ಮೃತ ರೈತ ಸುರೇಶ್ ಮನೆಗೆ ಭೇಟಿ ನೀಡಿ 5 ಲಕ್ಷ ಪರಿಹಾರ ನೀಡಿದ ಸಿಎಂ
Recommended Video
ಮಂಡ್ಯ, ಜೂನ್ 18: ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಸುರೇಶ್ ಮನೆಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದರು. ಮೃತ ರೈತನ ಮನೆಯ ಪರಿಸ್ಥಿತಿ ಕುರಿತು ಕುಟುಂಬದವರಿಂದ ಚರ್ಚಿಸಿ, ಸುರೇಶ್ ಮಗ ಚಂದ್ರಶೇಖರ್ಗೆ ಉದ್ಯೋಗ ನೀಡುವುದಾಗಿ, ಮಗಳು ಸುವರ್ಣ ವಿದ್ಯಾಭ್ಯಾಸಕ್ಕೆ ನೆರವು ನೀಡುವುದಾಗಿ ಭರವಸೆಯನ್ನು ನೀಡಿದರು.
ತನ್ನ ಅಂತ್ಯಕ್ರಿಯೆಗೆ ಸಿಎಂ ಅನ್ನು ಆಹ್ವಾನಿಸಿ ಮಂಡ್ಯ ರೈತ ಆತ್ಮಹತ್ಯೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸುರೇಶ್ ಕೆರೆಗಳನ್ನು ತುಂಬಿಸಿ ಎಂದು ಮನವಿ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ 213 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದೆ. ಆತುರ ಪಟ್ಟು ಯಾವುದೇ ರೈತರು ಆತ್ಮಹತ್ಯೆಯ ದಾರಿ ಹಿಡಿಯಬಾರದು ಎಂದು ಮನವಿ ಮಾಡಿದರು.
ಯಡಿಯೂರಪ್ಪರವರ ಗ್ರಾಮವಾಸ್ತವ್ಯದ ಕುರಿತ ಟೀಕೆಗೆ ಪ್ರತಿಕ್ರಿಯಿಸಿ, ನಾನು ಹಳ್ಳಿಯ ಜನರಿಗೆ ಧೈರ್ಯ ತುಂಬಲು ಗ್ರಾಮ ವಾಸ್ತವ್ಯ ಮಾಡಲು ಮುಂದಾಗಿದ್ದೇನೆ. ಗಿಮಿಕ್ ಮಾಡಲು ಅಲ್ಲ. ಗ್ರಾಮ ವಾಸ್ತವ್ಯ ಬೇಡ, ಬರ ಪರಿಹಾರ ಅಧ್ಯಯನ ಮಾಡಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸ್ಟಾರ್ ಹೋಟೆಲ್ ಅನ್ನೂ ನೋಡಿದ್ದೇನೆ. ಸಣ್ಣ ಹಳ್ಳಿಯಲ್ಲೂ ವಾಸ್ತವ್ಯ ಹೂಡಿದ್ದೇನೆ ಎಂದು ತಿರುಗೇಟು ನೀಡಿದರು.
ಕೆರೆ ತುಂಬಿಸುವಂತೆ ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದ ರೈತನ ಮನವಿಗೆ ಸ್ಪಂದಿಸಿ ಅಘಲಯ ಕೆರೆಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು.