ಶಿಂಷಾನದಿಯಲ್ಲಿ ಮೊಸಳೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ
ಮಳವಳ್ಳಿ, ಜುಲೈ 29: ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಬಳಿ ಹರಿಯುವ ಶಿಂಷಾ ನದಿಯ ಕೊಟ್ಲೆ ಬಳಿ ಭಾರಿ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷಗೊಂಡಿದ್ದು, ಇದನ್ನು ಕಂಡ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆ ಆಗಿರುವುದರಿಂದ ಮೊಸಳೆ ಆಹಾರ ಅರಸಿಕೊಂಡು ಬಂದಿರಬಹುದು ಎಂದು ಸಂಶಯಿಸಲಾಗಿದೆ. ಕಾವೇರಿ ನದಿಯ ಮೇಲ್ಭಾಗದಲ್ಲಿರುವ ಭೀಮಾನದಿ, ಶಿಂಷಾ ನದಿ ಹಾಗೂ ಬೆಂಗಳೂರು ನೀರು ಸರಬರಾಜು ಜಲಮಂಡಳಿಯ ಸಿಬ್ಬಂದಿ ಶುದ್ಧೀಕರಿಸಿದ ನೀರಿನ ನಂತರದ ಕೊಳಚೆ ನೀರು, ಈ ಮೂರೂ ಕಡೆಯ ನೀರು ಒಂದೇ ಕಡೆ ಸೇರುವುದರಿಂದ ಆ ಸ್ಥಳವನ್ನು ಕೂಟ್ಲೆ ಸಂಗಮ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಇದೀಗ ಈ ಸ್ಥಳದ ದಡದಲ್ಲಿ ಮೊಸಳೆ ಕಾಣಿಸಿಕೊಂಡಿರುವುದರಿಂದ ಜನ ಭಯಗೊಂಡಿದ್ದಾರೆ.
ಮೊಸಳೆ ಕಾಣಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಉಪ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಜನರಲ್ಲಿ ಆತಂಕ ಮುಂದುವರೆದಿದೆ.

ಉಪವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್, ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿರುವುದರಿಂದ ದನಕರುಗಳನ್ನು ನದಿ ನೀರಿನಲ್ಲಿ ಮೈ ತೊಳೆಯುವುದಕ್ಕೆ ಅಥವಾ ಈಜಲು ಹೋಗದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿದ್ದಾರೆ.
ತೊರೆಕಾಡನಹಳ್ಳಿ ಗ್ರಾಮದ ರಾಜು ಮಾತನಾಡಿ, "ನಮ್ಮ ದನಕರುಗಳಿಗೆ ನೀರು ಕುಡಿಸಲು ಈ ನದಿಯೇ ಆಸರೆಯಾಗಿದೆ. ಅರಣ್ಯ ಸಿಬ್ಬಂದಿ ಮೊಸಳೆಯನ್ನು ಹಿಡಿದು ಕಾವೇರಿ ನದಿಗೆ ಬಿಡಬೇಕು. ಇಲ್ಲದೆ ಹೋದರೆ ರೈತರಿಗೆ ತೊಂದರೆಯಾಗುತ್ತದೆ" ಎಂದು ಕೋರಿಕೊಂಡಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications