ಕೆ.ಆರ್.ಪೇಟೆಯಲ್ಲಿ ಸುಮಲತಾ ಬೆಂಬಲವಿಲ್ಲದೇ ಗೆದ್ದ ಬಿಜೆಪಿ
ಮಂಡ್ಯ, ಡಿಸೆಂಬರ್ 10: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲವಿಲ್ಲದೆ ಬಿಜೆಪಿ ಪಕ್ಷ ಗೆದ್ದಿದೆ. ಭಾರೀ ಪರಿಶ್ರಮದಿಂದ ಅನರ್ಹ ಶಾಸಕರಾಗಿದ್ದ ಕೆ.ಸಿ.ನಾರಾಯಣಗೌಡ ಅವರು ವಿಜಯ ಸಾಧಿಸಿದ್ದಾರೆ.
ಕೆ.ಆರ್.ಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಗೆಲುವು ಸಾಧಿಸಿದ್ದಾರೆ. ಸುಮಲತಾ ಅವರ ಬೆಂಬಲಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪೈಪೊಟಿ ನಡೆಸಿದ್ದವು. ಆದರೆ ಸುಮಲತಾ ಅವರು ಯಾರಿಗೂ ಬೆಂಬಲ ನೀಡದೆ ತಟಸ್ಥವಾಗಿ ಉಳಿಯುವುದಾಗಿ ಹೇಳಿದ್ದರು.
ಕೆಆರ್ ಪೇಟೆ: ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಪತಾಕೆ!
ಉಪ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸುಮಲತಾ ಅವರನ್ನು ಎರಡೂ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳು ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು, ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸ್ಥಳೀಯ ಬಿಜೆಪಿ ನಾಯಕರು ತಮ್ಮ ಪರವಾಗಿ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು.
ಇನ್ನು ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಬರುವಂತೆ ಕೋರಿದ್ದರು, ಆದರೆ ಸಂಸದೆ ಸುಮಲತಾ ಅವರು ಯಾರಿಗೂ ಬೆಂಬಲ ನೀಡಿರಲಿಲ್ಲ.
ಕೆಆರ್ ಪೇಟೆ: ಕಳೆದ ಬಾರಿ ಠೇವಣಿ ಕಳೆದುಕೊಂಡಿದ್ದ ಬಿಜೆಪಿ ಕೊಟ್ಟ ಶಾಕ್
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತಾ ಅಂಬರೀಶ್ ಅವರಿಗೆ ಬಾಹ್ಯ ಬೆಂಬಲ ನೀಡಿತ್ತು, ಅಲ್ಲದೇ ಪಕ್ಷದ ಕಾರ್ಯಕರ್ತರು ಕೂಡಾ ಅವರ ಗೆಲುವಿಗೆ ಶ್ರಮಿಸಿದ್ದರು. ಇನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಸುಮಲತಾ ಬೆಂಬಲಿಸಿದ್ದರು.