ಮೇಲುಕೋಟೆ ಕ್ಷೇತ್ರದಿಂದ ದರ್ಶನ್ ಪುಟ್ಟಣ್ಣಯ್ಯ ಕಣಕ್ಕೆ
ಮೇಲುಕೋಟೆ, ಮಾರ್ಚ್ 15: ರೈತಸಂಘದ ನಾಯಕ, ದಿವಂಗತ ಕೆ.ಎಸ್. ಪುಟ್ಟಣ್ಣಯ್ಯ ಹಾದಿಯಲ್ಲೇ ಮುಂದುವರೆಯಲು ಅವರ ಮಗ ದರ್ಶನ್ ಪುಟ್ಟಣ್ಣಯ್ಯ ನಿರ್ಧರಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ 'ಸ್ವರಾಜ್ ಇಂಡಿಯಾ'ದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ದರ್ಶನ್ ಪುಟ್ಟಣ್ಣಯ್ಯ ಇಂದು ಘೋಷಿಸಿದ್ದಾರೆ.
ಕ್ಯಾತನಹಳ್ಳಿಯ ತೋಟದಲ್ಲಿರುವ ಪುಟ್ಟಣ್ಣಯ್ಯನವರ ಸಮಾಧಿ ಮುಂದೆ ದರ್ಶನ್ ಪುಟ್ಟಣ್ಣಯ್ಯ ಈ ಘೋಷಣೆ ಮಾಡಿದ್ದಾರೆ.

"ಮೇಲುಕೋಟೆ ಕ್ಷೇತ್ರದಿಂದ 'ಸ್ವರಾಜ್ ಇಂಡಿಯಾ' ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ನಮ್ಮ ಕುಟುಂಬದಿಂದ ನಾನು ಅಥವಾ ಪುತ್ರ ಕಣಕ್ಕಿಳಿಯಬೇಕೆಂಬುದು ಕಾರ್ಯಕರ್ತರ ಒತ್ತಡವಾಗಿದೆ," ಎಂದು ಶಾಸಕ, ರೈತನಾಯಕ ದಿವಂಗತ ಕೆ.ಎಸ್. ಪುಟ್ಟಣ್ಣಯ್ಯನವರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಈ ಹಿಂದೆ ಹೇಳಿದ್ದರು.
"ತಮ್ಮ ಕುಟುಂಬದಿಂದಲೇ ಯಾರಾದರೂ ಸ್ಪರ್ಧಿಸಬೇಕೇ ಅಥವಾ ಬೇರೆಯವರು ಕಣಕ್ಕಿಳಿಯಬೇಕೇ ಎಂಬ ಬಗ್ಗೆ ರೈತಸಂಘ, ಹಸಿರು ಸೇನೆ, ಸ್ವರಾಜ್ ಇಂಡಿಯಾದ ಮುಖಂಡರು ಹಾಗೂ ಕಾರ್ಯಕರ್ತರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ," ಎಂದು ಅವರು ಹೇಳಿದ್ದರು.
ಇದೀಗ ಮೇಲುಕೋಟೆಯಿಂದ ದರ್ಶನ್ ಪುಟ್ಟಣ್ಣಯ್ಯ ಸ್ಪರ್ಧಿಸುವುದು ಅಂತಿಮವಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications