Sahitya Sammelana: ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ವಿರುದ್ಧ ಕೇಳಿಬಂತು ದೊಡ್ಡ ಆರೋಪ
ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ಈ ಸಮ್ಮೇಳನವನ್ನು ರಾಜಕೀಯ ವೇದಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಆರೋಪಿಸಿದ್ದಾರೆ.
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನು ಸ್ಮೃತಿ, ತೆರಿಗೆ ವಂಚನೆ, ಗ್ಯಾರಂಟಿ ಯೋಜನೆಗಳ ಪ್ರಚಾರ, ಹಿಂದಿ ಹೇರಿಕೆ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡಿದ್ದಾರೆ. ಈ ಮೂಲಕ ಸಾಹಿತ್ಯ ವೇದಿಕೆಯನ್ನು ರಾಜಕೀಯ ವೇದಿಕೆಯಾಗಿ ಮಾಡಿಕೊಂಡಿದ್ದು ಇವರ ಘನ ಸಾಧನೆ ಎಂದು ಟೀಕಿಸಿದ್ದಾರೆ.

ಕನ್ನಡ ಕಾವಲು ಸಮಿತಿಯ ಮೊದಲನೇ ಅಧ್ಯಕ್ಷರು, ವ್ಯಾಕರಣದ ಮೇಷ್ಟ್ರು ಹಾಕಿಕೊಡುವ ಮೇಲ್ಪಂಕ್ತಿಯಿದು. ತಾಯಿ ಭುವನೇಶ್ವರಿಯು ಇವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೃಹತ್ ವೇದಿಕೆಯಲ್ಲಿ ಚಾಲನೆ ನೀಡಿ, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಸಿದ್ದರಾಮಯ್ಯ ಶುಭ ಹಾರೈಸಿದ್ದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ, ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮುಂದಿನ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಅವರು ಹೇಳಿದ್ದರು.

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡದ ನೆಲ. ಜಗತ್ತಿನ ಯಾವುದೇ ಮೂಲೆಯಿಂದ ಯಾವುದೇ ಭಾಷಿಗರು ಮಂಡ್ಯಕ್ಕೆ ಬಂದರೂ ಒಂದು ತಿಂಗಳೊಳಗೆ ಅವರಿಗೆ ಕನ್ನಡ ಕಲಿಸುವಂತಹ ಭಾಷಾಭಿಮಾನ ಮತ್ತು ದಿಟ್ಟತನ ಮಂಡ್ಯದ ಜನರದ್ದು ಎಂದು ಸಿಎಂ ಭಾಷಣ ಮಾಡಿದ್ದರು.
ದ್ವೇಷ ಬಿತ್ತಲು ಬಂದವರನ್ನು ಮಂಡ್ಯ ಜನ ಓಡಿಸಿದ್ದಾರೆ. ಧ್ವಜ ಸತ್ಯಾಗ್ರಹದ ಮೂಲಕ ಪೂರ್ವಿಕರು ಬಿತ್ತಿದ್ದ ಜಾತ್ಯತೀತ ಗುಣ ಇಲ್ಲಿ ಈಗಲೂ ಇನ್ನೂ ಉಳಿದಿದೆ ಎಂಬುದನ್ನ ಮಂಡ್ಯದ ಜನತೆ ತೋರಿಸಿಕೊಟ್ಟಿದ್ದಾರೆ ಎಂದು ಸಿಎಂ ಶ್ಲಾಘಿಸಿದರು. ರಾಜ್ಯಕ್ಕೆ ತೆರಿಗೆ ಮೊತ್ತ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ, ರಾಷ್ಟ್ರಭಾಷೆಯ ಹೆಸರಿನಲ್ಲಿ ಹಿಂದಿ ಹೇರಿಕೆ ಆಗುತ್ತಿದೆ ಎಂದೂ ಅವರು ವೇದಿಕೆ ಮೇಲೆ ಅಸಮಾಧಾನ ಹೊರಹಾಕಿದರು.

ಸಿದ್ಧಾಂತಕ್ಕಿಂತ ನಾವು ಬದುಕುವ ವಿಧಾನ ಮುಖ್ಯ. ಸಾಹಿತ್ಯಕ್ಕೆ ಯಾವುದು ಜನಪರ ನಿಲುವು, ಯಾವುದು ಜನವಿರೋಧಿ ಎಂಬುದನ್ನು ನಿರ್ಧರಿಸುವುದು ಸಾಧ್ಯವಾಗಬೇಕು. ಈ ಮಂಡ್ಯ ಅಪ್ಪಟ ಕನ್ನಡದ ನೆಲವಾಗಿದ್ದು, ದೇಶದ ಯಾವ ಭಾಗದಿಂದ ಇಲ್ಲಿಗೆ ಬಂದವರಿಗೂ ಕನ್ನಡ ಕಲಿಸುವ ಸಾಮರ್ಥ್ಯವಿದೆ. ಇನ್ನು ಹಲವು ಪ್ರಕಾರದ ಸಾಹಿತ್ಯ ರಚನೆಯಾದ ನೆಲದಲ್ಲಿ ವೈಚಾರಿಕತೆ ಮೂಲವಾಗಿದೆ ಎಂದು ಕೊಂಡಾಡಿದ್ದರು.
ಆದರೆ, ಸಿಎಂ ಸಿದ್ದರಾಮಯ್ಯ ಅವರು ಈ ಮೂಲ ಕಾರ್ಯಕ್ರಮದ ಉದ್ದೇಶಕ್ಕಿಂತ ಇನ್ನಿತರೆ ವಿಚಾರಗಳನ್ನು ಪ್ರಸ್ತಾಪಿಸಿ, ರಾಜಕೀಯ ಭಾಷಣ ಮಾಡುವ ಮೂಲಕ ಈ ವೇದಿಕೆಗೆ ಅವಮಾನ ಮಾಡಿದ್ದಾರೆ ಎಂದು ಖಂಡನೆ ವ್ಯಕ್ತವಾಗಿದೆ. ಯತ್ನಾಳ್ ಕೂಡ ಇದನ್ನು ಖಂಡಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications