ಮೇಲುಕೋಟೆ ಚೆಲುವನಾರಾಯಣಸ್ವಾಮಿಗೆ ₹75 ಲಕ್ಷ ಮೌಲ್ಯದ ಆಭರಣ ನೀಡಿದ ಭಕ್ತೆ
ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಮೈಸೂರು ಕುವೆಂಪುನಗರದ ನಿವಾಸಿ ಡಾ.ಲಕ್ಷಮ್ಮ ಎಂಬ ಭಕ್ತೆ ಸುಮಾರು 75ಲಕ್ಷ ರೂ ಮೌಲ್ಯದ ಚಿನ್ನಾಭರಣ ನೀಡಿದ್ದಾರೆ.
ಚೆಲುವನಾರಾಯಣಸ್ವಾಮಿಯ ಭಕ್ತೆಯಾದ ವಯೋವೃದ್ಧರಾದ ಲಕ್ಮಮ್ಮ ಮನೆಯಲ್ಲಿ ಬಳಸಿದ ಚಿನ್ನ ಮತ್ತು ಬೆಳ್ಳಿಯ ಎರಡು ಟ್ರಂಕ್ನಲ್ಲಿ ತುಂಬಿದ ಆಭರಣವನ್ನು ದೇವಾಲಯದ ಇಒ ಮಹೇಶ್ಗೆ ಹಸ್ತಾಂತರ ಮಾಡಿದ್ದಾರೆ.

ಸ್ಥಳೀಯ ಅಕ್ಕಸಾಲಿಗರನ್ನು ಕರೆಸಿದ ಕಾರ್ಯನಿರ್ವಾಹಕ ಅಧಿಕಾರಿ ಚಿನ್ನ ಮತ್ತು ಬೆಳ್ಳಿಯ ಮೌಲ್ಯಮಾಪನ ಮಾಡಿಸಿದ್ದಾರೆ ದೀಪದ ಕಂಬ, ಚೊಂಬು, ಆರತಿತಟ್ಟೆ, ಸೇರಿದಂತೆ ಅಂದಾಜು 25 ಕೆಜಿ ಬೆಳ್ಳಿ ಬಂಗಾರದ ಬಳೆ ಸರ ಸೇರಿದಂತೆ 250 ಗ್ರಾಂ ಬಂಗಾರದ ಆಭರಣಗಳನ್ನು ತೂಕದ ಮೂಲಕ ಲೆಕ್ಕಾಚಾರ ಮಾಡಿ ಟ್ರಂಕ್ನಲ್ಲಿ ಇರಿಸಿ ದೇವಾಲಯದ ಕಚೇರಿಯಲ್ಲಿ ಡಿಸಿ ಭದ್ರ ಮಾಡಿದ್ದಾರೆ.
ಚೆಲುವನಾರಾಯಣಸ್ವಾಮಿ ಭಕ್ತೆ ವಯೋವೃದ್ಧರಾಗಿದ್ದು ಆಭರಣಗಳು ಅನ್ಯರಪಾಲಾಗುವ ಬದಲು ದೇವಾಲಯಕ್ಕೆ ಸೇರಲಿ ಎಂಬ ಆಶಯದಿಂದ ಸಮರ್ಪಿಸಿದ್ದೇನೆ ಎಂದಿದ್ದಾರೆ.
ಭಕ್ತರು ದೇವಾಲಯಕ್ಕೆ ನೀಡಿದ ಲಕ್ಷಾಂತರೂ ಮೌಲ್ಯದ ಆಭರಣಗಳನ್ನು ಬೊಕ್ಕಸದವಹಿಯಲ್ಲಿ ದಾಖಲಿಸಿ ಬೊಕ್ಕಸದಲ್ಲಿಡಬೇಕಿದ್ದರೂ ಕೀ ಮತ್ತು ಬೊಕ್ಕಸದ ವಹಿ ಇಟ್ಟುಕೊಂಡಿದ್ದ ದೇವಾಲಯ ಪ್ರಥಮದರ್ಜೆ ಸಹಾಯಕ ಪ್ರಕಾಶ್ ಉಡಾಫೆ ಮಾಡಿ ಕರ್ತವ್ಯಕ್ಕೆ ಹಾಜರಾಗದ ಕಾರಣ ಆಭರಣಗಳನ್ನು ಎರಡು ದಿನ ನಿಯಮ ಉಲ್ಲಂಘಿಸಿ ಕಚೇರಿಯಲ್ಲೇ ಇಡುವಂತಾಗಿದೆ.
ಕುಡಿತದ ಚಟ ಇರುವ ಅಧಿಕಾರಿ
ಡಾ.ಲಕ್ಷಮ್ಮ ಸೋಮವಾರ ಮಧ್ಯಾಹ್ನ ಆಭರಣ ನೀಡಿದ ನಂತರ ಮೌಲ್ಯಮಾಪನ ಮಾಡಿದ ನಂತರ ಸಮಗ್ರವಾಗಿ ಆಭರಣಗಳ ವಿವರವನ್ನು ಬೊಕ್ಕಸದವಹಿಯಲ್ಲಿ ದಾಖಲಿಸಿ ಸ್ಥಾನೀಕರು ಅರ್ಚಕ, ಪರಿಚಾರಕರ ಸಮಕ್ಷಮ ಪರಿಶೀಲಿಸಿ ದೇವಾಲಯದ ಬೊಕ್ಕಸದಲ್ಲಿಟ್ಟು ಜಿಲ್ಲಾಧಿಕಾರಿಗಳಿಗೆ ವರದಿಸಲ್ಲಿಸಬೇಕಾಗಿತ್ತು ಆದರೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕುಡಿದ ಅಮಲಿನಲ್ಲಿದ್ದ ಪ್ರಥಮದರ್ಜೆ ಸಹಾಯಕ ಮನೆಗೆ ತೆರಳಿದ ಕಾರಣ ಈ ಕಾರ್ಯ ಆಗಲಿಲ್ಲ. ಮಂಗಳವಾರವೂ ಸಹ ಪ್ರಕಾಶ್ ಕರ್ತವ್ಯಕ್ಕೆ ಹಾಜರಾಗದಕಾರಣ ಲಕ್ಷಾಂತರೂ ಮೌಲ್ಯದ ಆಭರಣಗಳು ಕಚೇರಿಯಲ್ಲೇ ಉಳಿಯುವಂತಾಗಿ ಭದ್ರತಾ ನಿಯಮ ಉಲ್ಲಂಘನೆಯಾಗಿದೆ.
ಪ್ರಥಮದರ್ಜೆ ಸಹಾಯಕ ಕರ್ತವ್ಯಕ್ಕೆ ಗೈರುಹಾಜರಾಗುವುದರ ಜೊತೆಗೆ ಕುಡಿತದ ಚಟ ಹೊಂದಿದ್ದಾರೆ ಕುಡಿದೇ ದೇವಾಲಯದ ಕರ್ತವ್ಯಕ್ಕೂ ಹಾಜರಾಗುತ್ತಿದ್ದರೂ ಕೇಳುವವರೇ ಇಲ್ಲದಂತಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಇಂತಹ ನೌಕರನ್ನು ತಕ್ಷಣ ಜಿಲ್ಲಾಧಿಕಾರಿಗಳು ಬೇರೆಡೆವರ್ಗಾಯಿಸಿ ದೇವಾಲಯದ ಪಾವಿತ್ಯ್ರತೆ ಕಾಪಾಡಬೇಕೆಂದು ಹೆಸರೇಳಲು ಇಚ್ಚಿಸದ ಕೈಂಕರ್ಯಪರರು ಮನವಿ ಮಾಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications