ಲೋಕಸಭಾ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ; ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
ಬಹು ನಿರೀಕ್ಷಿತ ಲೋಕಸಭಾ ಚುನಾವಣಾ ಫಲಿತಾಂಶ ಮಂಗಳವಾರ (ಜೂ.4) ಪ್ರಕಟಗೊಳ್ಳಲಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸ್ಪರ್ಧೆಯಿಂದ ಮಂಡ್ಯ ಲೋಕಸಭಾ ಕ್ಷೇತ್ರ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಅದೇ ರೀತಿ ಫಲಿತಾಂಶ ಏನಾಗಬಹುದೆಂಬ ಬಗ್ಗೆ ಜನರಲ್ಲಿ ತೀವ್ರ ಕುತೂಹಲವನ್ನೂ ಕಾಯ್ದುಕೊಂಡಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಳ್ಳುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ 2024ರಲ್ಲಿ ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ. ಈ ಫಲಿತಾಂಶದಿಂದ ಎಚ್.ಡಿ.ಕುಮಾರಸ್ವಾಮಿ ಹಣೆಬರಹದೊಂದಿಗೆ ಜಿಲ್ಲೆಯೊಳಗೆ ಜೆಡಿಎಸ್ ಭವಿಷ್ಯವೂ ಅಂತಿಮವಾಗಿ ನಿರ್ಧಾರವಾಗಲಿದೆ.
ಮತ ಎಣಿಕೆ ಸ್ಥಳಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರುವುದರಿಂದ ಮಂಡ್ಯ ವಿವಿ ಆವರಣದೊಳಗೆ ಮರದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಪ್ರತಿ ಸುತ್ತುಗಳ ಫಲಿತಾಂಶದ ವಿವರವನ್ನು ಧ್ವನಿವರ್ಧಕದ ಮುಖಾಂತರ ಘೋಷಿಸಲಾಗುತ್ತದೆ.
112 ಟೇಬಲ್ಗಳಲ್ಲಿ ಮತ ಎಣಿಕೆ
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು ಕೊಠಡಿಗಳಂತೆ ಒಟ್ಟು 16 ಕೊಠಡಿಗಳಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್ಗಳಂತೆ 112 ಟೇಬಲ್ಗಳಲ್ಲಿ ಇವಿಎಂ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ರೌಂಡ್ಗೆ 14 ಇವಿಎಂ ಯಂತ್ರಗಳನ್ನು ಮತ ಎಣಿಕೆಗೆ ಕೈಗೆತ್ತಿಕೊಳ್ಳಲಾಗುತ್ತದೆ. ನೆಲಮಹಡಿಯ ಎರಡು 102 ಮತ್ತು 107 ಕೊಠಡಿಗಳಲ್ಲಿ ಅಂಚೆ ಮತಪತ್ರ ಮತ್ತು ಇಟಿಪಿಬಿಎಸ್ ಮತಪತ್ರಗಳ ಮತ ಎಣಿಕೆ 11 ಟೇಬಲ್ಗಳಲ್ಲಿ ನಡೆಯಲಿದೆ.
ಜಿಲ್ಲೆಯಲ್ಲಿ ಒಟ್ಟು 7465 ಮಂದಿ ಅಂಚೆ ಮತ್ತು ಇಟಿಪಿಬಿಎಸ್ ಮತಗಳು ಚಲಾವಣೆಗೊಂಡಿವೆ. ಇವುಗಳಲ್ಲಿ ಒಂದು ಟೇಬಲ್ಗೆ 650 ರಿಂದ 680 ಮತ ಪತ್ರಗಳನ್ನು ನೀಡಲಾಗುವುದು. ಜೂ.4ರಂದು ಬೆಳಗ್ಗೆ 6.30ಕ್ಕೆ ಮೊದಲು ಅಂಚೆ ಮತಪತ್ರದ ಕೊಠಡಿಯನ್ನು ತೆರೆದು ಎಣಿಕೆ ಮಾಡಲಾಗುವುದು. ನಂತರ ಇತರೆ ಕೊಠಡಿಗಳನ್ನು ತೆರೆದು 8 ಗಂಟೆಯಿಂದ ಇವಿಎಂ ಯಂತ್ರದ ಮತಗಳನ್ನು ಎಣಿಕೆ ಪರಿಗಣಿಸಲಾಗುವುದು.
ಪ್ರತಿ ಕೊಠಡಿಗೂ ಇಂಟರ್ನೆಟ್
ಎಂಟು ವಿಧಾನಸಭಾ ಕ್ಷೇತ್ರದ ಕೊಠಡಿಗಳಿಗೆ ತಲಾ ಒಬ್ಬರಂತೆ ಜಿಲ್ಲಾ ಸಮಾಲೋಚಕರು, ತಾಲ್ಲೂಕು ಕಚೇರಿಯ ಐಟಿ ಸಮಾಲೋಕರು, ಡಾಟಾ ಎಂಟ್ರಿ ಆಪರೇಟರ್ಗಳನ್ನು ನೇಮಿಸಲಾಗಿದೆ. ಪ್ರತಿ ಎಣಿಕೆ ಕೊಠಡಿಯಲ್ಲಿಯೂ ಬಿಎಸ್ಎನ್ಎಲ್ ಹಾಗೂ ಜಿಯೋ ಕಂಪೆನಿಯ ಇಂಟರ್ನೆಟ್ ಸೌಲಭ್ಯ, ಮೂರು ಕಂಪ್ಯೂಟರ್ ಮತ್ತು ಒಂದು ಪ್ರಿಂಟರ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ನಿರಂತರ ಸಮರ್ಪಕ ವಿದ್ಯುತ್ ಸಂಪರ್ಕ ಹಾಗೂ 123 ವೆಬ್ ಕ್ಯಾಸ್ಟಿಂಗ್ ಕ್ಯಾಮೆರಾ ಸೇರಿದಂತೆ ಒಂದೊಂದು ಕೊಠಡಿಗೂ 360 ಡಿಗ್ರಿ ತಿರುಗುವ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ನಿಷೇಧಾಜ್ಞೆ ಜಾರಿ
ಮತ ಎಣಿಕೆ ಪ್ರಕ್ರಿಯೆಯು ಶಾಂತಿಯುತವಾಗಿ ನಡೆಸುವ ಸಲುವಾಗಿ ಮಂಗಳವಾರ (ಜೂನ್ 4) ಬೆಳಗ್ಗೆ 6 ರಿಂದ ಜೂನ್ 5ರ ಬೆಳಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಐವರಿಗಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಿದೆ. ಅಲ್ಲದೆ, ಮತ ಎಣಿಕೆ ಕೇಂದ್ರದ 100 ಮೀಟರ್ ಅಂತರದಲ್ಲಿ ಎಲ್ಲ ರೀತಿಯ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮೊಬೈಲ್, ಕಾರ್ಡ್ಲೇಸ್ ಫೋನ್, ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದೆ.
ಮತ ಎಣಿಕೆ ಸುತ್ತ ಬಂದೋಬಸ್ತ್
ಮತ ಎಣಿಕೆ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಎಎಸ್ಪಿ-2, ಡಿಎಸ್ಪಿ-3, ಪಿಐ-13, ಪಿಎಸ್ಐ-32, ಎಎಸ್ಐ-51, ಎಚ್ಸಿಪಿಸಿ-337, ಡಬ್ಲ್ಯೂಪಿಸಿ-30, ಡಿಎಆರ್-40, ಕೆಎಸ್ಆರ್ಪಿ-30 ಒಟ್ಟು 539 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ









Click it and Unblock the Notifications