ಬೈಎಲೆಕ್ಷನ್: ಎಲ್ಲರಿಗೂ ಶಾಕ್ ಕೊಟ್ಟ ಸುಮಲತಾ
Recommended Video
ಮಂಡ್ಯ, ನವೆಂಬರ್ 27: ಉಪ ಚುನಾವಣೆಯಲ್ಲಿ ಇವರು ನಮಗೆ ಬೆಂಬಲ ಕೊಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಶಾಕ್ ಕೊಟ್ಟಿದ್ದಾರೆ.

ಉಪ ಚುನಾವಣೆಯಲ್ಲಿ ನಾನು ತಟಸ್ಥ
ಸುಮಲತಾ ನಮ್ಮ ಪರವಾಗಿ ಪ್ರಚಾರ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿದ್ದ ಎರಡೂ ಪಕ್ಷಗಳ ಆಸೆಗೆ ತಣ್ಣೀರೆರಚಿದ್ದಾರೆ. ನನಗೆ ಬಿಜೆಪಿಯವರೂ ಬೇಕು, ಕಾಂಗ್ರೆಸ್ ನವರೂ ಬೇಕು ಹೀಗಾಗಿ ಉಪ ಚುನಾವಣೆಯಲ್ಲಿ ನಾನು ಯಾರ ಪರವೂ ಪ್ರಚಾರಕ್ಕೆ ಬರಲ್ಲ ಎಂದು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಯಾರ ಪರವೂ ಪ್ರಚಾರಕ್ಕೆ ಹೋಗದೇ ಈ ಬಾರಿ ತಟಸ್ಥವಾಗಿರಲು ನಿರ್ಧರಿಸಿದ್ದಾರೆ. ಈ ಮೂಲಕ ಸುಮಲತಾ ಅಂಬರೀಶ್ ಬೆಂಬಲದ ನಿರೀಕ್ಷೆಯಲ್ಲಿದ್ದವರಿಗೆ ನಿರಾಶೆಯನ್ನುಂಟು ಮಾಡಿದೆ.

ನಿಮ್ಮ ಬೆಂಬಲ ನಮಗೇ ಕೊಡಿ
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡು ತಮ್ಮ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಬರಬೇಕೆಂದು ಕೇಳಿಕೊಂಡಿದ್ದರು, ಖುದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು. ಸುಮಲತಾ ಅವರಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷದವರೂ ಬೆಂಬಲ ನೀಡಿದ್ದರು. ಹೀಗಾಗಿ ಈ ಉಪ ಚುನಾವಣೆಯಲ್ಲಿ ಬೆಂಬಲ ನೀಡಲು ಒತ್ತಡ ಹೇರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅವರು "ನಾನು ನಿಮ್ಮನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿದ್ದೆ, ಈಗ ನೀವು ನನ್ನನ್ನು ಬೆಂಬಲಿಸಿ ಎಂದು ಒತ್ತಡ ಹಾಕಿದ್ದಾರೆ. ಅಲ್ಲದೇ ಬಿಜೆಪಿಯವರೂ ಸಹ ನಾವು ನಿಮಗೆ ಬಾಹ್ಯ ಬೆಂಬಲ ನೀಡಿದ್ದೇವು, ಉಪ ಚುನಾವಣೆಯಲ್ಲಿ ನೀವು ನಮಗೇ ಬೆಂಬಲಿಸಿ ಎಂದು ಕೇಳಿಕೊಂಡಿದ್ದರು.

ಎರಡೂ ಪಕ್ಷಗಳಿಗೆ ನಿರಾಸೆ
ಎರಡೂ ಪಕ್ಷಗಳ ಮಧ್ಯೆ ಧರ್ಮ ಸಂಕಟಕ್ಕೆ ಸಿಲುಕಿರುವ ಸಂಸದೆ ಸುಮಲತಾ ಈ ಉಪ ಚುನಾವಣೆಯಲ್ಲಿ ಯಾರೊಬ್ಬರಿಗೂ ಬೆಂಬಲಿಸಿದರೆ ಮತ್ತೊಬ್ಬರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಸೈಲೆಂಟಾಗಿರಲು ನಿರ್ಧರಿಸಿದ್ದಾರೆ.
ಯಾರ ಪರವೂ ಪ್ರಚಾರದಲ್ಲಿ ಭಾಗವಹಿಸಲ್ಲ ಎಂದು ಎರಡೂ ಪಕ್ಷಗಳಿಗೂ ಸ್ಪಷ್ಟವಾಗಿ ಸುಮಲತಾ ತಿಳಿಸಿದ್ದಾರೆ. ಇದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ನಿರಾಸೆಯಾಗಿದೆ. ಇವರಿಂದ ಪ್ರಚಾರ ಮಾಡಿಸಿ ಮತ ಕ್ರೋಢೀಕರಿಣ ಮಾಡಬೇಕೆಂದುಕೊಂಡಿದ್ದವರಿಗೆ ಬಾಯಿ ಮೇಲೆ ಬೆರಳಿಡುವಂತೆ ಮಾಡಿದ್ದಾರೆ.

ನನಗೆ ವಿರೋಧವೂ ಇಷ್ಟವಿಲ್ಲ
ನನಗೆ ಎರಡೂ ಪಕ್ಷದ ಕಾರ್ಯಕರ್ತರು ಅವಶ್ಯ. ಯಾರಿಗೂ ಬೆಂಬಲ ನೀಡದೇ, ಯಾರೊಬ್ಬರ ವಿರೋಧ ಕಟ್ಟಿಕೊಳ್ಳಬಾರದೆಂದು ನಿರ್ಧರಿಸಿದ್ದೇನೆ ಓಟ್ ಹಾಕುವ ನಿರ್ಧಾರ ಮತದಾರರಿಗೆ ಬಿಟ್ಟಿದ್ದೇನೆಂದು ಹೇಳಿದ್ದಾರೆ.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೆ.ಆರ್.ನಾರಾಯಣ ಗೌಡ, ಕಾಂಗ್ರೆಸ್ ನಿಂದ ಕೆ.ಬಿ,ಚಂದ್ರಶೇಖರ್, ಜೆಡಿಎಸ್ ನಿಂದ ದೇವರಾಜ್ ಬಿ.ಎಲ್ ಚುನಾವಣಾ ಆಖಾಡದಲ್ಲಿದ್ದಾರೆ. ಈ ಉಪ ಚುನಾವಣೆಯು ಡಿಸೆಂಬರ್ 05 ರಂದು ನಡೆಯಲಿದ್ದು, ಡಿಸೆಂಬರ್ 09 ರಂದು ಪ್ರಕಟಗೊಳ್ಲಲಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications