Cauvery Aarti: ಕೆಆರ್ಎಸ್ನಲ್ಲಿ ಕಾವೇರಿ ಆರತಿ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ
ಉತ್ತರ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಗಂಗಾ ಆರತಿ ಮಾದರಿಯಲ್ಲಿ ಕರ್ನಾಟಕದ ಜೀವನದಿ ಕಾವೇರಿಗೆ ಆರತಿ ಸಲ್ಲಿಸುವ ಅದ್ಧೂರಿ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮೊದಲಿಗೆ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಈ ಆರತಿ ಕಾರ್ಯಕ್ರಮವನ್ನು ಖುದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ನೆರವೇರಿಸಿದ್ದರು. ಇದೀಗ ಮಂಡ್ಯ ಜಿಲ್ಲೆಯ ಕೆಆರ್ಎಸ್ ಉದ್ಯಾನವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಇಂದು ಈ ಕಾರ್ಯಕ್ರಮ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಮಳೆಗಾಲದ ಆರಂಭದಲ್ಲೇ ಉತ್ತಮ ಮಳೆಯಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕಾವೇರಿ ಕೂಡ ಉಕ್ಕಿ ಹರಿಯುತ್ತಿದ್ದಾಳೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಹಾಗಾಗಿ ಡ್ಯಾಂಗಳಿಂದ ನೀರು ಹೊರಬಿಡಲಾಗುತ್ತಿದೆ. ಇದೇ ಹೊತ್ತಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ.

ಮಂಡ್ಯ ಜಿಲ್ಲೆಯ ಕೆಆರ್ಎಸ್ ಉದ್ಯಾನವನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಾವೇರಿ ಆರತಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಅಧಿಕಾರಿಗಳು ಹಾಗೂ ಪಾಲುದಾರರೊಂದಿಗೆ ಸಭೆ ನಡೆಸಿದ್ದೇನೆ. ಇದು ಕಾವೇರಿ ಮಾತೆಗೆ ಒಗ್ಗಟ್ಟಿನ ಆರತಿ. ಕಾವೇರಿ ಆರತಿಯಿಂದ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಅನುಕೂಲವಾಗಲಿದ್ದು ಎಲ್ಲರನ್ನೂ ಸಮಾನವಾಗಿ ಪೊರೆಯುವ ಕಾವೇರಿ ಮಾತೆಗೆ ನಾವೆಲ್ಲರೂ ಪ್ರಾರ್ಥನೆ ಸಲ್ಲಿಸಲಿದ್ದೇವೆ. ಪ್ರಯತ್ನ ವಿಫಲವಾಗಬಹುದು. ಆದರೆ, ಪ್ರಾರ್ಥನೆ ವಿಫಲವಾಗುವುದಿಲ್ಲ. ಮನಸ್ಸಿದ್ದಲ್ಲಿ ಮಾರ್ಗವಿದೆ. ಭಕ್ತಿ ಇದ್ದಲ್ಲಿ ಭಗವಂತನಿರುತ್ತಾನೆ ಎಂಬ ನಂಬಿಕೆ ನನಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆ ಇಲ್ಲ
ರೈತರಿಗಿದ್ದ ಎಲ್ಲ ಗೊಂದಲಗಳನ್ನ ಬಗೆಹರಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಸ್ಥಳೀಯ ಪ್ರತಿನಿಧಿಗಳೂ ನಮಗೆ ಬೆಂಬಲವಾಗಿ ನಿಂತಿದ್ದಾರೆ. ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆಯಾಗುವುದಿಲ್ಲ. ವಿವಿಧ ಸಂಸ್ಕೃತಿಗಳ ಅನಾವರಣ, ಸಾವಿರಾರು ಉದ್ಯೋಗಗಳ ಸೃಷ್ಟಿ, ಪ್ರವಾಸೋದ್ಯಮದ ಅಭಿವೃದ್ಧಿ, ವ್ಯಾಪಾರ-ವಹಿವಾಟುಗಳ ವೃದ್ಧಿಯಾಗಲಿದೆ. ಕಾವೇರಿ ಮಾತೆಗೆ ನಾವೆಲ್ಲರೂ ಒಗ್ಗಟ್ಟಾಗಿ ದಸರಾ ಸಂದರ್ಭದಲ್ಲಿ ವಿಜೃಂಭಣೆಯ ಆರತಿಯನ್ನು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ನಲ್ಲಿ ನಡೆದ ಕಾವೇರಿ ಆರತಿಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ವಿವಿಧ ಇಲಾಖೆಗಳ ಸಮನ್ವಯತೆ ಹಾಗೂ ಅನುದಾನದೊಂದಿಗೆ ಕೆಆರ್ಎಸ್ನಲ್ಲಿ ವೈಭವದ ಆರತಿಯನ್ನು ಮಾಡಲಿದ್ದೇವೆ. ಇದಕ್ಕಾಗಿ ಅಧ್ಯಯನ ತಂಡವೊಂದು ಉತ್ತರ ಭಾರತದ ಪ್ರವಾಸ ಮಾಡಿ ಗಂಗಾ ಆರತಿಯನ್ನು ವೀಕ್ಷಿಸಿ ನಮಗೆ ವರದಿಯನ್ನೂ ನೀಡಿದ್ದಾರೆ. ಆ ವರದಿಯನ್ವಯ ಕಾವೇರಿ ಆರತಿಯ ಕುರಿತಂತೆ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications