೆ ಯೋಚಿಸಿ ನಿರ್ಧರಿಸುವುದಾಗಿ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಆದರೆ ಚೆಲುವರಾಯಸ್ವಾಮಿ ಅವರ ವಿಳಂಬ ನೀತಿ ಬಿಜೆಪಿಗೆ ಸರಿ ಬಂದಿಲ್ಲ.

ಯೋಗೇಶ್ವರ್ಗೆ ಜವಾಬ್ದಾರಿ
ಬಾಲಕೃಷ್ಣ ಅವರಿಗೂ ಬಿಜೆಪಿ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿದ್ದು. ಈ ಇಬ್ಬರೂ ಮಾಜಿ ಶಾಸಕರನ್ನು ಬಿಜೆಪಿಗೆ ಕರೆತರುವ ಜವಾಬ್ದಾರಿಯನ್ನು ಬಿಜೆಪಿಯ ಯೋಗೀಶ್ವರ್ಗೆ ವಹಿಸಲಾಗಿದ್ದು. ಈ ಇಬ್ಬರು ಶಾಸಕರನ್ನಷ್ಟೆ ಅಲ್ಲದೆ ಇನ್ನೂ ಕೆಲವು ಪ್ರಮುಖ ಮುಖಂಡರನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆಯುತ್ತಿದೆ.

ಮಾಜಿಗಳನ್ನು ಸೆಳೆಯುವ ಯತ್ನವೇಕೆ
ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಭಾವಿ ಒಕ್ಕಲಿಗ ನಾಯಕರ ಅವಶ್ಯಕತೆ ಇದೆ. ಯೋಗೀಶ್ವರ್ ಅವರು ರಾಮನಗರ ಜಿಲ್ಲೆಯಲ್ಲಿ ತಕ್ಕಮಟ್ಟಿಗೆ ಬಿಜೆಪಿಯ ಒಕ್ಕಲಿಗ ನಾಯಕನಾಗಿ ಗುರುತಿಸಿಕೊಂಡಿದ್ದಾರೆ ಹಾಗಾಗಿಯೇ ಬಿಜೆಪಿಯು ಚೆಲುವರಾಯಸ್ವಾಮಿ ಹಾಗೂ ಬಾಲಕೃಷ್ಣ ಅವರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಯತ್ನಿಸುತ್ತಿದೆ.

ಹೀನಾಯವಾಗಿ ಸೋತಿರುವ ಅಭ್ಯರ್ಥಿಗಳು
ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಬಂದ ಎನ್.ಚೆಲುವರಾಯಸ್ವಾಮಿ ಹಾಗೂ ಎಚ್ಸಿ ಬಾಲಕೃಷ್ಣ ಇಬ್ಬರೂ ಸಹ ಹೀನಾಯವಾಗಿ ಸೋತಿದ್ದಾರೆ. ಸಮ್ಮಿಶ್ರ ಸರ್ಕಾರ ಸಹ ಅಸ್ಥಿತ್ವಕ್ಕೆ ಬಂದ ಕಾರಣ ಕಾಂಗ್ರೆಸ್ನಲ್ಲಿ ಮೂಲೆಗುಂಪಾಗಿದ್ದಾರೆ. ಅವರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಇದು ಸೂಕ್ತ ಸಮಯವೆಂದು ಬಿಜೆಪಿ ಈಗ ದಾಳ ಉರುಳಿಸುತ್ತಿದೆ. ನಾಗಮಂಗಲದಲ್ಲಿ ಚೆಲುವರಾಯಸ್ವಾಮಿ ಸೋತಿದ್ದರೆ, ಮಾಗಡಿಯಲ್ಲಿ ಬಾಲಕೃಷ್ಣ ಸೋತಿದ್ದಾರೆ.

ಪಕ್ಷಾಂತರ ತಡೆಯಲಿದ್ದಾರೆ ಜಮೀರ್
ಚೆಲುವರಾಯಸ್ವಾಮಿ ಹಾಗೂ ಬಾಲಕೃಷ್ಣ ಅವರನ್ನು ಕಾಂಗ್ರೆಸ್ಗೆ ಕರೆತಂದ ಜಮೀರ್ ಅಹ್ಮದ್ ಅವರು ಇಬ್ಬರು ಮಾಜಿ ಶಾಸಕರು ಬಿಜೆಪಿ ಸೇರದಂತೆ ತಡೆಯುತ್ತೇನೆ ಎಂದು ಈಗಾಗಲೇ ಹೇಳಿದ್ದು, ಇಂದು ಅಥವಾ ನಾಳೆ ಇಬ್ಬರನ್ನೂ ಜಮೀರ್ ಅವರು ಭೇಟಿ ಆಗಲಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications