ತಾಯಿ ಹುಡುಕಿಕೊಂಡು ಸ್ವೀಡನ್ ನಿಂದ ಮಂಡ್ಯಕ್ಕೆ ಬಂದ ಮಗಳು
ದೂರದ ಸ್ವೀಡನ್ ದೇಶದಿಂದ ಮಂಡ್ಯ ಜಿಲ್ಲೆ ಮದ್ದೂರಿಗೆ ತಂದೆ-ತಾಯಿಯನ್ನು ಹುಡುಕಿಕೊಂಡು ಬಂದ ಮಗಳಿಗೆ ಶಾಕ್ ಆಗಿದೆ.
ಮಂಡ್ಯ, ಫೆಬ್ರವರಿ 23: ದೂರದ ಸ್ವೀಡನ್ ದೇಶದಿಂದ ಮಂಡ್ಯ ಜಿಲ್ಲೆ ಮದ್ದೂರಿಗೆ ತಂದೆ-ತಾಯಿಯನ್ನು ಹುಡುಕಿಕೊಂಡು ಬಂದ ಮಗಳಿಗೆ ಶಾಕ್ ಆಗಿದೆ.
ಜೋಲಿ ಎಂಬ ಮಹಿಳೆ ಗಂಡ ಎರಿಕ್ ಜೊತೆಗೆ ಸ್ವೀಡನ್ ದೇಶದಿಂದ ಮಂಡ್ಯಕ್ಕೆ ಆಗಮಿಸಿದ್ದಾರೆ. 29 ವರ್ಷದ ಬಳಿಕ ಬಂದಿರುವ ಜೋಲಿ ತಂದೆ-ತಾಯಿ, ಸಂಬಂಧಿಕರನ್ನು ಹುಡುಕತೊಡಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನ ಜಯಮ್ಮ, ಬೋರೇಗೌಡ ದಂಪತಿಯ ಪುತ್ರಿಯಾಗಿರುವ ಜೋಲಿ 1993 ರಲ್ಲಿ 6 ವರ್ಷದ ಬಾಲಕಿಯಾಗಿದ್ದು ಜಯಮ್ಮ ಅವರಿಗೆ ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು.
ಚಿಕಿತ್ಸೆಗೆ ಬಂದಿದ್ದ ಜಯಮ್ಮ ಮಗಳನ್ನು ಸಾಕಲಾಗದೇ ಬೆಂಗಳೂರು ಇಂದಿರಾನಗರದಲ್ಲಿರುವ ಆಶ್ರಯ ದತ್ತು ಕೇಂದ್ರದಲ್ಲಿ ಮಗಳನ್ನು ಬಿಟ್ಟು ಹೋಗಿದ್ದರು. ಸ್ವೀಡನ್ ದೇಶದ ದಂಪತಿ ಜೋಲಿಯನ್ನು ದತ್ತು ಪಡೆದು ತಮ್ಮ ದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇತ್ತೀಚೆಗೆ ತನ್ನ ತಾಯಿ ಆತ್ಮಹತ್ಯೆ ಮಾಡಿಕೊಂಡ ಕನಸು ಜೋಲಿಗೆ ಬಿದ್ದಿದ್ದು ಪೋಷಕರ ಬಳಿ ತಾನು ಯಾರು ಎಂಬುದನ್ನು ಪ್ರಶ್ನಿಸಿದ್ದಾಳೆ. ಪೋಷಕರು 29 ವರ್ಷದ ಹಿಂದೆ ದತ್ತು ಪಡೆದ ಬಗ್ಗೆ ಮಾಹಿತಿ ನೀಡಿದ್ದಾರೆ. ಜೋಲಿ ಪತಿ ಎರಿಕ್ ಕರೆದುಕೊಂಡು ಬಂದು ತನ್ನ ತಂದೆ-ತಾಯಿ ಸಂಬಂಧಿಕರಿಗಾಗಿ ಹುಡುಕಾಟ ನಡೆಸಿದ್ದಾರೆ.
ಆಕೆಗೆ ಕನಸು ಬಿದ್ದಂತೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಚಿಕ್ಕವಳಿದ್ದಾಗ ಓಡಾಡಿದ್ದ ನಾಲೆಯ ಬಳಿಯೇ ತಾಯಿ ಆತ್ಮಹತ್ಯೆ ಮಾಡಿಕೊಂಡಂತೆ ಕನಸು ಬಿದ್ದಿದ್ದಾಗಿ ಹೇಳಿದ್ದಾರೆ. ನಾಲೆಯ ಬಳಿಗೆ ಬಂದ ಜೋಲಿ ಇಲ್ಲೇ ಓಡಾಡಿದ್ದಾಗಿ ಹೇಳಿದ್ದಾರೆ.
ಆದರೆ, ಜನರಿಗೆ ಆಕೆ ಹೇಳಿದ ಜಯಮ್ಮ, ಬೋರೇಗೌಡರ ಬಗ್ಗೆ ಮಾಹಿತಿ ತಿಳಿದಿಲ್ಲ. ದೂರದಿಂದ ತಂದೆ, ತಾಯಿ ಹುಡುಕಿಕೊಂಡು ಬಂದಿರುವ ಜೋಲಿ ಪತಿಯೊಂದಿಗೆ ಹುಡುಕಾಟ ಮುಂದುವರೆಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications