ರಾಜ್ಯದಲ್ಲಿ ಮುಂದುವರಿದ ಕಾವೇರಿ ಹೋರಾಟ: ಮಂಡ್ಯದಲ್ಲಿ ರೈತರ ಎತ್ತಿನ ಗಾಡಿ, ಟ್ರಾಕ್ಟರ್ ಮೆರವಣಿಗೆ
ಮಂಡ್ಯ, ಅಕ್ಟೋಬರ್ 20: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧದ ಕಾವೇರಿ ಹೋರಾಟ ಕಾವೇರಿದ್ದು, ಮಂಡ್ಯದಲ್ಲಿ ರೈತರು ಎತ್ತಿನ ಗಾಡಿ, ಟ್ರಾಕ್ಟರ್ ಮೆರವಣಿಗೆ ನಡೆಸಿದರು.
ಇಂಡುವಾಳು, ಸಿದ್ದಯ್ಯನ ಕೊಪ್ಪಲು, ಸುಂಡಹಳ್ಳಿ,ಕಿರಗಂದೂರು ಹಾಗೂ ಮೊಳೆ ಕೊಪ್ಪಲು ಗ್ರಾಮದ ರೈತರು ಎತ್ತಿನ ಗಾಡಿ, ಟ್ರಾಕ್ಟರ್,ಬೈಕ್ ಗಳಲ್ಲಿ ಮೆರವಣಿಗೆ ಮೂಲಕ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮಂಡ್ಯಕ್ಕೆ ಆಗಮಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ರೈತರು ಕೇಂದ್ರ -ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ಸ್ಥಳಕ್ಕೆ ತೆರಳಿ ನಿರಂತರ ಧರಣಿಯಲ್ಲಿ ಭಾಗಿಯಾದ ರೈತ ಸಮೂಹ ಜಲಾಶಯಗಳಿಂದ ನೆರೆ ರಾಜ್ಯಕ್ಕೆ ನಿರಂತರ ನೀರು ಹರಿಸುವ ಮೂಲಕ ಅಣೆಕಟ್ಟೆಯನ್ನು ಬರಿದು ಮಾಡಲಾಗುತ್ತಿದೆ, ಈ ಕೂಡಲೇ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಪರಿಹಾರ ರೂಪಿಸಬೇಕು, ಸಂಕಷ್ಟ ಸನ್ನಿವೇಶದಲ್ಲಿ ಅನುಕೂಲವಾಗುವಂತೆ ಸಂಕಷ್ಟ ಸೂತ್ರ ರೂಪಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಇಂಡುವಾಳು ಗ್ರಾಮದ ರೈತ ಮುಖಂಡ ಚಂದ್ರಶೇಖರ್, ಇ.ಬಸವರಾಜು, ಕೃಷ್ಣೆಗೌಡ, ಉಮಾ ಶಂಕರ್, ದೇವೇಗೌಡ, ಸಿದ್ದಯ್ಯನ ಕೊಪ್ಪಲು ಗ್ರಾಮದ ರಮೇಶ್ ರಾಜು,ನಟೇಶ್,ತಮ್ಮೇಗೌಡ,ತಮ್ಮಣ್ಣ, ಶಿವಣ್ಣ, ನಾಗರಾಜು, ಸಿದ್ದರಾಮು, ನಂಜೇಗೌಡ, ಸುಂಡಹಳ್ಳಿಗ್ರಾಮದ ಶಿವ ಸ್ವಾಮಿ, ಸಿದ್ದಲಿಂಗಯ್ಯ, ದೇವರಾಜು, ಮೊಳೆ ಕೊಪ್ಪಲು ಗ್ರಾಮದ ಅಂದಾನಿ, ಬೆಟ್ಟೇಗೌಡ, ಶಂಕರ್, ಶಿವರಾಮ, ಹೊನ್ನಪ್ಪ, ಕಿರಗಂದೂರು ಗ್ರಾಮದ ಸಿದ್ದಯ್ಯ,ಕರಿಯಪ್ಪ,ಚಿಕ್ಕಯ್ಯ ಭಾಗವಹಿಸಿದ್ದರು.

ಚಾಮರಾಜನಗರದಲ್ಲಿಯೂ ನಿಲ್ಲದ ಕಾವೇರಿ ಹೋರಾಟ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು 37 ನೇ ದಿನದ ಪ್ರತಿಭಟನೆ ನಡೆಸಿದರು. ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದ ತನಕ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಹಾರೆ, ಪಿಕಾಸಿ, ಎಲ್ಕೊಟ್ಟು, ಬಾಂಡ್ಲಿ ಹಿಡಿದು ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಕೃಷಿ ಕಾಯಕಕ್ಕೆ ನೀರಿಲ್ಲದೇ ಗುದ್ದಲಿ, ಪಿಕಾಸಿ, ಸಲಿಕೆಗಳು ನಿಷ್ಪ್ರಯೋಜಕ ಆಗಿವೆ. ನಮ್ಮ ನೀರು ತಮಿಳುನಾಡಿಗೆ ಹರಿಯುತ್ತಿರುವುದರಿಂದ ರೈತರಿಗೆ ಕೆಲಸವಿಲ್ಲವಾಗಿದೆ. ಇದೇ ರೀತಿ ನೀರು ಹರಿಸುತ್ತಿದ್ದರೇ ಮುಂದಿನ ದಿನಗಳಲ್ಲಿ ರೈತರು ಗುಳೆ ಹೋಗಿ ಕೂಲಿ ಕೆಲಸ ಮಾಡಬೇಕಾಗುತ್ತದೆ. ರೈತರ ಹಿತವನ್ನು ರಾಜ್ಯ ಸರ್ಕಾರ ಬಲಿ ಕೊಡುತ್ತಿದೆ. ಕೇಂದ್ರ ಸರ್ಕಾರ ಮಾತನಾಡದೇ ಮೌನವಹಿಸಿ ನಾಟಕ ಆಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications