ಕೆ.ಆರ್.ಎಸ್. ನೀರು: ಕಾವೇರಿ ಪ್ರವಾಹಕ್ಕೆ ಮಂಡ್ಯದಲ್ಲೂ ಆತಂಕದ ಸ್ಥಿತಿ
ಮಂಡ್ಯ, ಆಗಸ್ಟ್ 18: ಕೆ.ಆರ್.ಎಸ್. ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಕಾರಣ ಮಂಡ್ಯ ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಶ್ರೀರಂಗಪಟ್ಟಣ ತಾಲೂಕು ಮೇಳಾಪುರದಲ್ಲಿ ವಿದ್ಯುತ್ ವಿತರಣಾ ಉಪ ಕೇಂದ್ರ ಜಲಾವೃತಗೊಂಡಿದ್ದು, ಈ ಭಾಗದ ಹಳ್ಳಿಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ವಿದ್ಯುತ್ ಪೂರೈಕೆ ಇಲ್ಲದ ಕಾರಣ ಮೈಸೂರಿಗೆ ಕುಡಿಯುವ ನೀರು ಪೂರೈಕೆ ಸಹ ಸ್ಥಗಿತಗೊಂಡಿದೆ.

ಮೇಳಾಪುರದಿಂದ ಮೈಸೂರಿಗೆ ಕುಡಿಯುವ ನೀರು ಪೂರೈಸುವ ಪಂಪ್ಹೌಸ್ಗೆ ವಿದ್ಯುತ್ ಸರಬರಾಜು ಇಲ್ಲದ ಕಾರಣ ಮೈಸೂರಿಗೆ ಕುಡಿಯುವ ನೀರು ಸರಬರಾಜು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿಯ ರಂಗನತಿಟ್ಟು ಪಕ್ಷಿಧಾಮದಲ್ಲಿನ ಕಾವೇರಿ ನದಿಯೊಳಗೆ 35 ನಡುಗಡ್ಡೆಗಳು ಇದ್ದು, ಈ ಪೈಕಿ 15ಕ್ಕೂ ಹೆಚ್ಚು ಬಹುತೇಕ ಮುಳುಗಡೆಯಾಗಿವೆ. ಹೀಗಾಗಿ ಪಕ್ಷಿಧಾಮದಲ್ಲಿನ ಪಕ್ಷಿಗಳು ಎತ್ತರ ಮರಗಳನ್ನು ಆಶ್ರಯಿಸಿವೆ.
ನೆರೆ ಸಮಸ್ಯೆ ಎದುರಾಗದಂತೆ ನದಿಯಂಚಿನ ಪ್ರದೇಶಗಳಲ್ಲಿ ಜಿಲ್ಲಾಡಳಿತ ಎಚ್ಚರ ವಹಿಸಿದ್ದು, ನದಿಯಂಚಲ್ಲಿ ವಾಸವಿರುವ ಜನರನ್ನು ಎತ್ತರದ ಪ್ರದೇಶಗಳಿಗೆ ಕಳುಹಿಸಲು ಕ್ರಮವಹಿಸಲಾಗಿದೆ.

ಕಾವೇರಿ ನದಿಯಿಂದ ಸೃಷ್ಟಿಯಾದ ಪ್ರವಾಹಕ್ಕೆ ಮಳವಳ್ಳಿಯ ಬೆಳಕವಾಡಿ ಕಾಶಿವಿಶ್ವನಾಥ-ಆದಿಶಕ್ತಿಮಾರಮ್ಮ ದೇವಾಲಯ ಜಲಾವೃತವಾಗಿದ್ದು ನೀರು ಜಮೀನುಗಳಿಗೆ ನುಗ್ಗಿದ ಪರಿಣಾಮ ಬೆಳೆ ನಾಶವಾಗಿದೆ.
ಕೆಆರ್ಎಸ್ ಮತ್ತು ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ತಾಲೂಕಿನ ನದಿಪಾತ್ರದಲ್ಲಿರುವ ಬಿ.ಜಿ.ಪುರ ಹೋಬಳಿ ವ್ಯಾಪ್ತಿಯ ಸಾವಿರಾರು ಎಕರೆ ರೈತರು ಜಮೀನುಗಳು, ಬೆಳೆಗಳು ಹಾಗೂ ಬೆಳಕವಾಡಿಯ ಕಾಶಿವಿಶ್ವನಾಥ-ಆದಿಶಕ್ತಿ ಮಾರಮ್ಮ ದೇವಾಲಯಗಳು ಕಾವೇರಿ ನದಿಯಲ್ಲಿ ಮುಳುಗುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನ ಆತಂಕದಲ್ಲಿ ದಿನ ಕಳೆಯುವಂತಾಗಿದೆ.

ಬಿ.ಜಿ.ಪುರ ಹೋಬಳಿಯ ವ್ಯಾಪ್ತಿಯ ಬೆಳಕವಾಡಿ, ಹುಲ್ಲಂಬಳ್ಳಿ, ಪೂರಿಗಾಲಿ, ಜವನಗಹಳ್ಳಿ ವ್ಯಾಪ್ತಿಯಲ್ಲಿನ ರೈತರ ಸಾವಿರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿ ನಾಟಿ ಮಾಡಲು ಹಸನಾಗಿಸಿದ್ದ ಜಮೀನು ಭತ್ತದ ಒಟ್ಟಲು ಸಂಪೂರ್ಣ ಜಲಾವೃತಗೊಂಡು ನಾಶವಾಗುತ್ತಿರುವುದರಿಂದ ರೈತರು ಅತಂಕಕ್ಕೀಡಾಗಿದ್ದಾರೆ.
ಇದಲ್ಲದೆ ರೈತರು ಬೆಳೆದಿರುವ ಜೋಳ, ಅರಿಶಿಣ ಬೆಳೆಗಳಿಗೆ ನೀರು ನುಗ್ಗಿ ಬೆಳೆಗಳಿಗೆ ಹಾನಿಯಾಗಿದೆ. ತಾಲೂಕು ಮತ್ತು ಜಿಲ್ಲಾಡಳಿತ ಇನ್ನೂ ಭೇಟಿ ನೀಡದೆ ನಿರ್ಲಕ್ಷತೆ ವಹಿಸಿರುವ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಿ.ಜಿ.ಪುರ ಹೋಬಳಿ ವ್ಯಾಪ್ತಿಯಲ್ಲಿ ಕಾವೇರಿ ನದಿಯ ಪ್ರವಾಹದಿಂದ ಸಾವಿರಾರು ಎಕರೆ ಜಮೀನುಗಳಲ್ಲಿದ್ದ ಬೆಳೆಗಳು ಮುಳುಗಿ ನಾಶವಾಗಿದ್ದು, ಕೂಡಲೇ ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡಿ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ವಹಿಸುವಂತೆ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್.ಭರತ್ ರಾಜ್ ಆಗ್ರಹಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications