ಹೋರಾಟಗಾರರ ವಿರುದ್ಧದ ಮೊಕದ್ದಮೆ ವಾಪಸ್ ಪಡೆಯಿರಿ
ಮಂಡ್ಯ, ಸೆಪ್ಟೆಂಬರ್ 16: ನಗರದ ಸರ್ ಎಂ.ವಿ. ಪ್ರತಿಮೆ ಬಳಿ ಮಾದೇಗೌಡರು ಕರೆದಿದ್ದ ಶಾಸಕರು, ಸಂಸದರ ಸಭೆ ಮುಕ್ತಾಯವಾಗಿದೆ. ಆ ನಂತರ ಮಾತನಾಡಿರುವ ಶಾಸಕ ಎನ್.ಚೆಲುವರಾಯಸ್ವಾಮಿ, ಹೋರಾಟಗಾರರ ವಿರುದ್ಧ ಹಾಕಿದ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಉನ್ನತಾಧಿಕಾರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.
ನೀರಾವರಿ ತಜ್ಞರು, ಗಣಿ-ಭೂಗರ್ಭ, ರೈತರು ಹಾಗೂ ಸಾಮಾಜಿಕ ತಜ್ಞರನ್ನು ಒಳಗೊಂಡ ಎಂಟು ಸದಸ್ಯರಿರುವ ಸಮಿತಿ ರಚನೆಯಾಗಬೇಕು. ಅದರಲ್ಲಿ ಶೇ 60ರಷ್ಟು ಯುವಕರಿಗೆ ಅವಕಾಶ ನೀಡಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.[ಅಂಬರೀಶಣ್ಣ ರಸ್ತೆ ಬೇಡ, ನೀರು ಬೇಡ, ನೀವು ಬನ್ನಿ ಸಾಕು...]

ಜನಪ್ರತಿನಿಧಿಗಳ ಸಭೆಯಲ್ಲಿ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧವೂ ಆಕ್ರೋಶ ವ್ಯಕ್ತವಾಯಿತು. ಮಾಗಡಿ ಶಾಸಕ ಬಾಲಕೃಷ್ಣನನ್ನು ಗಂಡಸು ಮಾಡಿದ್ದೇ ಬಿಜೆಪಿ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ನಾಗಣ್ಣ ಗೌಡ ಹರಿಹಾಯ್ದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಉಸಿರಾಟದಂತೆ ಕೆಲಸ ಮಾಡುತ್ತಿರುವ ಬಾಲಕೃಷ್ಣ, ಮನೆಗೆ ಮಗನಲ್ಲ, ಕ್ಷೇತ್ರಕ್ಕೆ ಶಾಸಕನಲ್ಲ, ಪಕ್ಷಕ್ಕೆ ಕಾರ್ಯಕರ್ತನಲ್ಲ ಎಂದು ವ್ಯಂಗ್ಯವಾಡಿದರು. ಇಂಥವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದರು. ಈಚೆಗೆ ಬಿಜೆಪಿ ವಿರುದ್ಧ ಮಾತನಾಡಿದ್ದ ಶಾಸಕ ಬಾಲಕೃಷ್ಣ, ಬಿಜೆಪಿಯವರು ಗಂಡಸ್ರಾ ಎಂದಿದ್ದರು. ಅದಕ್ಕೆ ನಾಗಣ್ಣ ಗೌಡ ತಿರುಗೇಟು ನೀಡಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications