ಶಾಸಕ-ನಟ ಅಂಬರೀಶ್ ಮೇಲೆ ಲೋಕಾಯುಕ್ತಕ್ಕೆ ದೂರು
ಮಂಡ್ಯ, ಮೇ 31: ಶಾಸಕ-ನಟ ಅಂಬರೀಶ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ವಿಧಾನಸಭಾ ಕಲಾಪಕ್ಕೆ ಹಾಜರಾಗುವುದಿಲ್ಲ, ಕ್ಷೇತ್ರದ ಜನರ ಸಮಸ್ಯೆಯನ್ನು ಕೇಳೋದಿಲ್ಲ ಎಂದು ಆರೋಪಿಸಿ, ಮಂಡ್ಯ ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷ ಬಿಎಸ್ ಗೌಡ ಮಂಗಳವಾರ ದೂರು ನೀಡಿದ್ದಾರೆ.
ಕ್ಷೇತ್ರದ ಜನರು ನೀಡಿದ ಅವಕಾಶದ ಉಪಯೋಗ ಮಾಡದೆ ಅಂಬರೀಶ್ ಬೇಜವಾಬ್ದಾರಿ ತೋರಿದ್ದಾರೆ. ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದಲೇ ಕ್ಷೇತ್ರದ ಕಡೆಗೆ ತಲೆ ಹಾಕುತ್ತಿಲ್ಲ. ವಿಧಾನಸೌಧ ಕಲಾಪಕ್ಕೂ ಹಾಜರಾಗುತ್ತಿಲ್ಲ. ಅಂಬರೀಶ್ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹ ಮಾಡಿದ್ದಾರೆ.[ಅಂಬರೀಶ್ ರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಮನವಿ]

ಅಂಬರೀಶ್ ಅವರಿಗೆ ವಿಧಾನಸಭೆ ಅಧ್ಯಕ್ಷರು ನೋಟಿಸ್ ಕೊಟ್ಟಿದ್ದರು. ಆರೋಗ್ಯ ಸಮಸ್ಯೆ ಇರುವುದರಿಂದ ಕಲಾಪಕ್ಕೆ ಬಂದಿಲ್ಲ. ಇನ್ನು ವಿಧಾನಸೌಧದಲ್ಲಿ ಇರುವ ಏಸಿಯಿಂದ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎಂಬ ಉತ್ತರ ನೀಡಿದ್ದರು. ಕಾರಿನಲ್ಲಿ ಸಂಚರಿಸುವಾಗ ಅಂಬರೀಶ್ ಸದಾ ಏಸಿ ಹಾಕಿಕೊಂಡಿರುತ್ತಾರೆ. ಅದರಿಂದ ಆರೋಗ್ಯ ಸಮಸ್ಯೆ ಆಗೋದಿಲ್ವ ಎಂದು ದೂರುದಾರ ಬಿಎಸ್ ಗೌಡ ಪ್ರಶ್ನಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications