ನೀರು ಬಿಡದೆ ಜೈಲಿಗೆ ಹೋಗಲು ಸಿದ್ಧರಾಗಿ : ಮಾದೇಗೌಡ
ಮಂಡ್ಯ, ಸೆಪ್ಟೆಂಬರ್ 30 : ಕಾವೇರಿ ನೀರನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೈಲಿಗೆ ಹೋಗಲೂ ಸಿದ್ಧರಾಗಿರಬೇಕು. ಜೊತೆಯಲ್ಲಿ ನಾವೂ ಬರುತ್ತೇವೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ. ಮಾದೇಗೌಡ ಅವರು ಕರೆ ನೀಡಿದ್ದಾರೆ.
ಕಾವೇರಿ ಜಲಾಶಯಗಳಲ್ಲಿರುವ ನೀರು ಕುಡಿಯುವ ನೀರಿಗೆ ಮಾತ್ರ ಎಂದು ಜಂಟಿ ಅಧಿವೇಶನದಲ್ಲಿ ಒಕ್ಕೊರಲಿನಿಂದ ನಿರ್ಣಯ ಮಾಡಿ ಆಗಿದೆ. ಅದು ಇಡೀ ರಾಜ್ಯದ ಜನರ ಆದೇಶ. ಅದಕ್ಕೆ ವಿರುದ್ಧವಾಗಿ ನಡೆಯುವುದು ಬೇಡ ಎಂದು ಅವರು ಶುಕ್ರವಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾವೇರಿ ನೀರಿನ ವಿವಾದ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡಿಗೆ ಸದ್ಯ ನೀರು ಬಿಡದಿರುವ ನಿರ್ಧಾರ ಮಾಡಿದ್ದಾರೆ. ಆ ನಿರ್ಣಯಕ್ಕೆ ಅವರು ಬದ್ಧರಾಗಿದ್ದಾರೆ. ಒಮ್ಮೆ ನೀರು ಬಿಟ್ಟರೆ ಉಗ್ರ ಹೋರಾಟ ನಮಗೆ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು. [ಸುಪ್ರೀಂ ಆದೇಶದ ವಿರುದ್ಧ ಮಂಡ್ಯದಲ್ಲಿ ಬೊಗಸೆ ಚಳವಳಿ]

ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬಾರದು. ಅದು ಜಿಲ್ಲೆಯ ಜನರಿಗೆ ಮಾರಕ ತೀರ್ಮಾನ. ನೀರು ಬಿಡದೆ ಜೈಲಿಗೆ ಹೋಗೋಣ. ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸೋಣ. ನೀರು ಬಿಡುವ ತೀರ್ಮಾನ ಮಾಡಿ ಸುಖಾಸುಮ್ಮನೆ ಜನರನ್ನು ಕೆಣಕುವುದು ಬೇಡ ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು.
ನಮ್ಮ ನಿಲುವನ್ನೂ ಧಿಕ್ಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀರು ಬಿಡುಗಡೆ ಮಾಡಿದರೆ ಮುಂದೆ ಹೋರಾಟ ಇದ್ದೇ ಇದೆ, ಅದು ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಮಾದೇಗೌಡರು ಮಾಧ್ಯಮಗಳಿಗೆ ಹೇಳಿದರು. ಸುಪ್ರೀಂ ಆದೇಶ ಹೊರಬೀಳುತ್ತಿದ್ದಂತೆ ಮಂಡ್ಯದಲ್ಲಿ ಪ್ರತಿಭಟನೆ ತೀವ್ರವಾಗುತ್ತಿದೆ. ರೈತರೆಲ್ಲ ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. [ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕರ್ನಾಟಕಕ್ಕೆ ಆಘಾತ!]
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications