ಅಂಬಿ ಹುಟ್ಟೂರು ದೊಡ್ಡರಸಿನಕೆರೆ ಕಾಳಿಕಾಂಭ ಯುವಕರ ಬಳಗದ ಕನಸು ನನಸಾಗಲೇ ಇಲ್ಲ
ಮಂಡ್ಯ, ನವೆಂಬರ್.26: ಅಂಬರೀಶ್ ಹುಟ್ಟಿದ ಊರು ದೊಡ್ಡರಸಿನಕೆರೆ ಗ್ರಾಮದಲ್ಲೀಗ ನೀರವ ಮೌನ ಮನೆ ಮಾಡಿದೆ. ಅವರು ಅಲ್ಲಿ ಹುಟ್ಟಿದರೂ ಬೆಳೆದಿದ್ದೆಲ್ಲ ಮೈಸೂರು. ಮುಂದೆ ಬದುಕು ಕಟ್ಟಿಕೊಂಡಿದ್ದು ಬೆಂಗಳೂರಿನಲ್ಲಿ. ಆದರೂ ಹುಟ್ಟೂರಿನ ನಂಟು ಮಾತ್ರ ಬಿಟ್ಟಿರಲಿಲ್ಲ.
ಇತ್ತೀಚೆಗಷ್ಟೆ ಹುಟ್ಟಿದ ಊರಿನಲ್ಲಿದ್ದ ತಾತನ ಕಾಲದ ಆಸ್ತಿಯನ್ನು ಪುತ್ರನ ಹೆಸರಿಗೆ ಬರೆದಿದ್ದರು. ಅಲ್ಲದೆ ಜಮೀನಿನಲ್ಲಿ ಭತ್ತ ಬೆಳೆದಿದ್ದರು. ಇದೆಲ್ಲವನ್ನು ನೆನಪಿಸಿಕೊಳ್ಳುವ ಗ್ರಾಮಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಈ ನಡುವೆ ದೊಡ್ಡರಸಿನಕೆರೆ ಗ್ರಾಮದ ಕಾಳಿಕಾಂಭ ಹೆಬ್ಬಾಗಿಲು ಹಾಗೂ ಅಂಬಿ ವೃತ್ತದಲ್ಲಿ ಅಂಬರೀಶ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ ಗ್ರಾಮಸ್ಥರು ಅಂಬರೀಶ್ ಅವರ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.

ಅಂಬರೀಶ್ 13 ವರ್ಷಗಳ ಹಿಂದೆ ತಮ್ಮ ಪೂರ್ವಿಕರರು ನಿರ್ಮಿಸಿದ್ದ ಮನೆಯನ್ನು ಕೆಡವಿ ತಮ್ಮ ತಂದೆ ತಾಯಿ ಎಂ. ಹುಚ್ಚೇಗೌಡ ಹಾಗೂ ಟಿ.ಸಿ. ಪದ್ಮಮ್ಮ ಅವರ ಸ್ಮರಣಾರ್ಥ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ನಂತರ ಚುನಾವಣೆ ಸಂದರ್ಭ ತಮ್ಮ ಊರಿಗೆ ಬಂದು ಮತ ಚಲಾಯಿಸಿ ಹೋಗುತ್ತಿದ್ದರು.
ಅಂಬರೀಶ್ ಹೆಸರಿನಲ್ಲಿದ್ದ 6.36 ಜಮೀನಿನಲ್ಲಿ ಅವರ ಸಂಬಂಧಿಕರು ಬೆಳೆ ಬೆಳೆಯುತ್ತಿದ್ದಾರೆ. ಅನಾರೋಗ್ಯ ಕಾರಣ ಈಗ್ಗೆ ಮೂರು ತಿಂಗಳ ಹಿಂದೆ ತಮ್ಮ ಮಗನಿಗೆ ಆ ಜಮೀನುಗಳನ್ನು ವರ್ಗಾಯಿಸಿದ್ದರು

ತಮ್ಮದೇ ಊರಿನ ಹುಡುಗ ನಟ, ರಾಜಕೀಯ ನಾಯಕನಾಗಿ ಬೆಳೆದ ಪರಿಯನ್ನು ಹತ್ತಿರದಿಂದ ನೋಡಿದ ಗ್ರಾಮದ ಕಾಳಿಕಾಂಭ ಯುವಕರ ಬಳಗವು ಅಂಬರೀಶ್ ಅವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸುವ ಕನಸು ಹೊಂದಿತ್ತು. ಆದರೆ ಅದು ಮಾತ್ರ ನನಸಾಗಲೇ ಇಲ್ಲ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications