ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸಿಎಂ ಆಸರೆ!
ಬೆಂಗಳೂರು, ಆಗಸ್ಟ್ 21: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಣೆ ಮಾಡಿದರು. ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Recommended Video
ಮಂಡ್ಯ ಸಂಸದೆ ಸುಮಲತಾ ಅವರು ಕೂಡ ಬಾಗಿನ ಅರ್ಪಣೆ ಕಾರ್ಯಕ್ರಮಮದಲ್ಲಿ ಭಾಗವಹಿಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಣೆಕಟ್ಟಿನ ಮೇಲಿಂದ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡುವಾಗ ಸಂಸದೆ ಸುಮಲತಾ ಅವರು ಕೂಡ ಪಕ್ಕದಲ್ಲಿ ನಿಂತು ಬಾಗಿನ ಅರ್ಪಣೆ ಮಾಡಿದರು.
ಈ ಬಾರಿ ನಾಡಹಬ್ಬ ದಸರಾ ಸರಳವಾಗಿ ಆಚರಣೆ: ಸಿಎಂ ಯಡಿಯೂರಪ್ಪ
ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಸುಮಲತಾ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡುವಾಗ ಆಯ ತಪ್ಪಬಾರದು ಎಂಬ ಉದ್ದೇಶದಿಂದ ಆಸರೆ ಹಿಡಿದಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಸಿಎಂ ಯಡಿಯೂರಪ್ಪ ಅವರು ಆಸರೆಗೆ ಹಿಡಿದಿದ್ದು, ಅಪಾರ್ಥಕ್ಕೆ ಎಡೆಮಾಡಿಕೊಡಬಾರದು ಎಂದು ತಕ್ಷಣವೇ ಸುಮಲತಾ ಅವರು ಸಿಎಂ ಗಮನಕ್ಕೆ ತಂದರು. ಕೂಡಲೇ ಎಚ್ಚೆತ್ತುಕೊಂಡ ಸಿಎಂ, ಸುಮಲತಾ ಅವರಿಗೆ ಕೈಮುಗಿದರು. ಇದು ಅಚಾತುರ್ಯದ ಘಟನೆಯೊ, ಆಕಸ್ಮಿಕವಾದ ಘಟನೆಯೊ ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಘಟನೆಯ ಬಗ್ಗೆ ಒಬ್ಬರೂ ನಾಯಕರು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿದೆ.