Get Updates
Get notified of breaking news, exclusive insights, and must-see stories!

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ, ಹುಷಾರ್!: ಮಾದೇಗೌಡ ಗುಡುಗು

ಮಂಡ್ಯ, ಮೇ 03: 'ನಮಗೇ ನೀರಿಲ್ಲ. ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಇದನ್ನೆಲ್ಲ ಸಂಸದರು ಕೇಂದ್ರಕ್ಕೂ ಮನವರಿಕೆ ಮಾಡಿಕೊಡಬೇಕು. ಒಂದು ವೇಳೆ ನಮ್ಮ ವಿರೋಧದ ನಡುವೆಯೂ ಸಿದ್ದರಾಮಯ್ಯ ಅವರ ಸರ್ಕಾರ ನೀರು ಬಿಟ್ಟರೆ ಜನ ನಿಮ್ಮ ರಕ್ತ ಕುಡಿತಾರೆ ಎಂದು ಮಾಜಿ ಸಂಸದ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ಅವರು ಎಚ್ಚರಿಸಿದ್ದಾರೆ.

ಕಾವೇರಿ ನದಿಯಿಂದ 4 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಸುಪ್ರೀಂಕೋರ್ಟ್ ಗುರುವಾರ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

'ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ನೀರು ಬಿಟ್ಟರೆ ಜನ ನಿಮ್ಮ ರಕ್ತ ಕುಡಿತಾರೆ' ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ. ಜಿ ಮಾದೇಗೌಡ ಸಿಎಂಗೆ ಎಚ್ಚರಿಕೆ ನೀಡಿದ್ದಾರೆ.

Cauvery Dispute : G Madegowda warns Siddaramaiah about releasing water to TN

ತಮಿಳುನಾಡು ಸರ್ಕಾರವು ಸುಳ್ಳು ಮಾಹಿತಿ ನೀಡಿದೆ. ಹೀಗಾಗಿ ಕೋರ್ಟ್ ಈ ತೀರ್ಪು ನೀಡಿದೆ. ಸರ್ಕಾರ ಕೋರ್ಟ್‌ಗೆ ಸಮಗ್ರ ಮಾಹಿತಿ ನೀಡಬೇಕು. ನೀರು ಬಿಡಲು ಸಾಧ್ಯವಿಲ್ಲ ಅನ್ನೋದನ್ನ ಮನದಟ್ಟು ಮಾಡಿಕೊಡಬೇಕು ಎಂದರು.

ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ: ಎಂಬಿ ಪಾಟೀಲ್
ಕಾವೇರಿ ನದಿ ನೀರು ಹಂಚಿಕೆ ಕರಡು ಬಗ್ಗೆರಚನೆ ಕೇಂದ್ರ ಸರ್ಕಾರಕ್ಕೂ ಎಚ್ಚರಿಕೆ ನೀಡಿರುವ ಸುಪ್ರೀಂ ಇನ್ನು 10 ದಿನಗಳೊಳಗೆ ನೀರು ಹಂಚಿಕೆ ಕರಡನ್ನು ಕರಡು ಪ್ರತಿಯನ್ನು ಸುಪ್ರಿಂಕೋರ್ಟ್‌ಗೆ ಸಲ್ಲಿಸಬೇಕೆಂದು ಕರಾವಕ್ಕಾಗಿ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+