ಸುಮಲತಾ ಅಂಬರೀಷ್ ಪಡೆದ ಮೊಟ್ಟ ಮೊದಲ ಮತವೇ ಅಸಿಂಧು
ಮಂಡ್ಯ, ಮೇ 10: ಮಂಡ್ಯ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ಮತ ಚಲಾಯಿಸಿದ್ದೇನೆ ಎಂದು ಮಂಡ್ಯ ಮೂಲದ ಸಿಆರ್ ಪಿಎಫ್ ಯೋಧ ರಾಜಾ ನಾಯಕ್ ಬಹಿರಂಗ ಪಡಿಸಿದ್ದರು.
ಗೌಪ್ಯ ಮತದಾನದ ನಿಯಮ ಉಲ್ಲಂಘಿಸಿದ್ದರಿಂದ ಯೋಧ ಆರ್ ಸಿ ನಾಯಕ್ ಅವರು ಹಾಕಿದ್ದ ಮತವನ್ನು ಅಸಿಂಧು ಎಂದು ಪರಿಗಣಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಅಂಚೆ ಮೂಲಕ ಮತದಾನ ಮಾಡಿದ್ದ ಯೋಧ ಆರ್.ಸಿ ನಾಯಕ್ ಅವರು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದರು. ಸುಮಲತಾಗೆ ಮತ ಚಲಾಯಿಸಿ ಅದನ್ನು ಬಹಿರಂಗವಾಗಿ ಹೇಳಿಕೊಂಡಿದ್ದರು. ಬ್ಯಾಲೆಟ್ಪೇಪರ್ನ ಫೋಟೋ ಕೂಡಾ ಹಂಚಿಕೊಂಡಿದ್ದರು. ಯೋಧನ ಫೇಸ್ ಬುಕ್ ಪೋಸ್ಟ್ಗೆ ಅಭ್ಯರ್ಥಿ ಸುಮಲತಾ ಅವರು ಧನ್ಯವಾದ ಅರ್ಪಿಸಿ ನಿಮಗೆ ಚಿರಋಣಿ ಎಂದಿದ್ದಾರು.

ಮತದಾನದ ಗೌಪ್ಯತೆಯನ್ನು ಉಲ್ಲಂಘಿಸಿರುವುದು, ಅಭ್ಯರ್ಥಿ ಪರ ಕಾನೂನು ಬಾಹಿರವಾಗಿ ಪ್ರಚಾರ ಮಾಡಿರುವುದನ್ನು ಉಲ್ಲೇಖಿಸಿ ಯೋಧನ ವಿರುದ್ಧ ಅಡ್ವೊಕೇಟ್ ಕಿರಣ್ ಎಂಬುವರು ನ್ಯಾಯಾಲಯಕ್ಕೆ ಪಿಟಿಷನ್ ಹಾಕಿದ್ದರು.
ಈ ಬಗ್ಗೆ ಚುನಾವಣಾ ಆಯೋಗದ ನಿರ್ಧಾರವೇ ಅಂತಿಮ ಎಂದು ನ್ಯಾಯಾಲಯ ಸೂಚಿಸಿತ್ತು. ಆರ್ ಸಿ ನಾಯಕ್ ಅವರ ಒಂದು ಮತವನ್ನು ಮೇ 23ರಂದು ಮತ ಎಣಿಕೆ ಸಂದರ್ಭದಲ್ಲಿ ಪರಿಗಣಿಸದಂತೆ ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಆಯೋಗ ಮಂಡ್ಯ ಡಿಸಿಗೆ ನೋಟಿಸ್ ಜಾರಿಯಾಗಿಸಿ, ಕೇಂದ್ರ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications