ಸಾಲಗಾರರ ಕಾಟಕ್ಕೆ ಹೆದರಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ
ಚಿಕ್ಕಸೋಮನಹಳ್ಳಿ ಗ್ರಾಮದ ನಿವಾಸಿ ಈರೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಅಘಲಯ ಗ್ರಾಮದ ವಿ.ಎಸ್.ಎಸ್.ಎನ್. ಬ್ಯಾಂಕಿನಿಂದ 2ಲಕ್ಷ ಹಾಗೂ ಎಸ್ಬಿಐ ನಲ್ಲಿ 2 ಲಕ್ಷ ಸಾಲ ಮಾಡಿದ್ದರು.
ಕೆ.ಆರ್.ಪೇಟೆ, ಮೇ 16: ಬರದಿಂದ ಬೆಳೆಬೆ ಳೆಯಲಾಗದೆ ಸಾಲ ಮಾಡಿಕೊಂಡಿದ್ದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಚಿಕ್ಕಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಸೋಮನಹಳ್ಳಿ ಗ್ರಾಮದ ನಿವಾಸಿ ಈರೇಗೌಡ (50) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಅಘಲಯ ಗ್ರಾಮದಲ್ಲಿರುವ ವಿ.ಎಸ್.ಎಸ್.ಎನ್. ಬ್ಯಾಂಕಿನಲ್ಲಿ ಎರಡು ಲಕ್ಷ ರೂ. ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಎರಡು ಲಕ್ಷ ರೂ.ಗಳನ್ನು ಸಾಲ ಮಾಡಿದ್ದರು. ಅಲ್ಲದೆ, ಕೈಸಾಲವನ್ನು ಕೂಡ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.[ಮಂಡ್ಯದಲ್ಲಿ ವಿಷವುಣಿಸಿ, ಉಸಿರುಗಟ್ಟಿಸಿ ವಿದ್ಯಾರ್ಥಿಯ ಕೊಲೆ]

ಒಂದು ಎಕರೆ ಜಮೀನು ಹೊಂದಿದ್ದು ಮಳೆಯಾಗದ ಹಿನ್ನೆಲೆಯಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಮಾಡಿದ ಸಾಲದ ಬಡ್ಡಿ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಲ್ಲದೆ, ಕೈ ಸಾಲ ನೀಡಿದವರು ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ.
ಇದರಿಂದ ಬೇಸತ್ತ ಅವರು ತಮ್ಮ ಜಮೀನಿನ ಬಳಿಯ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮೃತರ ಪತ್ನಿ ನಾಗಮ್ಮ ಪಟ್ಟಣ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮೃತ ರೈತನಿಗೆ ಒಬ್ಬ ಪುತ್ರ ಮತ್ತು ಪುತ್ರಿಯಿದ್ದಾರೆ. ಸಬ್ಇನ್ಸ್ ಪೆಕ್ಟರ್ ಅರುಣ್ಕುಮಾರ್ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications