ಬಿಜೆಪಿ ಮುಖಂಡರು ಮುದಿ ನಾಯಿಯಂತೆ ಕಾಯುತ್ತಿದ್ದಾರೆ : ಡಿ.ಸಿ.ತಮ್ಮಣ್ಣ
ಮಂಡ್ಯ, ಡಿಸೆಂಬರ್ 28 : 'ರಾಜ್ಯದ ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಕೌಂಟ್ ಡೌನ್ ಹೇಳುತ್ತಿರುವ ಬಿಜೆಪಿ ನಾಯಕರು ಮುದಿ ನಾಯಿಯಂತೆ ಕಾಯುತ್ತಿದ್ದಾರೆ' ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳುವ ಮೂಲಕ ವಿವಾದ ಎಬ್ಬಿಸಿದ್ದಾರೆ.
ಶುಕ್ರವಾರ ಮಂಡ್ಯದಲ್ಲಿ ಮಾತನಾಡಿದ ಡಿ.ಸಿ.ತಮ್ಮಣ್ಣ ಅವರು, 'ಒಂದೇ ಪಕ್ಷದ ಸರ್ಕಾರ ಇದ್ದರೆ ಅಸಮಾಧಾನವಿರುತ್ತದೆ. ಹಾಗೇಯೇ ಸಮ್ಮಿಶ್ರ ಸರ್ಕಾರದಲ್ಲಿ ಸಹ ಅಸಮಾಧಾನ ಇರುವುದು ಸಹಜ' ಎಂದರು.
'ಸರ್ಕಾರ ಸುಭದ್ರವಾಗಿದ್ದು ಯಾವುದೇ ತೊಂದರೆ ಇಲ್ಲ. ಈ ಹಿಂದೆ ವಿಧಾನಸೌಧದಲ್ಲಿ ಜೆ.ಎಚ್.ಪಟೇಲರು ಒಂದು ಮಾತು ಹೇಳಿದ್ದರು. ಅಂತಹ ಸನ್ನಿವೇಶ ಈಗ ನಿರ್ಮಾಣವಾಗಿದೆ' ಎಂದು ಸ್ಪಷ್ಟಪಡಿಸಿದರು.

'ಸರ್ಕಾರದ ಬಗ್ಗೆ ಹೇಳಿಕೆ ನೀಡುವುದು ಕೆಲವರಿಗೆ ಚಟ ಆಗಿದೆ. ಇದರಂತೆ ಬಿಜೆಪಿ ನಾಯಕರು ಸರ್ಕಾರದ ಬಗ್ಗೆ ಹೇಳಿಕೆ ನೀಡುತ್ತಾ, ಸರ್ಕಾರ ಬೀಳುತ್ತದೆ' ಎಂದು ಕಾದು ಕುಳಿತಿದ್ದಾರೆ' ಎಂದು ಡಿ.ಸಿ.ತಮ್ಮಣ್ಣ ಆರೋಪಿಸಿದರು.
ಟೀಕೆ ಮಾಡುವುದು ಗುಣ : ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕಿಡಿ ಕಾರಿದ ಡಿ.ಸಿ.ತಮ್ಮಣ್ಣ ಅವರು, 'ಅಧಿಕಾರದಲ್ಲಿ ಇಲ್ಲದೇ ಇರುವ ವೇಳೆ ಟೀಕೆ ಮಾಡುವುದು ಮಾನವ ಸಹಜ ಗುಣ' ಎಂದು ಹೇಳಿದರು.
'ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನವಿದ್ದರೆ ಸಿದ್ದರಾಮಯ್ಯ, ಪರಮೇಶ್ವರ, ಎಚ್.ಡಿ.ಕುಮಾರಸ್ವಾಮಿ ಅವರಂತಹ ನಾಯಕರು ಹೇಳಿಕೆ ನೀಡಿದರೆ ಮಾತ್ರ ಮೌಲ್ಯ ಮತ್ತು ಅರ್ಥ ಇರುತ್ತದೆ' ಎಂದು ತಿಳಿಸಿದರು.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications