ಪ್ರಚಾರ ಸಭೆಯಲ್ಲಿ ಸಿಟ್ಟಿಗೆದ್ದು ಮೈಕ್ ಬಿಸಾಡಿದ ಚೆಲುವರಾಯಸ್ವಾಮಿ
Recommended Video

ಮಂಡ್ಯ, ಅಕ್ಟೋಬರ್ 29: ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಿಇಲ್ಲ ಎಂಬುದಕ್ಕೆ ಇಂದು ಮತ್ತೊಂದು ಉದಾಹರಣೆ ಸಿಕ್ಕಿದೆ. ಜೆಡಿಎಸ್ ಅಭ್ಯರ್ಥಿಗೆ ನಾವು ಮತ ಹಾಕುವುದಿಲ್ಲವೆಂದು ಕೈ ಕಾರ್ಯಕರ್ತರು ಹೇಳಿದ್ದಾರೆ.
ಮಂಡ್ಯ ಲೋಕಸಭೆ ಉಪಚುನಾವಣೆಗೆ ಮೈತ್ರಿ ಸರ್ಕಾರದ ಅಭ್ಯರ್ಥಿ ಜೆಡಿಎಸ್ನ ಶಿವರಾಮೇಗೌಡ ಅವರು ಕಾಂಗ್ರೆಸ್ ಕಾರ್ಯಕರ್ತರ ಮತ ಕೇಳಲು ಕಾರ್ಯರ್ತರ ಸಭೆಗೆ ಆಗಮಿಸಿದ್ದಾಗ. ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಮೇಲೆಯೇ ಹರಿಹಾಯ್ದಿದ್ದಾರೆ.
ಶಿವರಾಮೇಗೌಡ ಅವರು ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಆಗಮಿಸಿದ್ದಾಗ. ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಪರಾಜಿತ ಎಂಎಲ್ಎ ಅಭ್ಯರ್ಥಿ, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ಮೈಕ್ ಬಿಸಾಡಿ ತಮ್ಮ ಸಿಟ್ಟು ವ್ಯಕ್ತಪಡಿಸಿದರು.

ಕಾಂಗ್ರೆಸ್ಗೆ ಮತ ಹಾಕಬೇಕಾ?
ಚೆಲುವರಾಯಸ್ವಾಮಿ ಸಿಟ್ಟಾಗಿ ಹೇಳಿದರೂ ಸಹ ಕಾರ್ಯಕರ್ತರ ಕೋಪ ತಣ್ಣಗಾಗಲಿಲ್ಲ. ಜೆಡಿಎಸ್ ಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕೇಸುಗಳನ್ನು ದಾಖಲಿಸಿದೆ ಅಂತಹವರ ಪರ ಮತ ಹಾಕಬೇಕಾ ಎಂದು ಕೂಗಾಡಿದರು.

ಜೆಡಿಎಸ್ ವಿರುದ್ಧ ಆರೋಪ ಶುರುವಿಟ್ಟ ಚೆಲುವರಾಯಸ್ವಾಮಿ
ಆರಂಭದಲ್ಲಿ ಮೈತ್ರಿ ಧರ್ಮ ಪಾಲಿಸಬೇಕು ಎಂದು ಸಮಾಧಾನದ ಆತುಗಳನ್ನಾಡುತ್ತಿದ್ದ ಚೆಲುವರಾಯಸ್ವಾಮಿ ಅವರು ಆ ನಂತರ ತಾವೂ ಸಹ ದೇವೇಗೌಡ ಅವರ ವಿರುದ್ಧ ಮಾತನಾಡಲು ಶುರುವಿಟ್ಟರು.

ದೇವೇಗೌಡರು ತುಳಿಯಲು ಯತ್ನಿಸಿದ್ದರು
ರಾಜಕೀಯದ ಆರಂಭದ ದಿನಗಳಲ್ಲಿ ದೇವೇಗೌಡರು ನನ್ನ ರಾಜಕೀಯ ಬೆಳವಣಿಗೆಗೆ ಅಡ್ಡಗಾಲು ಹಾಕಿದ್ದರು. ಆದರೂ ಸಹ ನಾನು ರಾಜಕೀಯದಲ್ಲಿ ಬೆಳೆದೆ. ಜೆಡಿಎಸ್ ಮೈತ್ರಿ ಧರ್ಮವನ್ನು ಪಾಲಿಸುತ್ತಿಲ್ಲ, ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಗಬೇಕಾದ ಗೌರವ ಧಕ್ಕುತ್ತಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಎದುರಲ್ಲೇ ಜೆಡಿಎಸ್ ಮೇಲೆ ದೂರುಗಳನ್ನು ಹೇಳಿದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ
ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಗುತ್ತಿರುವ ಅನ್ಯಾಯ ಕುರಿತಂತೆ ಉಪಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯ ಅವರು ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ ಅಲ್ಲಿಯವರೆಗೂ ಸಮಾಧಾನದಿಂದ ಇರಬೇಕು ಎಂದು ಅವರು ಕೊನೆಗೆ ಮಾಡಿದರು.

'ಮೈತ್ರಿ ಧರ್ಮ ಪಾಲಿಸುತ್ತೇನೆ'
ಕೊನೆಗೆ ಮಾತನಾಡಿದ ಶಿವರಾಮೇಗೌಡ ಅವರು, ಮೈತ್ರಿ ಧರ್ಮ ಪಾಲಿಸುವುದು ನಮ್ಮ ಧರ್ಮ, ಚುನಾವಣೆ ಮುಗಿದನಂತರ ಮೈತ್ರಿ ಧರ್ಮದಂತೆ ನಡೆದುಕೊಳ್ಳಲು ನಾವು ಬದ್ಧ ಎಂದು ಶಿವರಾಮೇಗೌಡ ವಚನ ನೀಡಿದರು.

ಪ್ರಚಾರಕ್ಕೆ ಬಾರದ ಅಂಬರೀಶ್
ತಮ್ಮ ಪರ ಪ್ರಚಾರಕ್ಕೆ ಬಾರದ ಅಂಬರೀಶ್ ಅವರನ್ನು ಶಿವರಾಮೇಗೌಡ ಅವರು ಈ ಸಂದರ್ಭದಲ್ಲಿ ಕುಟುಕಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷದ ಮುಖಂಡರು ಮನವಿ ಮಾಡಿದರೂ ಸಹ ಅಂಬರೀಶ್ ಅವರು ಜೆಡಿಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬರಲಿಲ್ಲವೆಂದು ಹೇಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications