ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನಗನಮರಡಿ ಬಸ್ ದುರಂತ: ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲು

|
Google Oneindia Kannada News

ಮಂಡ್ಯ, ನವೆಂಬರ್ 25: ನಿನ್ನೆ (ನವೆಂಬರ್ 24) ಮಂಡ್ಯ ಜಿಲ್ಲೆ ಕನಗನಮರಡಿಯಲ್ಲಿ ನಡೆದ ಭೀಕರ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನಿನ್ನೆ ಕನಗನವಾಡಿಯಲ್ಲಿ ಖಾಸಗಿ ಬಸ್‌ ನಾಲೆಗೆ ಉರುಳಿ 30 ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿತ್ತು. ಘಟನೆಯಲ್ಲಿ ಬಸ್‌ನ ಚಾಲಕ ನಿರ್ವಾಹಕ ಇಬ್ಬರೂ ಹೇಗೋ ತಪ್ಪಿಸಿಕೊಂಡು ಸ್ಥಳದಿಂದ ಪಲಾಯನಗೈದಿದ್ದರು.

ಕನಗನಮರಡಿ ಭೀಕರ ಬಸ್ ದುರಂತದಲ್ಲಿ ಪಾರಾಗಿ ಬಂದ ಗಿರೀಶ್ ಹೇಳಿದ್ದೇನು?ಕನಗನಮರಡಿ ಭೀಕರ ಬಸ್ ದುರಂತದಲ್ಲಿ ಪಾರಾಗಿ ಬಂದ ಗಿರೀಶ್ ಹೇಳಿದ್ದೇನು?

ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯತನ, ವೇಗದ ಚಾಲನೆಯೇ ಕಾರಣ ಎಂದು ಆರೋಪಿಸಿ ಕನಗನಮರಡಿಯ ಶಿವಲಿಂಗಯ್ಯ ಎಂಬುವರು ಪಾಂಡವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Bus accident in Mandya: FIR lodged against bus driver

ದೂರಿನ ಅನ್ವಯ ಪೊಲೀಸರು, ಬಸ್ ಚಾಲಕ ಶಿವಣ್ಣ ವಿರುದ್ಧ ಐಪಿಸಿ 279, 337, 304(ಎ) ಸೆಕ್ಷನ್‍ಗಳಡಿ ಹಾಗೂ ಭಾರತೀಯ ವಾಹನ ಕಾಯ್ದೆ 187ಕಲಂಗಳಡಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

ಬಸ್ ದುರಂತದಲ್ಲಿ ಮಡಿದವರ ಅಂತ್ಯ ಸಂಸ್ಕಾರ: ಮುಗಿಲು ಮುಟ್ಟಿದ ರೋದನ ಬಸ್ ದುರಂತದಲ್ಲಿ ಮಡಿದವರ ಅಂತ್ಯ ಸಂಸ್ಕಾರ: ಮುಗಿಲು ಮುಟ್ಟಿದ ರೋದನ

ನಿನ್ನೆ ಘಟನೆ ನಡೆದಾಗಿನಿಂದಲೂ ಬಸ್ ಚಾಲಕ ಶಿವಣ್ಣ ಅವರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಶಿವಣ್ಣನಿಗಾಗಿ ಹುಡುಕಾಟ ನಡೆಸಿದ್ದಾರೆ.

English summary
FIR was lodged against bus driver Shivanna who drive the which fell in the channel and killed 30 passengers. Bus driver Shivanna absconding. police searching for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X