ಕನಗನಮರಡಿ ಬಸ್ ದುರಂತ: ಚಾಲಕನಿಗೆ ಷರತ್ತು ಬದ್ಧ ಜಾಮೀನು
ಮೈಸೂರು, ಡಿಸೆಂಬರ್ 11: ಕನಗನಮರಡಿ ಬಸ್ ದುರಂತದಲ್ಲಿ 9 ಮಕ್ಕಳು ಸೇರಿದಂತೆ 30 ಮಂದಿಯ ಸಾವಿಗೆ ಕಾರಣನಾದ ಚಾಲಕನಿಗೆ ಪಟ್ಟಣದ ಸಿವಿಲ್ ನ್ಯಾಯಾಲಯ ಬಂಧನವಾದ ಕೇವಲ ಒಂದು ದಿನದೊಳಗೆ ಷರತ್ತು ಬದ್ಧ ಜಾಮೀನು ನೀಡಿದೆ.
ದುರಂತ ನಡೆದ ಬಳಿಕ ಆರೋಪಿ ಶಿವಣ್ಣ ತಲೆಮರೆಸಿಕೊಂಡಿದ್ದ.ದುರಂತಕ್ಕೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿತ್ತು. ಹೀಗಾಗಿ ಚಾಲಕನ ಬಂಧನಕ್ಕಾಗಿ ತೀವ್ರ ಶೋಧ ನಡೆಸಲಾಗಿತ್ತು. ಅಷ್ಟೇ ಅಲ್ಲ, ಸಿಪಿಐ ದೀಪಕ್ ನೇತೃತ್ವದ ಪೊಲೀಸ್ ತಂಡ ಬೆಂಗಳೂರಿಗೆ ತೆರಳಿತ್ತು.
ಆನಂತರ ಚಾಲಕನನ್ನು ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಬೆಸ್ತರಕೊಪ್ಪಲಿನ ಸಂಬಂಧಿಕರೊಬ್ಬರ ಮನೆಯಲ್ಲಿ ಭಾನುವಾರ ಬೆಳಗ್ಗೆ 4ಕ್ಕೆ ಬಂಧಿಸಿ, ಪಾಂಡವಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಯಿತು.

ಆಗ ಚಾಲಕ "ನನ್ನ ಅಜಾಗರೂಕತೆಯಿಂದಲೇ ಬಸ್ ನಾಲೆಗೆ ಉರುಳಿತು. ಕನಗನಮರಡಿ ವಿ.ಸಿ. ನಾಲೆಯ ಬಳಿ ಬಸ್ ಚಾಲನೆ ಮಾಡುತ್ತಿದ್ದಾಗ ಎದುರಾದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆಯುತ್ತದೆ ಎಂದುಕೊಂಡು ಸ್ವಲ್ಪ ಎಡಕ್ಕೆ ತಿರುಗಿಸಿದಾಗ ನಾಲೆಗೆ ಉರುಳಿ ಬಿದ್ದಿತು. ನಾಲೆಯಿಂದ ಪಾರಾಗಿ ಬರಲು ಅಲ್ಲಿದ್ದ ರೈತರೊಬ್ಬರು ಸಹಾಯ ಮಾಡಿದರು. ಭಯಗೊಂಡ ನಾನು ಅಲ್ಲಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ತಲುಪಿದೆ" ಎಂದು ಶಿವಣ್ಣ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದರು.
ಇದರೊಟ್ಟಿಗೆ ಪ್ರಕರಣದ ಪ್ರಮುಖ ಆರೋಪಿ ಎಂದೇ ಚಾಲಕ ಶಿವಣ್ಣನನ್ನು ಗುರುತಿಸಲಾಯಿತು. ಆದರೆ ಕೇವಲ 24 ಗಂಟೆಯೊಳಗೆ ಆರೋಪಿಗೆ ಪಾಂಡವಪುರ ಜೆ ಎಂ ಎಫ್ ಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದೆ ಕೆಲವೇ ಗಂಟೆಗಳಲ್ಲಿ ಶಿವಣ್ಣನನ್ನು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಬಿಡುಗಡೆ ಮಾಡಿ ಕಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ್ ಬಿಸೇ ರೊಟ್ಟಿ ಆದೇಶ ನೀಡಿದ್ದಾರೆ.
ಕನಗನಮರಡಿ ಬಸ್ ದುರಂತದ ನಂತರ ಸರ್ಕಾರ ಎಚ್ಚತ್ತುಕೊಂಡಿದ್ದು, ನಾಲೆಗೆ ತಡೆಗೋಡೆಯನ್ನು ನಿರ್ಮಿಸಿದೆ. ಅಷ್ಟೇ ಅಲ್ಲ, ಅಪಘಾತ ನಡೆದ ಮಾರನೇ ದಿನದಿಂದಲೇ ಈ ಭಾಗದಲ್ಲಿ ಸರ್ಕಾರಿ ಬಸ್ ಸಂಚಾರವನ್ನು ಆರಂಭಿಸಿದೆ.. ಸದ್ಯ ಗ್ರಾಮದ ಮಾರ್ಗವಾಗಿ ದಿನಕ್ಕೆ ನಾಲ್ಕು ಬಾರಿ ಸರ್ಕಾರಿ ಬಸ್ ಸಂಚರಿಸುತ್ತಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications