ಬಿಜೆಪಿ ಮುಖಂಡರು ಮುದಿ ನಾಯಿಯಂತೆ ಕಾಯುತ್ತಿದ್ದಾರೆ : ಡಿ.ಸಿ.ತಮ್ಮಣ್ಣ
ಮಂಡ್ಯ, ಡಿಸೆಂಬರ್ 28 : 'ರಾಜ್ಯದ ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಕೌಂಟ್ ಡೌನ್ ಹೇಳುತ್ತಿರುವ ಬಿಜೆಪಿ ನಾಯಕರು ಮುದಿ ನಾಯಿಯಂತೆ ಕಾಯುತ್ತಿದ್ದಾರೆ' ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳುವ ಮೂಲಕ ವಿವಾದ ಎಬ್ಬಿಸಿದ್ದಾರೆ.
ಶುಕ್ರವಾರ ಮಂಡ್ಯದಲ್ಲಿ ಮಾತನಾಡಿದ ಡಿ.ಸಿ.ತಮ್ಮಣ್ಣ ಅವರು, 'ಒಂದೇ ಪಕ್ಷದ ಸರ್ಕಾರ ಇದ್ದರೆ ಅಸಮಾಧಾನವಿರುತ್ತದೆ. ಹಾಗೇಯೇ ಸಮ್ಮಿಶ್ರ ಸರ್ಕಾರದಲ್ಲಿ ಸಹ ಅಸಮಾಧಾನ ಇರುವುದು ಸಹಜ' ಎಂದರು.
'ಸರ್ಕಾರ ಸುಭದ್ರವಾಗಿದ್ದು ಯಾವುದೇ ತೊಂದರೆ ಇಲ್ಲ. ಈ ಹಿಂದೆ ವಿಧಾನಸೌಧದಲ್ಲಿ ಜೆ.ಎಚ್.ಪಟೇಲರು ಒಂದು ಮಾತು ಹೇಳಿದ್ದರು. ಅಂತಹ ಸನ್ನಿವೇಶ ಈಗ ನಿರ್ಮಾಣವಾಗಿದೆ' ಎಂದು ಸ್ಪಷ್ಟಪಡಿಸಿದರು.

'ಸರ್ಕಾರದ ಬಗ್ಗೆ ಹೇಳಿಕೆ ನೀಡುವುದು ಕೆಲವರಿಗೆ ಚಟ ಆಗಿದೆ. ಇದರಂತೆ ಬಿಜೆಪಿ ನಾಯಕರು ಸರ್ಕಾರದ ಬಗ್ಗೆ ಹೇಳಿಕೆ ನೀಡುತ್ತಾ, ಸರ್ಕಾರ ಬೀಳುತ್ತದೆ' ಎಂದು ಕಾದು ಕುಳಿತಿದ್ದಾರೆ' ಎಂದು ಡಿ.ಸಿ.ತಮ್ಮಣ್ಣ ಆರೋಪಿಸಿದರು.
ಟೀಕೆ ಮಾಡುವುದು ಗುಣ : ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕಿಡಿ ಕಾರಿದ ಡಿ.ಸಿ.ತಮ್ಮಣ್ಣ ಅವರು, 'ಅಧಿಕಾರದಲ್ಲಿ ಇಲ್ಲದೇ ಇರುವ ವೇಳೆ ಟೀಕೆ ಮಾಡುವುದು ಮಾನವ ಸಹಜ ಗುಣ' ಎಂದು ಹೇಳಿದರು.
'ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನವಿದ್ದರೆ ಸಿದ್ದರಾಮಯ್ಯ, ಪರಮೇಶ್ವರ, ಎಚ್.ಡಿ.ಕುಮಾರಸ್ವಾಮಿ ಅವರಂತಹ ನಾಯಕರು ಹೇಳಿಕೆ ನೀಡಿದರೆ ಮಾತ್ರ ಮೌಲ್ಯ ಮತ್ತು ಅರ್ಥ ಇರುತ್ತದೆ' ಎಂದು ತಿಳಿಸಿದರು.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ











Click it and Unblock the Notifications