ಯಾರ ವಿರುದ್ಧ ಪ್ರತಿಭಟನೆ ಮಾಡಿದ್ದರೋ ಅವರಿಗೇ ಟಿಕೆಟ್ ನೀಡಿದ ದೇವೇಗೌಡ
ಮಂಡ್ಯ, ಅಕ್ಟೋಬರ್ 20: ಎರಡು ದಶಕದ ಹಿಂದೆ ಯಾವ ವ್ಯಕ್ತಿಯ ವಿರುದ್ದ ಉಗ್ರ ಹೋರಾಟ ಮಾಡಿದ್ದರೋ ಆ ವ್ಯಕ್ತಿಗೆ ಇಂದು ತಮ್ಮದೇ ಪಕ್ಷದಿಂದ ಟಿಕೆಟ್ ನೀಡಿದ್ದಾರೆ ಜೆಡಿಎಸ್ ವರಿಷ್ಠ ದೇವೇಗೌಡ.
ಹೌದು, ಮಂಡ್ಯ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ನಿಂದ ಸ್ಪರ್ಧಿಸುತ್ತಿರುವ ಎಲ್.ಆರ್.ಶಿವರಾಮೇಗೌಡ ಅವರ ವಿರುದ್ಧ ದೇವೇಗೌಡರು 26 ವರ್ಷಗಳ ಹಿಂದೆ ಉಗ್ರ ಪ್ರತಿಭಟನೆ ಮಾಡಿದ್ದರೂ, ಅವರನ್ನು ಬಂಧಿಸಿಯೇ ತೀರುವಂತೆ ಒತ್ತಾಯ ಮಾಡಿದ್ದರು.
ಆದರೆ ಇಂದು ಅವರಿಗೆ ತಾವೇ ಟಿಕೆಟ್ ನೀಡಿ ಗೆಲ್ಲಿಸುವ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಅವರ ಪರವಾಗಿ ಪ್ರಚಾರವನ್ನೂ ಮಾಡುವ ಸಂಭವ ಸಹ ಇದೆ.
ಲಂಕೇಶ್ ಪತ್ರಿಕೆಯ ಮಂಡ್ಯ ವರದಿಗಾರ ಕಂಚಹಳ್ಳಿ ಗಂಗಾಧರ ಮೂರ್ತಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಎಲ್.ಆರ್.ಶಿವರಾಮೇಗೌಡ ಅವರು ಪ್ರಮುಖ ಆರೋಪಿಯಾಗಿದ್ದರು. ಆಗ ಕೆಲ ಕಾಲ ಜೈಲು ವಾಸವನ್ನೂ ಅನುಭವಿಸಿದ್ದರು.

ಶಿವರಾಮೇಗೌಡರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದರು
ಆಗ ಶಾಸಕರಾಗಿದ್ದ ಶಿವರಾಮೇಗೌಡ ವಿರುದ್ಧ ಹರಿಹಾಯ್ದಿದ್ದ ದೇವೇಗೌಡರು, ಆತನೊಬ್ಬ ರೌಡಿ, ಪುಂಡ ಎಂದೆಲ್ಲಾ ಭಾಷಣ ಮಾಡಿದ್ದರು. ಅಷ್ಟೆ ಅಲ್ಲದೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ನಾಗಮಂಗಲದ ಪ್ರವಾಸಿ ಮಂದಿರದಿಂದ ಪಾದಯಾತ್ರೆ ಸಹ ಮಾಡಿದ್ದರು.

ಪತ್ರಕರ್ತನ ಹತ್ಯೆಯಲ್ಲಿ ಆರೋಪಿ ಆಗಿದ್ದ ಶಿವರಾಮೇಗೌಡ
ಕೆಂಚನಹಳ್ಳಿ ಗಂಗಾಧರ್ ಅವರನ್ನು ಹಾಡು ಹಗಲೆ ಭತ್ತದ ಗದ್ದೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ಮಾಡಲಾಗಿತ್ತು. ಅವರು ರೌಡಿ ರಾಜಕಾರಣದ ಬಗ್ಗೆ ಲೇಖನಗಳನ್ನು ಬರೆಯುತ್ತಿದ್ದರು. ದೇವೇಗೌಡರ ಪ್ರತಿಭಟನೆ ಬಳಿ ಶಿವರಾಮೇಗೌಡ ಬಂಧನ ಆಯ್ತು ಅವರು ಎರಡು ವರ್ಷಗಳ ನ್ಯಾಯಾಂಗ ಬಂಧನದಲ್ಲಿದ್ದರು ಆ ನಂತರ 2000 ರಲ್ಲಿ ಪ್ರಕರಣದಿಂದ ಖುಲಾಸೆ ಆದರು.

ದೇವೇಗೌಡರ ಪ್ರತಿಭಟನೆ ಚಿತ್ರಗಳು ವೈರಲ್
ದೇವೇಗೌಡರು ಅಂದು ಪ್ರತಿಭಟನೆ ಮಾಡಿದ್ದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮಂಡ್ಯದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಿ ಅಶ್ವಿನ್ ಗೌಡ ಅವರ ಬೆಂಬಲಿಗರು ಹಾಗೂ ಇತರೆ ಪಕ್ಷದವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಮುಂದು ಮಾಡಿ ದೇವೇಗೌಡರ ಅನುಕೂಲಸಿಂಧು ರಾಜಕಾರಣವನ್ನು ಟೀಕಿಸುತ್ತಿದ್ದಾರೆ. ಅದೇ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅವರು ಕೂಡ ಭಾಗಿ ಆಗಿದ್ದರು.

ಲಕ್ಷ್ಮಿ ಅಶ್ವಿನ್ ಗೌಡ ಆಕಾಂಕ್ಷಿ ಆಗಿದ್ದರು
ಮಂಡ್ಯ ಲೋಕಸಭೆ ಚುನಾವಣೆಗೆ ಡಾ.ಲಕ್ಷ್ಮಿ ಅಶ್ವಿನ್ ಗೌಡ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು ಆದರೆ ಅವರ ಬದಲಿಗೆ ಎಲ್.ಆರ್.ಶಿವರಾಮೇಗೌಡ ಅವರಿಗೆ ಟಿಕೆಟ್ ನೀಡಲಾಯಿತು. ಇದು ಲಕ್ಷ್ಮಿ ಬೆಂಬಲಿಗರ ಬೇಸರಕ್ಕೆ ಕಾರಣವಾಯಿತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications