ಮದ್ದೂರಲ್ಲಿ ಟೆಕ್ಕಿಗಳ ಮದುವೆಗೆ ನಾಟಿ ತಳಿ ಕರುಗಳ ಉಡುಗೊರೆ
ಮದ್ದೂರು, ಡಿಸೆಂಬರ್ 10 : ಸಾಮಾನ್ಯವಾಗಿ ಮದುವೆಯ ವೇಳೆಯಲ್ಲಿ ವಧು-ವರರಿಗೆ ಬೇರೆ ಬೇರೆ ರೀತಿಯ ಉಡುಗೊರೆ ನೀಡುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಮದ್ದೂರಿನಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ನೂತನ ವಧು-ವರರಿಗೆ ಉಡುಗೊರೆಯಾಗಿ ನಾಟಿ ಕರುವನ್ನು ನೀಡಿರುವುದು ವಿಶೇಷವಾಗಿದೆ.
ಖಾಸಗಿ ಸಮುದಾಯ ಭವನದಲ್ಲಿ ಟೆಕ್ಕಿಗಳಾದ ಕಿರಣ್ ಕುಮಾರ್ ಹಾಗೂ ನಾಗಶ್ರೀ ಅವರ ವಿವಾಹ ಸಮಾರಂಭ ಏರ್ಪಡಾಗಿತ್ತು. ಇವರಿಗೆ ಬಯಲು ಸೀಮೆ ಬೆಳೆಗಾರರ ಸಂಘ ಹಾಗೂ ನಿರ್ಮಲ ಧರಿತ್ರಿ ರೈತ ಒಕ್ಕೂಟದ ಸದಸ್ಯರು ನಾಟಿ ತಳಿಯ ಎರಡು ಕರುಗಳನ್ನು ಉಡುಗೊರೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಭಾನುವಾರ ರಾತ್ರಿ ಸಮುದಾಯ ಭವನದಲ್ಲಿ ಆರತಕ್ಷತೆ ಕಾರ್ಯ ನಡೆಯುತ್ತಿತ್ತು. ಅವರಿಗೆ ಉಡುಗೊರೆಯಾಗಿ ಮದುವೆಗೆ ಬಂದಿದ್ದವರು ಬೇರೆ ಬೇರೆ ರೀತಿಯ ಉಡುಗೊರೆಯನ್ನು ನೀಡುತ್ತಿದ್ದರು. ಈ ವೇಳೆ ಮದುವೆ ಮಂಟಪಕ್ಕೆ ಎರಡು ದೇಸಿ ತಳಿ ಕರುಗಳೊಂದಿಗೆ ಆಗಮಿಸಿದವರನ್ನು ಕಂಡು ಎಲ್ಲರು ಅಚ್ಚರಿಪಟ್ಟರು. ಆದರೆ ವಧು-ವರರಿಗೆ ಇವುಗಳನ್ನು ಉಡುಗೊರೆಯಾಗಿ ಕೊಡಲು ತಂದಿದ್ದಾರೆ ಎನ್ನುವುದು ನೆರೆದ ಬಹಳಷ್ಟು ಜನರಿಗೆ ಗೊತ್ತಾಗಲೇ ಇಲ್ಲ. ಬಳಿಕ ವಧು-ವರರಿಗೆ ಉಡುಗೊರೆಯಾಗಿ ನೀಡಲು ಕರುಗಳನ್ನು ತರಲಾಗಿದೆ ಎಂಬುದು ಗೊತ್ತಾಗುತ್ತಿದ್ದಂತೆಯೇ ನೆರೆದವರಿಗೆ ಅಚ್ಚರಿಯೋ ಅಚ್ಚರಿ.

ಇಷ್ಟಕ್ಕೂ ವಧು-ವರರಿಗೆ ದೇಸಿ ಕರುಗಳನ್ನು ಉಡುಗೊರೆಯಾಗಿ ನೀಡಲು ಕಾರಣವೂ ಇದೆ. ಅದೇನೆಂದರೆ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಗಳಾದ ಕಿರಣ್ ಕುಮಾರ್ ಹಾಗೂ ನಾಗಶ್ರೀ ಅವರು, ಸಾವಯವ ಕೃಷಿ ಪದ್ಧತಿಯ ಬೆಳೆಗಳನ್ನು ರಾಜಧಾನಿಯಲ್ಲಿ ಮಾರಾಟ ಮಾಡಲು ಸಹಾಯ ಮಾಡುತ್ತಿದ್ದಾರೆ. ರೈತರ ಉತ್ಪನ್ನಗಳನ್ನು ಬೆಂಗಳೂರಿನಲ್ಲಿ ಬಿಡುವಿನ ವೇಳೆಯಲ್ಲಿ ಮಾರಾಟ ಮಾಡುವ ಮೂಲಕ ಮಾರುಕಟ್ಟೆ ಸೃಷ್ಟಿಸಿಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ಈ ಅಪರೂಪದ ಉಡುಗೊರೆ ನೀಡಿರುವುದಾಗಿ ಕೃಷಿಕರು ಹೇಳುವ ಮೂಲಕ ಎಲ್ಲರ ಅಚ್ಚರಿಗೆ ತೆರೆ ಎಳೆದಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications