ಕೆ.ಆರ್.ಪೇಟೆಯಲ್ಲಿ ಸುಮಲತಾ ಬೆಂಬಲವಿಲ್ಲದೇ ಗೆದ್ದ ಬಿಜೆಪಿ
ಮಂಡ್ಯ, ಡಿಸೆಂಬರ್ 10: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲವಿಲ್ಲದೆ ಬಿಜೆಪಿ ಪಕ್ಷ ಗೆದ್ದಿದೆ. ಭಾರೀ ಪರಿಶ್ರಮದಿಂದ ಅನರ್ಹ ಶಾಸಕರಾಗಿದ್ದ ಕೆ.ಸಿ.ನಾರಾಯಣಗೌಡ ಅವರು ವಿಜಯ ಸಾಧಿಸಿದ್ದಾರೆ.
ಕೆ.ಆರ್.ಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಗೆಲುವು ಸಾಧಿಸಿದ್ದಾರೆ. ಸುಮಲತಾ ಅವರ ಬೆಂಬಲಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪೈಪೊಟಿ ನಡೆಸಿದ್ದವು. ಆದರೆ ಸುಮಲತಾ ಅವರು ಯಾರಿಗೂ ಬೆಂಬಲ ನೀಡದೆ ತಟಸ್ಥವಾಗಿ ಉಳಿಯುವುದಾಗಿ ಹೇಳಿದ್ದರು.
ಉಪ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸುಮಲತಾ ಅವರನ್ನು ಎರಡೂ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು, ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸ್ಥಳೀಯ ಬಿಜೆಪಿ ನಾಯಕರು ತಮ್ಮ ಪರವಾಗಿ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು.

ಇನ್ನು ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಬರುವಂತೆ ಕೋರಿದ್ದರು, ಆದರೆ ಸಂಸದೆ ಸುಮಲತಾ ಅವರು ಯಾರಿಗೂ ಬೆಂಬಲ ನೀಡಿರಲಿಲ್ಲ.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾ ಅಂಬರೀಶ್ ಅವರಿಗೆ ಬಾಹ್ಯ ಬೆಂಬಲ ನೀಡಿತ್ತು, ಅಲ್ಲದೇ ಪಕ್ಷದ ಕಾರ್ಯಕರ್ತರು ಕೂಡಾ ಅವರ ಗೆಲುವಿಗೆ ಶ್ರಮಿಸಿದ್ದರು. ಇನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಸುಮಲತಾ ಬೆಂಬಲಿಸಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications