ಕೆ.ಆರ್.ಪೇಟೆ ಜನಕ್ಕೆ ಬಿಎಸ್ ವೈ ಉಡುಗೊರೆಯಾಗಿ ನೀರು ಕೊಟ್ರು..!
ಮಂಡ್ಯ, ಜುಲೈ 29: ಹೇಮಾವತಿ ನದಿಯಲ್ಲಿ ಹರಿಯುತ್ತಿದ್ದ ನೀರಿನ ಪ್ರಮಾಣ ಇಳಿಮುಖವಾದ ಕಾರಣ ಕೆ.ಆರ್.ಪೇಟೆ ಪಟ್ಟಣಕ್ಕೆ ಕುಡಿಯುವ ನೀರಿನ ಕೊರತೆಯಾಗಿತ್ತಲ್ಲದೆ, ರೈತರು ಬೆಳೆದ ಬೆಳೆಗಳು ಒಣಗುವ ಹಂತಕ್ಕೆ ತಲುಪಿದ್ದವು. ಹೀಗಾಗಿ ರೈತರು ಹೇಮಾವತಿ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸುತ್ತಾ ಬಂದಿದ್ದರೂ ಪ್ರಯೋಜನವಾಗಿರಲಿಲ್ಲ.
ಆದರೆ ಇದೀಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೇಮಾವತಿ ಜಲಾಶಯದಿಂದ 2500 ಕ್ಯುಸೆಕ್ ನೀರು ಹರಿಸುವ ಮೂಲಕ ಹುಟ್ಟೂರಿನ ಜನತೆಗೆ ಮೊದಲ ಉಡುಗೊರೆ ನೀಡಿದ್ದಾರೆ. ಇದರಿಂದ ಕೆ.ಆರ್.ಪೇಟೆ ಪಟ್ಟಣದ ಜನರು ಮತ್ತು ರೈತರು ಖುಷಿ ಪಡುವಂತಾಗಿದೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹುಟ್ಟೂರು ಬೂಕನಕೆರೆಗೆ ಆಗಮಿಸಿದ ವೇಳೆ ಕೆ.ಆರ್.ಪೇಟೆ ತಾಲೂಕಿನಲ್ಲಿ ಒಣಗುತ್ತಿರುವ ಬೆಳೆಗಳನ್ನು ಉಳಿಸುವಂತೆ ಮತ್ತು ಕೆ.ಆರ್.ಪೇಟೆ ಪಟ್ಟಣದ ಜನರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಹೇಮಗಿರಿ ಬಳಿಯ ಹೇಮಾವತಿ ನದಿಯ ಒಡಲು ಬತ್ತಿಹೋಗಿ ಬರಿದಾಗಿರುವ ಹಿನ್ನೆಲೆಯಲ್ಲಿ ಈ ಭಾಗದ ರೈತ ಮುಖಂಡರು ಮತ್ತು ಪುರ-ಪ್ರಮುಖರು ಹೇಮಾವತಿ ಜಲಾಶಯದಿಂದ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದರು.

ಇದನ್ನು ಪರಿಗಣಿಸಿದ ಸಿಎಂ ಯಡಿಯೂರಪ್ಪ ಅವರು ಗೊರೂರು ಜಲಾಶಯದಿಂದ 2500 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಟ್ಟಿದ್ದಾರೆ. ಇದರಿಂದ ರೈತರು ಮತ್ತು ಜನರು ನೆಮ್ಮದಿಯುಸಿರು ಬಿಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಕೃಷ್ಣರಾಜಪೇಟೆ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಹೇಮಗಿರಿಯ ಪಂಪ್ ಹೌಸಿನ ಬಳಿ ನೀರಿಲ್ಲದೆ ಬತ್ತಿಹೋಗಿತ್ತು. ಇದೀಗ ಈ ಸ್ಥಳದಲ್ಲಿ ನೀರು ಕಾಣಿಸಿಕೊಂಡಿದೆ.
ಈ ಕುರಿತಂತೆ ತಾಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ಮಾತನಾಡಿ, "ಕೃಷ್ಣರಾಜಸಾಗರ ವ್ಯಾಪ್ತಿಯ ರೈತರಿಗೆ ವಿಶ್ವೇಶ್ವರಯ್ಯ ನಾಲೆಯ ಮೂಲಕ ನೀರು ಹರಿಸಿದ ಮಾದರಿಯಲ್ಲಿ ಗೊರೂರು ಜಲಾಶಯ ವ್ಯಾಪ್ತಿಯ ಕೃಷ್ಣರಾಜಪೇಟೆ ತಾಲೂಕಿಗೆ ಅನುಕೂಲವಾಗುವಂತೆ ನದಿಗೆ ನೀರು ಬಿಟ್ಟಿರುವುದರಿಂದ, ಕಾಲುವೆಗಳಾದ ಮಂದಗೆರೆ ಎಡದಂಡೆ ಮತ್ತು ಬಲದಂಡೆ ಹಾಗೂ ಹೇಮಗಿರಿ ನಾಲೆಯಿಂದ ನೀರನ್ನು ಹರಿಸುವ ಜೊತೆಗೆ ಗೊರೂರು ಜಲಾಶಯದ ಎಡದಂಡೆ ನಾಲೆಯಾದ ಸಾಹುಕಾರ್ ಚನ್ನಯ್ಯ ನಾಲೆಗೆ ನೀರನ್ನು ಕನಿಷ್ಠ ಹತ್ತು ದಿನಗಳ ಕಾಲ ಹರಿಸಿಕೊಟ್ಟು ಕೆರೆಕಟ್ಟೆಗಳಿಗೆ ನೀರನ್ನು ತುಂಬಿಸಿಕೊಳ್ಳಲು ಹಾಗೂ ಬೆಳೆಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications