ಮದ್ದೂರಲ್ಲಿ ಟೆಕ್ಕಿಗಳ ಮದುವೆಗೆ ನಾಟಿ ತಳಿ ಕರುಗಳ ಉಡುಗೊರೆ
ಮದ್ದೂರು, ಡಿಸೆಂಬರ್ 10 : ಸಾಮಾನ್ಯವಾಗಿ ಮದುವೆಯ ವೇಳೆಯಲ್ಲಿ ವಧು-ವರರಿಗೆ ಬೇರೆ ಬೇರೆ ರೀತಿಯ ಉಡುಗೊರೆ ನೀಡುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಮದ್ದೂರಿನಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ನೂತನ ವಧು-ವರರಿಗೆ ಉಡುಗೊರೆಯಾಗಿ ನಾಟಿ ಕರುವನ್ನು ನೀಡಿರುವುದು ವಿಶೇಷವಾಗಿದೆ.
ಖಾಸಗಿ ಸಮುದಾಯ ಭವನದಲ್ಲಿ ಟೆಕ್ಕಿಗಳಾದ ಕಿರಣ್ ಕುಮಾರ್ ಹಾಗೂ ನಾಗಶ್ರೀ ಅವರ ವಿವಾಹ ಸಮಾರಂಭ ಏರ್ಪಡಾಗಿತ್ತು. ಇವರಿಗೆ ಬಯಲು ಸೀಮೆ ಬೆಳೆಗಾರರ ಸಂಘ ಹಾಗೂ ನಿರ್ಮಲ ಧರಿತ್ರಿ ರೈತ ಒಕ್ಕೂಟದ ಸದಸ್ಯರು ನಾಟಿ ತಳಿಯ ಎರಡು ಕರುಗಳನ್ನು ಉಡುಗೊರೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಭಾನುವಾರ ರಾತ್ರಿ ಸಮುದಾಯ ಭವನದಲ್ಲಿ ಆರತಕ್ಷತೆ ಕಾರ್ಯ ನಡೆಯುತ್ತಿತ್ತು. ಅವರಿಗೆ ಉಡುಗೊರೆಯಾಗಿ ಮದುವೆಗೆ ಬಂದಿದ್ದವರು ಬೇರೆ ಬೇರೆ ರೀತಿಯ ಉಡುಗೊರೆಯನ್ನು ನೀಡುತ್ತಿದ್ದರು. ಈ ವೇಳೆ ಮದುವೆ ಮಂಟಪಕ್ಕೆ ಎರಡು ದೇಸಿ ತಳಿ ಕರುಗಳೊಂದಿಗೆ ಆಗಮಿಸಿದವರನ್ನು ಕಂಡು ಎಲ್ಲರು ಅಚ್ಚರಿಪಟ್ಟರು. ಆದರೆ ವಧು-ವರರಿಗೆ ಇವುಗಳನ್ನು ಉಡುಗೊರೆಯಾಗಿ ಕೊಡಲು ತಂದಿದ್ದಾರೆ ಎನ್ನುವುದು ನೆರೆದ ಬಹಳಷ್ಟು ಜನರಿಗೆ ಗೊತ್ತಾಗಲೇ ಇಲ್ಲ. ಬಳಿಕ ವಧು-ವರರಿಗೆ ಉಡುಗೊರೆಯಾಗಿ ನೀಡಲು ಕರುಗಳನ್ನು ತರಲಾಗಿದೆ ಎಂಬುದು ಗೊತ್ತಾಗುತ್ತಿದ್ದಂತೆಯೇ ನೆರೆದವರಿಗೆ ಅಚ್ಚರಿಯೋ ಅಚ್ಚರಿ.

ಇಷ್ಟಕ್ಕೂ ವಧು-ವರರಿಗೆ ದೇಸಿ ಕರುಗಳನ್ನು ಉಡುಗೊರೆಯಾಗಿ ನೀಡಲು ಕಾರಣವೂ ಇದೆ. ಅದೇನೆಂದರೆ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಗಳಾದ ಕಿರಣ್ ಕುಮಾರ್ ಹಾಗೂ ನಾಗಶ್ರೀ ಅವರು, ಸಾವಯವ ಕೃಷಿ ಪದ್ಧತಿಯ ಬೆಳೆಗಳನ್ನು ರಾಜಧಾನಿಯಲ್ಲಿ ಮಾರಾಟ ಮಾಡಲು ಸಹಾಯ ಮಾಡುತ್ತಿದ್ದಾರೆ. ರೈತರ ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಬಿಡುವಿನ ವೇಳೆಯಲ್ಲಿ ಮಾರಾಟ ಮಾಡುವ ಮೂಲಕ ಮಾರುಕಟ್ಟೆ ಸೃಷ್ಟಿಸಿಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ಈ ಅಪರೂಪದ ಉಡುಗೊರೆ ನೀಡಿರುವುದಾಗಿ ಕೃಷಿಕರು ಹೇಳುವ ಮೂಲಕ ಎಲ್ಲರ ಅಚ್ಚರಿಗೆ ತೆರೆ ಎಳೆದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications