MP Sumalatha: ಹೊಸ ಕಾರ್ಖಾನೆ ಹೆಸರಿನಲ್ಲಿ ಭ್ರಷ್ಟಾಚಾರ: ಸುಮಲತಾ ಕಿಡಿ
ಮಂಡ್ಯ ಮಾರ್ಚ್ 1: ಮೈಷುಗರ್ ಕಾರ್ಖಾನೆ ಪುನಶ್ಚೇತನದ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿದ್ದಾರೆ. ಇದೀಗ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣದ ಹೆಸರಿನಲ್ಲಿ ಮತ್ತೊಂದು ರೀತಿಯ ಭ್ರಷ್ಟಾಚಾರ ನಡೆಸಲು ಮುಂದಾಗಿರುವಂತೆ ಕಂಡುಬರುತ್ತಿದೆ ಎಂದು ಸಂಸದೆ ಸುಮಲತಾ ಆತಂಕ ವ್ಯಕ್ತಪಡಿಸಿದರು.
ಈಗಿರುವ ಮೈಷುಗರ್ ಕಾರ್ಖಾನೆ ಯಂತ್ರೋಪಕರಣಗಳು ಸರಿಯಾಗಿಲ್ಲ. ಹೊಸ ಯಂತ್ರೋಪಕರಣಗಳನ್ನು ತರಲು ಹಣ ಬೇಕಿದೆ. ಇನ್ನೂ ಕಾರ್ಮಿಕರಿಗೆ ವಿಆರ್ಎಸ್ ಹಣ ಬಾಕಿ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಇದೆಲ್ಲವನ್ನೂ ಸರಿಪಡಿಸುವ ಬಗ್ಗೆ ಆಲೋಚನೆ ಮಾಡದೆ ಹೊಸ ಕಾರ್ಖಾನೆ ನಿರ್ಮಿಸಲು ಹೊರಡಿರುವುದರ ಹಿಂದೆ ಏನೇನು ನಡೆಯಬಹುದು ಎಂಬುದನ್ನು ಊಹಿಸಿಕೊಳ್ಳಿ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದರು.

ಹೊಸ ಕಾರ್ಖಾನೆ ಆರಂಭಿಸಿದ ಮೇಲೆ ಈ ಕಾರ್ಖಾನೆಯನ್ನು ಏನು ಮಾಡುತ್ತಾರೆ. ಮಹಾರಾಜರ ಕೊಡುಗೆ ಎಂದು ಬೀಗ ಹಾಕಿ ಇಟ್ಟುಕೊಳ್ಳುತ್ತಾರಾ ಎಂದು ಪ್ರಶ್ನಿಸಿದ ಸುಮಲತಾ, ರಸ್ತೆ, ಸೇತುವೆ, ಕುಡಿಯುವ ನೀಎಉ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಶಾಸಕರು ಪೇಚಾಡುತ್ತಿದ್ದಾರೆ. ಆ ಸಮಸ್ಯೆಗಳಿಗೆ ಪರಿಹಾರ ಕೊಡದೆ 500 ಕೋಟಿ ರೂಪಾಯಿ ಹಣದಲ್ಲಿ ಹೊಸ ಕಾರ್ಖಾನೆ ಮಾಡುತ್ತೇವೆ ಎಂದು ಹೇಳುವುದರಲ್ಲಿ ಅರ್ಥವಿದೆಯೇ ಎಂದು ಪ್ರಶ್ನಿಸಿದರು.
ಮೊದಲುಈಗಿರುವ ಕಾರ್ಖಾನೆಯ ಯಂತ್ರೋಪಕರಣಗಳನ್ನು ದುರಸ್ತಿಪಡಿಸಿ ಅಥವಾ ಬದಲಾಯಿಸಿ ಕಾರ್ಯಖಾನೆ ಸುಗಮವಾಗಿ ಕಾರ್ಚಾಚರಣೆ ಮಾಡುವಂತೆ ಮಾಡಲಿ. ಕಾರ್ಖಾನೆಗಿರುವ ಸಾಲ, ಕಾರ್ಮಿಕರ ವಿಆರ್ಎಸ್ ಹಣವನ್ನೆಲ್ಲಾ ತೀರಿಸಲಿ. ಆನಂತರ ಹೊಸ ಕಾರ್ಖಾನೆ ಬಗ್ಗೆ ಆಲೋಚಿಸಲಿ ಎಂದರು.
ಸಂಘಟನೆಗಳಿಂದ ಸ್ವಾರ್ಥ ಹೋರಾಟ:
ಚಾಲನೆಗಳ್ಳದೆ ನಿಂತಿದ್ದ ಮೈಷುಗರ್ಕಾರ್ಖಾನೆ ಆರಂಭಿಸಲು ಕರ್ನಾಟಕದಿಂದ ದೆಹಲಿವರೆಗೆ ಹೋರಾಟ ಮಾಡಿದೆ. ಅವರ ಸ್ವಾರ್ಥ ಹಾಗೂ ದೂರದೃಷ್ಟಿಯ ಲೋಪದಿಂದ ಕಾರ್ಖಾನೆಗೆ ಈ ದರ್ಗತಿ ಬದಗಿಬಂದಿದೆ. ಕಾರ್ಖಾನೆ ಉಳಿಸಲು ನನ್ನ ಐದು ವರ್ಷಗಳ ಹೋರಾಟಕ್ಕೆ ಬೆಲೆಯೇ ಇಲ್ಲದಂತೆ ಮಾಡಿದರು. ಅವರು ಮಾಡಿದ ದ್ವಾರ್ಥ ರಾಜಕಾರಣದಿಂದ ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ಟೀಕಿಸಿದರು.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕಾರ್ಖಾನೆ ಪುನಶ್ಚೇತನಕ್ಕೆ ನೂರಾರು ಕೋಟಿ ಹಣ ಕೊಟ್ಟರು. ಅದೆಲ್ಲಾ ಏನಾಯಿತು. ಆರ್ಥಿಕ ಶಿಸ್ತು ಇಲ್ಲದೆ ದುರುಪಯೋಗವಾಯಿತು. ಇದಕ್ಕೆ ಜವಬ್ದಾರರು ಯಾರು ಎಂದು ಪ್ರಶ್ನಿಸಿದ ಸುಮಲತಾ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ನಾನು ಅವರನ್ನು ಭೇಟಿಯಾಗಿ ಕಾರ್ಖಾನೆ ಪುನಶ್ಚೇತನದ ಬಗ್ಗೆ ಚರ್ಚಿಸಿದಾಗ ಸರ್ಕಾರದಿಂದ ಹಣ ಕೊಡುವುದು ಬೇಡ. ಅದು ಸ್ವಾರ್ಥ ಮತ್ತು ಭ್ರಷ್ಟಾಚಾರಕ್ಕೆ ಬಳಕೆಯಾಗುತ್ತದೆ. ಒ ಆಂಡ್ ಎಂ ಮೂಲಕ ಆರಂಭಿಸೋಣ ಎಂದಾಗ ಸ್ಥಳೀಯ ಸಂಘಟನೆಗಳು ವಿರೋದ ವ್ಯಕ್ತಪಡಿಸಿ ಸರ್ಕಾರವೇ ನಡೆಸಬೇಕು. ಸರ್ಕಾರವೇ ಉಳಿಸಬೇಕು ಎಂದು ಸ್ವಾರ್ಥ ಉದ್ದೇಶದಿಂದ ಪ್ರತಿಭಟನೆ ನಡೆಸಿದರು. ಆ ಪ್ರತಿಭಟನೆಯ ಹಿಂದೆ ಅವರಿಗೆ ಏನೇನು ಲಾಭಗಳಿತ್ತೋ ನನಗತೆ ಗೊತ್ತಿಲ್ಲ. ನಾನು ಪ್ರತಿ ಹೆಜ್ಜೆ ಇಟ್ಟಾಗಲೆಲ್ಲಾ ಅಡ್ಡಗಾಲು ಹಾಕುತ್ತಿದ್ದರು. ಈಗ ಅವರೆಲ್ಲಾ ಎಲ್ಲಿದ್ದಾರೆ. ಬಂದು ಉತ್ತರ ಕೊಡಲಿ ಎಂದು ಖಾರವಾಗಿ ಹೇಳಿದರು. ಯಡಿಯೂರಪ್ಪನವರು ಅಧಿಕಾರದಲ್ಲಿದ್ದಾಗಲೇ ಓ ಅಂಡ್ ಎಂಗೆ ಒಪ್ಪಿಗೆ ಸೂಚಿಸಿದ್ದರೆ ನಾಲ್ಕು ವರ್ಷಗಳಲ್ಲಿ ಎಷ್ಟು ಸುಧಾರಣೆಯಾಗುತ್ತಿತ್ತು ಇದರಿಂದ ನಿಜವಾಯಿಯೂ ಸಂಕಷ್ಟ ಅನುಭವಿಸಿದವರು ರೈತರು ಎಂದು ಬೇಸರದಿಂದ ನುಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications