Get Updates
Get notified of breaking news, exclusive insights, and must-see stories!

Cauvery Aarti: ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾಹಿತಿ

ಉತ್ತರ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಗಂಗಾ ಆರತಿ ಮಾದರಿಯಲ್ಲಿ ಕರ್ನಾಟಕದ ಜೀವನದಿ ಕಾವೇರಿಗೆ ಆರತಿ ಸಲ್ಲಿಸುವ ಅದ್ಧೂರಿ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮೊದಲಿಗೆ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಈ ಆರತಿ ಕಾರ್ಯಕ್ರಮವನ್ನು ಖುದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ನೆರವೇರಿಸಿದ್ದರು. ಇದೀಗ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಬಗ್ಗೆ ಬಿಗ್‌ ಅಪ್ಡೇಟ್‌ ನೀಡಿದ್ದಾರೆ. ಇಂದು ಈ ಕಾರ್ಯಕ್ರಮ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಮಳೆಗಾಲದ ಆರಂಭದಲ್ಲೇ ಉತ್ತಮ ಮಳೆಯಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕಾವೇರಿ ಕೂಡ ಉಕ್ಕಿ ಹರಿಯುತ್ತಿದ್ದಾಳೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಹಾಗಾಗಿ ಡ್ಯಾಂಗಳಿಂದ ನೀರು ಹೊರಬಿಡಲಾಗುತ್ತಿದೆ. ಇದೇ ಹೊತ್ತಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ.

DCM DK Shivakumar Holds Key Meeting On When Cauvery Aarti Plans Near KRS Dam

ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಾವೇರಿ ಆರತಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಅಧಿಕಾರಿಗಳು ಹಾಗೂ ಪಾಲುದಾರರೊಂದಿಗೆ ಸಭೆ ನಡೆಸಿದ್ದೇನೆ. ಇದು ಕಾವೇರಿ ಮಾತೆಗೆ ಒಗ್ಗಟ್ಟಿನ ಆರತಿ. ಕಾವೇರಿ ಆರತಿಯಿಂದ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಅನುಕೂಲವಾಗಲಿದ್ದು ಎಲ್ಲರನ್ನೂ ಸಮಾನವಾಗಿ ಪೊರೆಯುವ ಕಾವೇರಿ ಮಾತೆಗೆ ನಾವೆಲ್ಲರೂ ಪ್ರಾರ್ಥನೆ ಸಲ್ಲಿಸಲಿದ್ದೇವೆ. ಪ್ರಯತ್ನ ವಿಫಲವಾಗಬಹುದು.‌ ಆದರೆ, ಪ್ರಾರ್ಥನೆ ವಿಫಲವಾಗುವುದಿಲ್ಲ. ಮನಸ್ಸಿದ್ದಲ್ಲಿ ಮಾರ್ಗವಿದೆ. ಭಕ್ತಿ ಇದ್ದಲ್ಲಿ ಭಗವಂತನಿರುತ್ತಾನೆ ಎಂಬ ನಂಬಿಕೆ ನನಗಿದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆ ಇಲ್ಲ

ರೈತರಿಗಿದ್ದ ಎಲ್ಲ ಗೊಂದಲಗಳನ್ನ ಬಗೆಹರಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಸ್ಥಳೀಯ ಪ್ರತಿನಿಧಿಗಳೂ ನಮಗೆ ಬೆಂಬಲವಾಗಿ ನಿಂತಿದ್ದಾರೆ. ಕಾವೇರಿ ಆರತಿಯಿಂದ ಡ್ಯಾಂಗೆ ಯಾವುದೇ ತೊಂದರೆಯಾಗುವುದಿಲ್ಲ. ವಿವಿಧ ಸಂಸ್ಕೃತಿಗಳ ಅನಾವರಣ, ಸಾವಿರಾರು ಉದ್ಯೋಗಗಳ ಸೃಷ್ಟಿ, ಪ್ರವಾಸೋದ್ಯಮದ ಅಭಿವೃದ್ಧಿ, ವ್ಯಾಪಾರ-ವಹಿವಾಟುಗಳ ವೃದ್ಧಿಯಾಗಲಿದೆ. ಕಾವೇರಿ ಮಾತೆಗೆ ನಾವೆಲ್ಲರೂ ಒಗ್ಗಟ್ಟಾಗಿ ದಸರಾ ಸಂದರ್ಭದಲ್ಲಿ ವಿಜೃಂಭಣೆಯ ಆರತಿಯನ್ನು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

DCM DK Shivakumar Holds Key Meeting On When Cauvery Aarti Plans Near KRS Dam

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ನಡೆದ ಕಾವೇರಿ ಆರತಿಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ವಿವಿಧ ಇಲಾಖೆಗಳ ಸಮನ್ವಯತೆ ಹಾಗೂ ಅನುದಾನದೊಂದಿಗೆ ಕೆಆ‌ರ್‌ಎಸ್‌ನಲ್ಲಿ ವೈಭವದ ಆರತಿಯನ್ನು ಮಾಡಲಿದ್ದೇವೆ. ಇದಕ್ಕಾಗಿ ಅಧ್ಯಯನ ತಂಡವೊಂದು ಉತ್ತರ ಭಾರತದ ಪ್ರವಾಸ ಮಾಡಿ ಗಂಗಾ ಆರತಿಯನ್ನು ವೀಕ್ಷಿಸಿ ನಮಗೆ ವರದಿಯನ್ನೂ ನೀಡಿದ್ದಾರೆ. ಆ ವರದಿಯನ್ವಯ ಕಾವೇರಿ ಆರತಿಯ ಕುರಿತಂತೆ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+