ಕಾವೇರಿ ನದಿ ತಟದಲ್ಲಿ ವಾಮಾಚಾರ: ಯುವತಿಯರ ವಶೀಕರಣಕ್ಕೆ ಯತ್ನ
ಮಂಡ್ಯ, ಸೆಪ್ಟೆಂಬರ್ 14: ನಿರಂತರ ಅನಾಚಾರಗಳಿಂದ ಅಪವಿತ್ರವಾಗುತ್ತಿರುವ ಕಾವೇರಿ ನದಿ ತಟದಲ್ಲಿ ವಾಮಾಚಾರ ಮಾಡಲಾಗಿದೆ. ಕಾವೇರಿ ನದಿಯ ಪಶ್ಚಿಮ ವಾಹಿನಿ ಕ್ಷೇತ್ರ ವಾಮಾಚಾರಿಗಳ ಪ್ರಸಿದ್ಧ ತಾಣವಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪವಿತ್ರ ಪಶ್ಚಿಮ ವಾಹಿನಿ ಕ್ಷೇತ್ರದಲ್ಲಿ ವಾಮಾಚಾರ ಮಾಡಿ ಹಾಡಹಗಲೇ ಯುವತಿಯರ ವಶೀಕರಣಕ್ಕೆ ಯತ್ನಿಸಲಾಗಿದೆ.
ಮಂಡಲ, ಬಲಿ ಪೂಜೆ ಮೂಲಕ ಮುಗ್ಧ ಯುವತಿಯರ ವಶೀಕರಣದ ದೃಶ್ಯ ಖಾಸಗಿ ವಾಹಿನಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಮಾಚಾರ ಮಾಡುವವರು ಕ್ಯಾಮೆರಾ ನೋಡುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ವಾಮಾಚಾರದ ಮೂಲಕ ಮುಗ್ಧ ಬಾಲಕಿಯರು, ಯುವತಿಯರ ವಶೀಕರಿಸುವ ಜಾಲ. ವಾಮಾಚಾರಿಗಳು ಹಾಗೂ ಅನಾಚಾರಿಗಳ ಜಾಲ ಶ್ರೀರಂಗಪಟ್ಟಣದಲ್ಲಿ ಸಕ್ರಿಯವಾಗಿದೆಯಾ ಎಂಬ ಅನುಮಾನಕ್ಕೆ ಪುಷ್ಠಿ ನೀಡಿದಂತಿದೆ.
ವಿವಿಧ ಪೂಜೆಗಳ ಹೆಸರಲ್ಲಿ ಮುಗ್ಧ ಜನರಿಗೆ ವಂಚನೆ ಮಾಡುತ್ತಿದ್ದು, ವಾಮಾಚಾರಕ್ಕೆ ನಿರಂತರವಾಗಿ ಹಂದಿ, ಕೋಳಿಗಳನ್ನು ಬಲಿ ಕೊಡಲಾಗುತ್ತಿದೆ. ಪ್ರಾಣಿ ಬಲಿಯಿಂದ ಪವಿತ್ರ ಕಾವೇರಿ ನದಿ ಕಲುಷಿತವಾಗುತ್ತಿದೆ.

ಹಾಡಹಗಲೇ ವಾಮಾಚಾರ ನಡೆದರೂ ಮಂಡ್ಯ ಜಿಲ್ಲಾಡಳಿತ ಸುಮ್ಮನಿರುವುದಕ್ಕೆ ಸಾರ್ವಜನಿಕ ಆಕ್ರೋಶ ಕೇಳಿಬಂದಿದೆ. ಭಾನುವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನದಂದೇ ಅತಿ ಹೆಚ್ಚು ವಾಮಾಚಾರ ಘಟನೆ ನಡೆಯುತ್ತಿದ್ದು, ಪ್ರಶ್ನೆ ಮಾಡಿದವರಿಗೆ ಹಲ್ಲೆ, ಕೊಲೆ ಬೆದರಿಕೆ ಹಾಕಲಾಗುತ್ತದೆ.

ಈ ಎಲ್ಲವೂ ಗೊತ್ತಿದ್ದರೂ ಪುರಸಭೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಸುಮ್ಮನಿರುವ ಏಕೆ ಎನ್ನುವ ಪ್ರಶ್ನೆ ಮೂಡುತ್ತಿದೆ. ಶ್ರದ್ಧಾ ಕಾರ್ಯ, ಪಿಂಡ, ಅಶ್ರುತರ್ಪಣಕ್ಕೆ ಪ್ರಸಿದ್ಧವಾದ ಪಶ್ಚಿಮ ವಾಹಿನಿಯಲ್ಲಿ ವಾಮಾಚಾರ, ಅನಾಚಾರಗಳಿಂದ ಶ್ರದ್ಧಾ ಕಾರ್ಯಕ್ಕೂ ಧಕ್ಕೆಯಾಗುತ್ತಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications