ಮಂಡ್ಯದಲ್ಲಿ ದಂಪತಿ ಬರ್ಬರ ಹತ್ಯೆ; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಮಂಡ್ಯ, ಜುಲೈ 19: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್. ಪೇಟೆ ತಾಲ್ಲೂಕು ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.
ರಾಯಸಮುದ್ರದ ಗುಂಡಣ್ಣ (50) ಮತ್ತು ಲಲಿತಮ್ಮ (45) ಕೊಲೆಯಾದ ದಂಪತಿ. ಎರಡು ಮೂರು ದಿನಗಳಿಂದ ಇವರ ಮನೆಗೆ ಬೀಗ ಹಾಕಲಾಗಿತ್ತು. ಮನೆಯಿಂದ ವಾಸನೆ ಬರುತ್ತಿದ್ದುದರಿಂದ ಅನುಮಾನಗೊಂಡ ಅಕ್ಕಪಕ್ಕದವರು ಕಿಟಕಿಯಲ್ಲಿ ಇಣುಕಿ ನೋಡಿದಾಗ ದಂಪತಿ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಪಟ್ಟಣದ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಕುಟುಂಬ ಕಲಹ; ಪುತ್ತೂರಿನಲ್ಲಿ ಪತಿಯಿಂದ ಮಹಿಳೆ ಬರ್ಬರ ಹತ್ಯೆ
ಸುಮಾರು ಆರು ದಿನಗಳ ಹಿಂದೆಯೇ ಕೊಲೆ ಮಾಡಿ ಬೀಗ ಹಾಕಿಕೊಂಡು ಹೋಗಲಾಗಿದೆ. ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಕೆ.ಆರ.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Comments
English summary
Couple murdered by unknown in rayasamudra of KR pet taluk.Gundanna (50) and Lalitamma (45) are the murdered couple.
Story first published: Friday, July 19, 2019, 13:17 [IST]