ಗಾಯದ ಮೇಲೆ ಸುಪ್ರೀಂ ಬರೆ, ಜೈಲ್ ಭರೋ ಕರೆ
ಮಂಡ್ಯ, ಸೆಪ್ಟೆಂಬರ್ 20 : ಸುಪ್ರೀಂ ಕೋರ್ಟ್ ಆದೇಶ ರಾಜ್ಯಕ್ಕೆ ಘನ ಘೋರ ಅನ್ಯಾಯವಾದ ವಿಷಯ ತಿಳಿಯುತ್ತಿದ್ದಂತೆ ಹೋರಾಟಗಾರರೊಂದಿಗೆ ಬೀದಿಗಿಳಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅವರು ಜೈಲ್ ಭರೋ ಚಳವಳಿಗೆ ಕರೆ ನೀಡಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಹಾಗೂ ತಮಿಳುನಾಡಿಗೆ ಸೆ.27ರವರೆಗೆ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿರುವುದರಿಂದ ಕನ್ನಡಿಗರು ಜೈಲ್ ಭರೋ ಚಳವಳಿಗೆ ಮುಂದಾಗಬೇಕು ಎಂದು ಮಂಗಳವಾರ ಸಂಜೆ ಕರೆ ನೀಡಿದರು. [ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದ್ರೆ, ಏನಾಗುತ್ತೆ?]
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿರುವುದು ಕರ್ನಾಟಕದ ಪಾಲಿಗೆ ಕೊನೆ ಮೊಳೆ ಹೊಡೆದಂತೆ ಆಗಿದೆ. ಇದರ ವಿರುದ್ಧ ಹೋರಾಟ ಮಾಡದೆ ಅನ್ಯ ಮಾರ್ಗಗಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ನಿಂದ ಆಗಿರುವ ಅನ್ಯಾಯ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಜನರೊಂದಿಗೆ ಸೇರಿ ಕಾವೇರಿ ಚಳವಳಿಯಲ್ಲಿ ಭಾಗಿಯಾಗಬೇಕು. ಈಗಲೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತರೆ ಜನರೇ ಒದ್ದು ಓಡಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. [ತಮಿಳುನಾಡು ಬೆಳೆಗಾಗಿ ಬೆಂಗಳೂರಿನ ಕುಡಿಯುವ ನೀರಿನ ತ್ಯಾಗ]

ಮನೆಗೊಬ್ಬರಂತೆ ಬನ್ನಿ
ಕಾವೇರಿ ನೀರನ್ನು ಉಳಿಸಿಕೊಳ್ಳಲು ಕಾವೇರಿ ಕಣಿವೆ ರೈತರು ಶತಾಯ ಗತಾಯ ಹೋರಾಟ ನಡೆಸಲೇಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಮನೆಗೊಬ್ಬರಂತೆ ಅದರಲ್ಲೂ ವಿದ್ಯಾರ್ಥಿಗಳು ಕಾವೇರಿ ಚಳವಳಿಯಲ್ಲಿ ಪಾಲ್ಗೊಳ್ಳುವಂತೆ ಗೌಡರು ಮನವಿ ಮಾಡಿದರು. [ಇಂಥವರಿಂದ ಕಾವೇರಿ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವೆ?]

ಬುಧವಾರ ಜನಪ್ರತಿನಿಧಿಗಳ ಸಭೆ
ಬುಧವಾರ (ಸೆ.21) ಜಿಲ್ಲೆಯ ಸಂಸದರು ಹಾಗೂ ಶಾಸಕರ ತುರ್ತು ಸಭೆ ಕರೆದಿದ್ದೇನೆ. ಮುಂದಿನ ಹೋರಾಟದ ರೂಪುರೇಷೆ ರಚಿಸುವ ಕುರಿತು ಚರ್ಚೆ ನಡೆಸಿ ಚಳವಳಿ ತೀವ್ರಗೊಳಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಂಡ್ಯ ಬಂದ್ ಕೂಡ ಇಲ್ಲ
ಮಂಡ್ಯ ಜಿಲ್ಲಾ ಬಂದ್ಗೆ ಕರೆ ನೀಡುವುದಿಲ್ಲ. ವರ್ತಕರು ಸ್ವಯಂ ಪ್ರೇರಿತರವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಚಳವಳಿಗೆ ಬೆಂಬಲ ನೀಡುವುದಾದರೆ ನೀಡಲಿ. ಬಲವಂತವಾಗಿ ಬಂದ್ ಮಾಡುವುದು ಬೇಡ ಎಂದು ಹೇಳಿದರು.

ಕೇಂದ್ರದ ದ್ವೇಷ ರಾಜಕಾರಣ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಕೇಂದ್ರ ದ್ವೇಷ ರಾಜಕಾರಣ ಮಾಡುತ್ತಿದೆ ಎನ್ನುತ್ತಾರೆ ಕಾವೇರಿ ಹೋರಾಟಗಾರರು. ಮಹದಾಯಿ, ಕಳಾಸ-ಬಂಡೂರಿ ವಿಚಾರದಲ್ಲಿಯೂ ಕೇಂದ್ರ-ನಮ್ಮ ಬಿಜೆಪಿ ಸಂಸದರ ನಡೆ ಇದೇ ರೀತಿಯಾಗಿತ್ತು ಎನ್ನುವುದನ್ನು ಜನರ ಆರೋಪ.

ಜನರ ಬಾಯಿಗೆ ಮಣ್ಣೇ ಗತಿ
ಪ್ರಧಾನಿ ಮತ್ತು ಸಂಸದರನ್ನು ನಂಬಿಕೊಂಡರೆ ಮಂಡ್ಯದ ಜನತೆಯ ಬಾಯಿಗೆ ಮಣ್ಣೇಗತಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಜನರು ಬಾಯಿಗೆ ಮಣ್ಣು ಹಾಕಿಕೊಂಡು ಮಂಗಳವಾರ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.

ಮಂಡ್ಯದ ಗಂಡು ಅಂಬರೀಶ್ ಎಲ್ಲಿ?
ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ಹೊರತುಪಡಿಸಿದರೆ, ಇನ್ಯಾವುದೇ ಶಾಸಕರು ಹೋರಾಟಗಳಲ್ಲಿ ಕಾಣಿಸಿಕೊಳ್ಳಲಿಲ್ಲ. ಸಂಸದ ಪುಟ್ಟರಾಜು ಒಂದೆರಡು ಬಾರಿ ರೋಡ್ ಶೋ ನಡೆಸಿ ಧರಣಿ ನಡೆಸಿದ್ದು ಬಿಟ್ಟರೆ, ಸಂಸದರ ಘನತೆಗೆ ತಕ್ಕಂತೆ ಗಂಭೀರ ಹೋರಾಟ-ಕಾರ್ಯಕ್ರಮಗಳನ್ನು ರೂಪಿಸಲಿಲ್ಲ. ಮಂಡ್ಯದ ಗಂಡು ಬಿರುದಾಂಕಿತ ಶಾಸಕ ಅಂಬರೀಷ್ ಸಹ ನಾಪತ್ತೆಯಾಗಿರುವುದು ಸಹ ಹೋರಾಟಗಾರರ ಬೇಸರಕ್ಕೆ ಕಾರಣವಾಗಿದೆ.

ಕಣ್ಣೀರುಗರೆದ ಹಿರಿಯ ತಾಯಿ
ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಬೇಕೆಂದು ಸುಪ್ರೀಂ ಕೋರ್ಟಿನಿಂದ ಆದೇಶ ಬರುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ತಾಯಿಯೊಬ್ಬರು ನೋವು ತಾಳಲಾರದೆ ಕಣ್ಣೀರುಗರೆದರು. ಕೃಷಿಯನ್ನೇ ನಂಬಿಕೊಂಡಿರುವ ನಮಗೆ ಉಳಿದಿರುವುದು ಕಣ್ಣೀರೊಂದೇ ಎಂದು ಗದ್ಗದಿತರಾದರು. ಜಯಲಲಿತಾ ಕೂಡ ಹುಟ್ಟಿದ್ದು ಈ ಜಿಲ್ಲೆಯಲ್ಲೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications