ಶಾಲಾ ಮಕ್ಕಳ ನೃತ್ಯವನ್ನು ನಿಲ್ಲಿಸಿದ ಸಚಿವ ಡಿಕೆ ಶಿವಕುಮಾರ್!
ಮಂಡ್ಯ, ಆಗಸ್ಟ್ 15 : ಶಾಲಾ ಮಕ್ಕಳ ನೃತ್ಯವನ್ನು ನಿಲ್ಲಿಸಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಕ್ಕಳು 'ಹುಟ್ಟೋದ್ಯಾಕೆ ..ಸಾಯೋದ್ಯಾಕೆ' ಎಂಬ ಹಾಡಿಗೆ ನೃತ್ಯ ಮಾಡುತ್ತಿದ್ದರು.[ಚಿತ್ರಗಳು : 70ನೇ ಸ್ವಾತಂತ್ರ್ಯೋತ್ಸವ]
ಮಂಡ್ಯದಲ್ಲಿ ಸೋಮವಾರ ನಡೆದ 70ನೇ ಸ್ವಾತಂತ್ರ್ಯೋತ್ಸವ ವೇಳೆ ಶಾಲಾ ಮಕ್ಕಳ ನೃತ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅರ್ಧಕ್ಕೆ ನಿಲ್ಲಿಸಿದರು. ಧ್ವಜಾರೋಹಣದ ಬಳಿಕ ಶಾಲಾ ಮಕ್ಕಳಿಂದ ವಿವಿಧ ನೃತ್ಯಗಳನ್ನು ನಡೆಸಲಾಗುತ್ತಿತ್ತು.[ಮೋದಿ ಭಾಷಣದ ಮುಖ್ಯಾಂಶಗಳು]
ಈ ವೇಳೆ ಮಕ್ಕಳ ಕೈಯಲ್ಲಿದ್ದ ಆತ್ಮಹತ್ಯೆಗೆ ಶರಣಾದ ಐಎಎಸ್ ಅಧಿಕಾರಿ ಡಿ.ಕೆ.ರವಿ, ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಎಂ.ಕೆ ಗಣಪತಿ ಅವರ ಫೋಟೋಗಳನ್ನು ನೋಡಿದ ಸಚಿವರು, ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಲು ಸೂಚನೆ ನೀಡಿದರು.[ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು]
ಶಾಲಾ
ಮಕ್ಕಳ
ನೃತ್ಯದ
ಬಗ್ಗೆ
ಅಸಮಾಧಾನ
ವ್ಯಕ್ತಪಡಿಸಿದ
ಸಚಿವರು,
ಶಿಕ್ಷಣ
ಇಲಾಖೆ
ಉಪ
ನಿರ್ದೇಶಕರು
(ಡಿಡಿಪಿಐ)
ಅವರನ್ನು
ತರಾಟೆಗೆ
ತೆಗೆದುಕೊಂಡರು.
70 ಮೀಟರ್ ಉದ್ದದ ರಾಷ್ಟ್ರಧ್ವಜ : ಮಂಡ್ಯ ಯೂತ್ ಗ್ರೂಪ್ ಸದಸ್ಯರು 70 ಮೀಟರ್ ಉದ್ದದ ರಾಷ್ಟ್ರಧ್ವಜದ ಮಾದರಿಯನ್ನು ಮೆರವಣಿಗೆ ಮಾಡುವ ಮೂಲಕ ಗಮನ ಸೆಳೆದರು. ನಗರದ ಪ್ರಮುಖ ರಸ್ತೆಗಳಲ್ಲಿ ನೂರಕ್ಕೂ ಹೆಚ್ಚು ಯುವಕರು ದೇಶಭಕ್ತಿ ಗೀತೆಗಳನ್ನು ಹಾಡುತ್ತಾ ಧ್ವಜದ ಮಾದರಿಯ ಮೆರವಣಿಗೆ ನಡೆಸಿದರು.