ಕಾವೇರಿ ವಿವಾದಕ್ಕೆ ನ್ಯಾಯಾಲಯದಿಂದ ಪರಿಹಾರ ಸಿಗುವುದಿಲ್ಲ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೀಗೆ ಹೇಳಿದ್ದೇಕೆ?
ಮದ್ದೂರು, ಅಕ್ಟೋಬರ್, 22: ಕಾವೇರಿ ವಿವಾದಕ್ಕೆ ನ್ಯಾಯಾಲಯದಿಂದ ಪರಿಹಾರ ಸಿಗುವುದಿಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.
ರಾಜ್ಯಸರ್ಕಾರ ಸುಪ್ರೀಂಕೋರ್ಟ್ಗೆ ಒಂದು ಅರ್ಜಿಯನ್ನು ಸಲ್ಲಿಸಬೇಕು. ಒಂದು ಸ್ವತಂತ್ರ ಪರಿಶೀಲನಾ ಸಮಿತಿಯನ್ನು ನೇಮಕ ಮಾಡಬೇಕು. ಅವರು ನಮ್ಮ ರಾಜ್ಯಕ್ಕೆ ಸೇರಿದವರೂ ಆಗಿರಬಾರದು. ತಮಿಳುನಾಡಿಗೆ ಸೇರಿದವರೂ ಆಗಿರಬಾರದು. ಆ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿ ನೀರಿನ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಪಡೆಯಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸಮಿತಿ ನೀಡುವ ವರದಿಯಲ್ಲಿ ನಮ್ಮಲ್ಲಿ ಸಾಕಷ್ಟು ನೀರಿದೆ, ಸುಳ್ಳು ಹೇಳುತ್ತಿದ್ದೇವೆ ಎನ್ನುವುದಾದರೆ ನೀರು ಕೊಡಲೇಬೇಕು. ಇಲ್ಲದಿದ್ದರೆ ನಮ್ಮ ನೀರನ್ನು ನಮಗೆ ಬಿಟ್ಟುಕೊಡಬೇಕು. ನಾವು ತಮಿಳುನಾಡಿನವರಿಗೆ ನೀರನ್ನು ದಾನ ಮಾಡಿ ನಮ್ಮವರನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಸರಿಯಾದ ವಾದ ಮಂಡನೆ ಆಗುತ್ತಿಲ್ಲ ಎಂದ ಆರೋಪದ ಬಗ್ಗೆ ಕೇಳಿದಾಗ, ಒಬ್ಬ ನ್ಯಾಯಮೂರ್ತಿಯಾಗಿ ಆ ವಿಚಾರದಲ್ಲಿ ಇನ್ನೊಬ್ಬರನ್ನು ದೂಷಿಸುವುದಿಲ್ಲ ಎಂದು ಹೇಳಿದರು. ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರನ್ನು ಪ್ರಶ್ನಿಸಿದಾಗ, ಹಿಂದೆ ರಾಜಕೀಯ ಎನ್ನುವುದು ಒಂದು ಸೇವೆಯಾಗಿತ್ತು. ಈಗ ಅದು ವೃತ್ತಿಯಾಗಿದೆ. ಸುಲಭವಾಗಿ ದುಡ್ಡು ಮಾಡಬಹುದಾದ ಕ್ಷೇತ್ರವಾಗಿದೆ.
ಪ್ರಸ್ತುತ ಸೇವೆಗೆ ಇಲ್ಲಿ ಜಾಗವೇ ಇಲ್ಲ. ಇದಕ್ಕಾಗಿಯೇ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು ರಾಜಕೀಯಕ್ಕೆ ಬರುತ್ತಿದ್ದಾರೆ. ಸೇವೆ ಮಾಡುವವರಷ್ಟೇ ರಾಜಕೀಯಕ್ಕೆ ಬರಬೇಕು. ವೃತ್ತಿ ಮಾಡಿಕೊಳ್ಳುವವರು ಬಂದರೆ ವ್ಯವಸ್ಥೆ ಅವ್ಯವಸ್ಥೆ ಆಗುತ್ತದೆ. ಇದನ್ನು ಸರಿಪಡಿಸಬೇಕಾದರೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ನುಡಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications