ಗೆಳೆಯನ ಜತೆ ಸಲಿಗೆ ಆಕ್ಷೇಪಿಸಿದ್ದಕ್ಕೆ ವೈದ್ಯೆಯಿಂದ ಪತಿಗೆ ಜೀವ ಬೆದರಿಕೆ
ಮಂಡ್ಯ, ನವೆಂಬರ್ 28: ಅತಿಯಾದ ಗೆಳೆತನ ಒಳ್ಳೇದಲ್ಲ ಎಂದು ಪತ್ನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಪತಿ ಮನೆಗೆ ಹೋಗಿ ಗಲಾಟೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ಇಲ್ಲಿನ ಕಲ್ಲಹಳ್ಳಿಯಲ್ಲಿ ನಡೆದಿದೆ.
ಪತ್ನಿ ಲಕ್ಷ್ಮಿ ಸೇರಿದಂತೆ ಹರೀಶ, ಪೃಥ್ವಿ ಹಾಗೂ ಸೆಲ್ವಿ ಎಂಬ ನಾಲ್ವರು ಗುರುವಾರ ಪತಿ ವೆಂಕಟೇಶ್ ಅವರ ಮನೆಗೆ ಬಂದು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವೆಂಕಟೇಶ್ ಅವರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹತ್ತು ವರ್ಷಗಳ ಹಿಂದೆ ನಾನು ಡಾ.ಲಕ್ಷ್ಮಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದೆ. ಲಕ್ಷ್ಮಿಯು ಮಂಡ್ಯ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾವು 2019ರ ವರೆಗೂ ಬಹಳ ಅನೋನ್ಯವಾಗಿದ್ದೆವು. ನಮಗೆ 10 ವರ್ಷದ ಮಗ ಸಹ ಇದ್ದಾನೆ. ಈ ನಡುವೆ ಹರೀಶ್ ಎಂಬಾತ ನನ್ನ ಹೆಂಡತಿಗೆ ಪರಿಚಯವಾಗಿದ್ದು, ಆತ ನಿತ್ಯ ಮನೆಗೆ ಬರುತ್ತಿದ್ದ. ನಾನು ಪತ್ನಿಯನ್ನು ಕೇಳಿದಾಗ ಸ್ನೇಹಿತ ಎಂದಿದ್ದರು. ನಂತರ ಅವರಿಬ್ಬರ ಒಡನಾಟ ನೋಡಿ, ಇದೆಲ್ಲ ಸರಿಯಿಲ್ಲ. ಅವರ ಜೊತೆ ಓಡಾಡಬೇಡ ಮತ್ತು ಆತ ನಮ್ಮ ಮನೆಗೆ ಬರುವುದು ಬೇಡ ಎಂದು ಬುದ್ಧಿಮಾತು ಹೇಳಿದೆ.

ಇದರಿಂದ ಕೋಪಗೊಂಡು ಗುರುವಾರ ರಾತ್ರಿ ಲಕ್ಷ್ಮಿ ಸೇರಿದಂತೆ ಹರೀಶ, ಪೃಥ್ವಿ ಹಾಗೂ ಸೆಲ್ವಿ ಮನೆಗೆ ಏಕಾಏಕಿ ನುಗ್ಗಿ ನಮ್ಮ ತಂದೆ ಮೇಲೆ ಹಲ್ಲೆ ಮಾಡಿ ನನಗೆ ಜೀವ ಬೆದರಿಕೆ ಹಾಕಿ ಹೋಗಿದ್ದಾರೆ ಎಂದು ದೂರಿದ್ದಾರೆ.
ನನ್ನ ಪತ್ನಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದು, ನಾನು ಹರೀಶ್ನನ್ನೇ ಮದುವೆಯಾಗುತ್ತೇನೆ. ನೀನು ನನಗೆ ಡೈವರ್ಸ್ ಕೊಡಬೇಕು ಎಂದಿದ್ದಾಳೆ. ಇದಲ್ಲದೆ ಹರೀಶ್ ಸಹ ನಿನ್ನನ್ನು ಮೂರು ವರ್ಷ ಜೈಲಿಗೆ ಕಳುಹಿಸುತ್ತೀನಿ ನೋಡುತ್ತಿರು ಎಂದು ಬೆದರಿಕೆ ಹಾಕಿದ್ದಾನೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications