ಮಂಡ್ಯ ರಾಜಕಾರಣ : ಎಚ್ಡಿಕೆ ತಂತ್ರಕ್ಕೆ, ಸಿ.ಪಿ.ಯೋಗೇಶ್ವರ ಪ್ರತಿತಂತ್ರ!
Recommended Video

ಮಂಡ್ಯ, ನವೆಂಬರ್ 21 : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ರಾಜಕೀಯ ರಂಗೇರುತ್ತಿದೆ. ಕೆ.ಎಸ್.ನಂಜುಂಡೇಗೌಡ ಅವರಿಗೆ ಬಿಜೆಪಿ ಸೇರುವಂತೆ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರು ಆಹ್ವಾನ ನೀಡಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ತೊರೆದಿರುವ ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೆ ಸಿ.ಪಿ.ಯೋಗೇಶ್ವರ ಅವರು ಪ್ರತಿತಂತ್ರ ರೂಪಿಸಿದ್ದಾರೆ.
ಶ್ರೀರಂಗಪಟ್ಟಣ ಕ್ಷೇತ್ರ ಸದ್ಯ ಜೆಡಿಎಸ್ ವಶದಲ್ಲಿದೆ. ಕ್ಷೇತ್ರದ ಶಾಸಕರು ರಮೇಶ ಬಂಡಿಸಿದ್ದೇಗೌಡ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ರವೀಂದ್ರ ಶ್ರೀಕಂಠಯ್ಯ ಅವರಿಗೆ ಆಹ್ವಾನ ನೀಡಿದ ಬಳಿಕ ಸಿ.ಪಿ.ಯೋಗೇಶ್ವರ ಕೆ.ಎಸ್.ನಂಜುಂಡೇಗೌಡ ಅವರನ್ನು ಬಿಜೆಪಿಗೆ ಆಹ್ವಾನಿಸಿರುವುದು ತಾಲೂಕಿನ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಈ ಬೆಳವಣಿಗೆ ಕುರಿತು ಮಾತನಾಡಿದ ಸಿ.ಪಿ.ಯೋಗೇಶ್ವರ ಅವರು, 'ಶ್ರೀರಂಗಪಟ್ಟಣ ಕ್ಷೇತ್ರದಿಂದ ಅವರಿಗೆ ಟಿಕೆಟ್ ಕೊಡುವ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.

ಯಾರು ನಂಜುಂಡೇಗೌಡ?
ಕೆ.ಎಸ್.ನಂಜುಂಡೇಗೌಡರು ರೈತ ಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ. ಸತತ ಆರು ಬಾರಿ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ. 2018ರ ಚುನಾವಣೆಗೆ ಅವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದರು
ಕೆ.ಎಸ್.ನಂಜುಂಡೇಗೌಡರು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಎಚ್.ಡಿ.ದೇವೇಗೌಡರ ಜೊತೆಗೂ ಅವರು ಮಾತುಕತೆ ನಡೆಸಿದ್ದರು. ಆದರೆ, ಎಚ್.ಡಿ.ಕುಮಾರಸ್ವಾಮಿ ಅವರು ರವೀಂದ್ರ ಶ್ರೀಕಂಠಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸುವ ಮೂಲಕ ರಾಜಕೀಯ ದಾಳ ಉರುಳಿಸಿದ್ದಾರೆ.

ಬಿಜೆಪಿಗೆ ಆಹ್ವಾನಿಸಿದ ಸಿ.ಪಿ.ಯೋಗೇಶ್ವರ
ಬಿಜೆಪಿ ಸೇರಿರುವ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರಿಗೆ ಅಕ್ಕಪಕ್ಕದ ಜಿಲ್ಲೆಗಳ ಬಗ್ಗೆಯೂ ಗಮನಹರಿಸುವಂತೆ ಸೂಚನೆ ನೀಡಲಾಗಿದೆ. ಆದ್ದರಿಂದ, ಅವರು ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದಾಗ, ಕೆ.ಎಸ್.ನಂಜುಂಡೇಗೌಡ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

ರಮೇಶ ಬಂಡಿಸಿದ್ದೇಗೌಡ ನಡೆ ಏನು?
ಶ್ರೀರಂಗಪಟ್ಟಣ ಕ್ಷೇತ್ರದ ಸದ್ಯದ ಶಾಸಕರು ರಮೇಶ ಬಂಡಿಸಿದ್ದೇಗೌಡ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ರವೀಂದ್ರ ಶ್ರೀಕಂಠಯ್ಯ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ. ರಮೇಶ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ.

ನಿರ್ಧಾರ ಪ್ರಕಟಿಸಿಲ್ಲ
'ಕೆ.ಎಸ್.ನಂಜುಂಡೇಗೌಡ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದೇವೆ. ಅವರು ಬೆಂಬಲಿಗರ ಜೊತೆ ಮಾತುಕತೆ ನಡೆಸಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ' ಎಂದು ಸಿ.ಪಿ.ಯೋಗೇಶ್ವರ ಹೇಳಿದ್ದಾರೆ.
-
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications