ವೈಭವದಿಂದ ನಡೆದ ಚಲುವನಾರಾಯಣಸ್ವಾಮಿ ತೊಟ್ಟಿಲಮಡು ಜಾತ್ರಾ ಮಹೋತ್ಸವ
ಮೇಲುಕೋಟೆ, ನವೆಂಬರ್ 23: ಶ್ರೀಚೆಲುವನಾರಾಯಣಸ್ವಾಮಿಯವರ ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ''ಅಷ್ಠತೀರ್ಥೋತ್ಸವ'' ಬುಧವಾರ ವೈಭವದಿಂದ ನೆರವೇರಿತು.
ರಾಜಮುಡಿ ಬ್ರಹ್ಮೋತ್ಸವದ ಆರನೇ ತಿರುನಾಳ್ ಮತ್ತು ದಶಮಿತಿಥಿ ಕೂಡಿದ ವಿಶೇಷ ದಿನದಂದು ಶ್ರೀಚೆಲುವನಾರಾಯಣನ ಬಂಗಾರದ ಪಾದುಕೆಗೆ ಪಂಚಕಲ್ಯಾಣಿ, ವೈಕುಂಠಗಂಗೆ ಹಾಗೂ ಎಲ್ಲಾ ಎಂಟು ತೀರ್ಥಗಳಲ್ಲಿ ವೇದಘೋಷದೊಂದಿಗೆ ಅಭಿಷೇಕ ನೆರವೇರಿಸಲಾಯಿತು.

ರಾಜ್ಯದ ವಿವಿಧಭಾಗಗಳು ಮತ್ತು ಆಂದ್ರಪ್ರದೇಶದಿಂದ ಭಕ್ತರು ಹಾಗೂ ಮಕ್ಕಳಭಾಗ್ಯ ಅಪೇಕ್ಷಿಸಿ ಮಡಿಲು ತುಂಬಿ ಹರಕೆ ಹೊತ್ತ ನೂರಾರು ದಂಪತಿಗಳು, ಕಂಕಣಭಾಗ್ಯ ಅಪೇಕ್ಷಿತರು, ಪಾದುಕೆಯ ಪಲ್ಲಕ್ಕಿಯೊಡನೆ 20ಕಿಮಿಗೂ ಹೆಚ್ಚು ಗಿರಿಶಿಖರಗಳ ದಾರಿಯನ್ನು ಕ್ರಮಿಸಿ ಅಷ್ಠತೀರ್ಥಗಳಲ್ಲಿ ಪವಿತ್ರಸ್ನಾನ ಮಾಡಿದರು. ಇಡೀ ದಿನವೇದಪಾರಾಯಣ ನಡೆದರೆ ರಾತ್ರಿ ಶ್ರೀಯೋಗಾನರಸಿಂಹಸ್ವಾಮಿ ಗಿರಿಪ್ರದಕ್ಷಿಣೆವೇಳೆ ವಿಷ್ಣುಸಹಸ್ರನಾಮ ಪಾರಾಯಣಮಾಡಲಾಯಿತು.
ಅಷ್ಠತೀರ್ಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಬೆಳಗಿನಜಾವ 5-30ಕ್ಕೆ ನಿತ್ಯಪೂಜಾಕೈಂಕರ್ಯಗಳನ್ನು ಆರಂಭಿಸಲಾಯಿತು. 8-30ಕ್ಕೆ ವೇದಾಂತದೇಶಿಕರ ಸನ್ನಿಧಿಗೆ ಪಾದುಕೆಯಪಲ್ಲಕ್ಕಿಯ ಮಂಟಪೋತ್ಸವ ನೆರವೇರಿತು. 9ಗಂಟೆಗೆ ಆಚಾರ್ಯರಾಮಾನುಜರನ್ನೊಳಗೊಂಡು ವಜ್ರಖಚಿತರಾಜಮುಡಿ ಉತ್ಸವ ಧರಿಸಿದ ಚೆಲುವನಾರಾಯಣಸ್ವಾಮಿಯ ಉತ್ಸವ ಕಲ್ಯಾಣಿಗೆ ತಲುಪಿತು. ಅಲ್ಲಿನ ಗಜೇಂದ್ರವರದನ ಸನ್ನಿಧಿಯ ಬಳಿ ಸ್ವಾಮಿಯ ಪಾದುಕೆಗೆ ಲೋಕಲ್ಯಾರ್ಥವಾಗಿ ಹಾಗೂ ಹರಕೆಹೊತ್ತಭಕ್ತರ ಇಷ್ಠಾರ್ಥನೆರವೇರಲಿ ಎಂದು ಪ್ರಾರ್ಥಿಸಿ ವಿಶೇಷ ಆರಾಧನೆಮಾಡಿ ಕಲ್ಯಾಣಿಯಲ್ಲಿ ಅಭಿಷೇಕ ಮಾಡಲಾಯಿತು. ಸಾವಿರಾರು ಭಕ್ತರು ಕಲ್ಯಾಣಿಯಲ್ಲಿ ಪವಿತ್ರಸ್ನಾನಮಾಡಿದ ನಂತರ ಅಷ್ಠತೀರ್ಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಗಿರಿಶಿಖರಗಳ ಮಧ್ಯೆ ಇರುವೆಯ ಸಾಲಿನಂತೆ ಸಾಲಾಗಿ ಸಾಗುತ್ತಿದ್ದ ಭಕ್ತಸಮೂಹ ದೃಶ್ಯವೈಭವ ಸೃಷ್ಠಿಸಿ ಭಕ್ತಿಯ ಚಿಲುಮೆ ಉಕ್ಕಿಸುತ್ತಿತ್ತು. ಪ್ರಥಮವಾಗಿ ವೇದಪುಷ್ಕರಣಿಯಲ್ಲಿ ನಂತರ 500 ಅಡಿ ಎತ್ತರದಲ್ಲಿರುವ ರಾಮ ಸೀತೆಗಾಗಿ ಬಾಣಬಿಟ್ಟು ತೀರ್ಥ ತರಿಸಿದ ಧನುಷ್ಕೋಟಿಯಲ್ಲಿ ಸ್ನಾನ ಮಾಡಿದರು. ನಂತರ ಬೆಟ್ಟ ಇಳಿದು ಬೃಹತ್ ಬೆಟ್ಟದ ಸಾಲುಗಳಲ್ಲಿ ಸಾಗಿ ಯಾದವಾತೀರ್ಥ, ದರ್ಭತೀರ್ಥ, ಪಲಾಶತೀರ್ಥ ಪದ್ಮತೀರ್ಥದಲ್ಲಿ ಅಭಿಷೇಕದಲ್ಲಿ ಪಾಲ್ಗೊಂಡರು ಪಲಾಶತೀರ್ಥದಲ್ಲಿ ಯತಿರಾಜದಾಸರ್ ಗುರುಪೀಠದಿಂದ ಭಕ್ತರಿಗೆ ಹಾಲು ಹಣ್ಣು ವಿತರಿಸಲಾಯಿತು.
ಮದ್ಯಾಹ್ನ 3 ಗಂಟೆಗೆ ನರಸಿಂಹ ಮತ್ತು ನಾರಾಯಣ ತೀರ್ಥದಲ್ಲಿ ಅಭಿಷೇಕ ನೆರವೇರಿತು ಸಂಜೆ 5ಗಂಟೆ ಸುಮಾರಿಗೆ ತೊಟ್ಟಿಲಮಡು ವೈಕುಂಠಗಂಗೆಯಲ್ಲಿ ಸಮಾರೋಪ ಅಭಿಷೇಕ ನೆರವೇರಿತು. ಈ ವೇಳೆ ಮೇಲುಕೋಟೆಯ ವಿಶಿಷ್ಠ ಪ್ರಸಾದವಾದ ಕದಂಬ ಮತ್ತು ಮೊಸರನ್ನವನ್ನು ಜಾತ್ರೆಗೆ ಬಂದಿದ್ದ ಸಾವಿರಾರು ಭಕ್ತರಿಗೆ ನೀಡಲಾಯಿತು, ವಿವಿಧ ಜನಾಂಗದವತಿಯಿಂದ ಪ್ರಸಾದವಿತರಣೆ ಸೇವೆ ಅನೂಚಾನ ಸಂಪ್ರದಾಯದಂತೆ ಏರ್ಪಡಿಸಲಾಗಿತ್ತು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್ ಮಹೇಶ್ ವಿಶೇಷವಾಗಿ ಶ್ರಮಿಸಿ ಅಷ್ಠತೀರ್ಥಗಳು ಹಾಗೂ ಪಲ್ಲಕ್ಕಿ ಸಾಗುವ ಮಾರ್ಗದಲ್ಲಿ ಶುಚಿತ್ವಮಾಡಿದ್ದರೆ. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಜೇಶ್ವರ್ ಮತ್ತು ಜನಪ್ರತಿನಿಧಿಗಳ ತಂಡ ಆಸಕ್ತಿವಹಿಸಿ ತೊಟ್ಟಿಲಮಡುಬಳಿ, ಕುಡಿಯುವ ನೀರು, ಸ್ವಚ್ಚತೆ ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿತ್ತು.
ಮೇಲುಕೋಟೆ ಇನ್ಸ್ಪೆಕ್ಟರ್ ಸಿದ್ಧಪ್ಪ ಪೊಲೀಸ್ ಭದ್ರತೆ ಮಾಡಿದ್ದರು, ಉತ್ಸವದ ಧಾರ್ಮಿಕ ಕೈಂಕರ್ಯಗಳು ಸಮಯಕ್ಕೆ ಸರಿಯಾಗಿ ನಡೆಯಲು ದೇವಾಲಯದ ಪಾರುಪತ್ತೇಗಾರರುಗಳಾದ ಸ್ಥಾನೀಕಂ ಶ್ರೀನಿವಾಸನರಸಿಂಹನ್ಗುರೂಜಿ ಮತ್ತು ಪರಿಚಾರಕ ಎಂ.ಎನ್ ಪಾರ್ಥಸಾರಥಿ ಸಿಬ್ಬಂದಿಗಳ ಸಹಕಾರದಲ್ಲಿ ಶ್ರಮಿಸಿದ್ದರು. ರಾಜಮುಡಿ ಬ್ರಹ್ಮೋತ್ಸವ 25ರಶನಿವಾರ ತೀರ್ಥಸ್ನಾನ ನೆರವೇರುವುದರೊಂದಿಗೆ ಮುಕ್ತಾಯವಾಗಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications