ಮಂಡ್ಯದಲ್ಲಿ ಪೇದೆಗೆ ಕೊರೊನಾ; ಸನ್ನಡತೆಯ ಕೈದಿಗಳ ಬಿಡುಗಡೆ?
ಮಂಡ್ಯ, ಮೇ 23: ಕೊರೊನಾ ಸೋಂಕು ಕೈದಿಗಳಿಗೆ ಮತ್ತು ಜೈಲು ಸಿಬ್ಬಂದಿಗೆ ಹರಡುವುದನ್ನು ತಪ್ಪಿಸುವ ಸಲುವಾಗಿ ಏಳು ವರ್ಷದೊಳಗೆ ಶಿಕ್ಷೆಗೊಳಗಾಗಿರುವ ಕೈದಿಗಳನ್ನು ಕಾನೂನಿನಡಿ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿನ್ನೆ ಜಿಲ್ಲಾ ಪೊಲೀಸ್ ವತಿಯಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, "ಕೊರೊನಾ ಸೋಂಕು ಇರುವ ಕಾರಣ ಹೊಸದಾಗಿ ವಿಚಾರಣಾಧೀನ ಕೈದಿಗಳು ಕಾರಾಗೃಹಕ್ಕೆ ಬರುವ ಹಿನ್ನಲೆಯಲ್ಲಿ ಹಾಲಿ ಕೈದಿಗಳು ಮತ್ತು ಪೊಲೀಸರಿಗೆ ಸೋಂಕು ತಗಲುವ ಭೀತಿ ಇರುವುದರಿಂದ 5 ರಿಂದ 7 ವರ್ಷಗಳೊಳಗೆ ಶಿಕ್ಷೆಗೊಳಗಾಗಿರುವ ಕೈದಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ.
ಕೊಲೆ ಪ್ರಯತ್ನ, ಮಾರಾಕಾಸ್ತ್ರಗಳಿಂದ ಹಲ್ಲೆ ಹಾಗೂ ಆಕಸ್ಮಿಕ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿರುವ ಖೈದಿಗಳು ಏಳು ವರ್ಷಗಳೊಳಗೆ ಶಿಕ್ಷೆಗೊಳಗಾಗಿದ್ದರೆ, ಈ ಕೈದಿಗಳು ಈಗಾಗಲೇ 4 ರಿಂದ 5 ವರ್ಷ ಪೂರೈಸಿರುತ್ತಾರೆ. ಅಂತಹವರನ್ನು ಸನ್ನಡತೆ ಆಧಾರದ ಮೇಲೆ ಕಾನೂನು ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕಾನೂನು ಇಲಾಖೆಯ ಅನುಮತಿ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೆ.ಆರ್. ಪೇಟೆ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಕ್ವಾರಂಟೈನ್ ನಲ್ಲಿರುವ ಎಲ್ಲ ಪೊಲೀಸ್ ಸಿಬ್ಬಂದಿಗೆ ಗಂಟಲದ್ರವ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ 967 ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ 490 ಮಂದಿಗೆ ಗಂಟಲದ್ರವ ಪರೀಕ್ಷೆಗೊಳಪಡಿಸಲಾಗಿದ್ದು, ಉಳಿದವರಿಗೆ ಶೀಘ್ರ ಪರೀಕ್ಷೆ ಮಾಡಲಾಗುವುದು ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications