Get Updates
Get notified of breaking news, exclusive insights, and must-see stories!

ನಾನೇ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಎಸ್.ಎಂ.ಕೃಷ್ಣ ಪ್ರತಿಕ್ರಿಯಿಸಿದ್ದು ಹೀಗೆ

ಮಂಡ್ಯ, ನವೆಂಬರ್‌, 03: ಜಾತಿ ಆಧಾರದ ಮೇಲೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಶುಕ್ರವಾರ (ನವೆಂಬರ್‌ 03) ಹೇಳಿದರು. ಅಲ್ಲದೆ ಇದೇ ವೇಳೆ 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಖಾಸಗಿ ಹೋಟೆಲ್‌ನಲ್ಲಿ ಮುಖಂಡರು ಹಾಗೂ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಯೋಗ್ಯತೆ, ಸಾಧನೆ, ಸಾಮಾಜಿಕ ಕಳಕಳಿ ಹೊಂದಿರುವಂತಹ ಹಾಗೂ ನ್ಯಾಯ ಸಮ್ಮತ ಮನೋಭಾವ ಹೊಂದಿರುವಂತಹ ವ್ಯಕ್ತಿಗಳು ರಾಜ್ಯದ ಮುಖ್ಯಮಂತ್ರಿಯಾಗಬೇಕೆ ಹೊರತು, ಜಾತಿ ಆಧಾರದ ಮೇಲೆ ಆಯ್ಕೆ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Dont be selecting chief minister based on caste says S.M.Krishna

ಭ್ರಷ್ಟಾಚಾರ ಪ್ರಜಾಪ್ರಭುತ್ವಕ್ಕೆ ದೊಡ್ಡ ಮಾರಕ

ರಾಜಕೀಯ ತನ್ನದೇ ಆದ ಕಾಲಘಟ್ಟದಲ್ಲಿ ಒಂದೊಂದು ತಿರುವುಗಳನ್ನು ಪಡೆದುಕೊಳ್ಳುತ್ತದೆ. ಭ್ರಷ್ಟಾಚಾರ ಪ್ರಜಾಪ್ರಭುತ್ವ ಭವಿಷ್ಯಕ್ಕೆ ದೊಡ್ಡ ಮಾರಕವಾಗಿದೆ. ಎಲ್ಲಿಯವರೆಗೆ ಕೊಡುವವರು ಮತ್ತು ತೆಗೆದುಕೊಳ್ಳುವವರ ಮಧ್ಯೆ ಅಂತಃಕರಣ ಶುದ್ಧಿಯಿಂದ ಕಾಲನ್ನು ಇಡುತ್ತದೆಯೋ ಅದರ ಆಧಾರದ ಮೇಲೆ ಪ್ರಜಾಪ್ರಭುತ್ವ ನಿಲ್ಲುತ್ತದೆ ಎಂದು ಹೇಳಿದರು.

ನಾನೇ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದೇ ಅನಾರೋಗ್ಯಕರವಾದದ್ದು. ಪ್ರಶ್ನೆಯೇ ಇಲ್ಲಿ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಕಿವಿ ಮಾತು ಹೇಳಿದರು.

ಕುಟುಂಬದಿಂದ ಚುನಾವಣೆಗೆ ಯಾರೂ ಸ್ಪರ್ಧೆ ಮಾಡಲ್ಲ

ಮುಂದಿನ ಲೋಕಸಭಾ ಚುನಾವಣೆಗೆ ತಮ್ಮ ಕುಟುಂಬದಿಂದ ಯಾರೂ ಸಹ ಸ್ಪರ್ಧೆ ಮಾಡುವುದಿಲ್ಲ. ನನ್ನ ಮಕ್ಕಳು ಅವರದೇ ಆದ ವೃತ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಅವರನ್ನು ನಾನು ಬಲವಂತವಾಗಿ ರಾಜಕೀಯಕ್ಕೆ ಧುಮುಕಿ ಅಂತಾ ಹೇಳುವುದು ಸರಿಯಲ್ಲ. ರಾಜಕೀಯಕ್ಕೆ ಬರುವ ಇಚ್ಚಾಶಕ್ತಿ ಅವರಲ್ಲೇ ಬರಬೇಕು. ಈಗಾಗಲೇ ನಾನು ರಾಜಕೀಯದಿಂದ ಸಂಪೂರ್ಣವಾಗಿ ನಿವೃತ್ತಿಯಾಗಿರುವುದರಿಂದ ಯಾವುದೇ ಪಕ್ಷದಿಂದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ. ಆ ಬಗ್ಗೆ ನನಗೆ ಆಸಕ್ತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯಬೇಕಾದರೇ ನಾಲ್ಕು ರಾಜ್ಯಗಳ ರೈತ ಮುಖಂಡರು ಒಟ್ಟಿಗೆ ಸಭೆ ಸೇರಿ ಚರ್ಚಿಸಿದಾಗ ಮಾತ್ರ ಈ ಸಮಸ್ಯೆಗೆ ಪರಿಹಾರ ದೊರಕಬಹುದೆನೋ. ಪ್ರಸ್ತುತ ರಾಜ್ಯ ಸರ್ಕಾರ ಅನಿವಾರ್ಯ ಹಾಗೂ ವಿಧಿ ಇಲ್ಲದೆ ತಮಿಳುನಾಡಿಗೆ ನೀರು ಬಿಡಬೇಕಾದ ಆದೇಶವನ್ನು ಅನುಸರಿಸಬೇಕಿದೆ ಎಂದರು.

ನಿವೃತ್ತಿಯಿಂದ ಮನಸ್ಸು ನಿರಾಳ

ರಾಜಕೀಯದಿಂದ ನಿವೃತ್ತಿಯಾದ ನಂತರ ನನ್ನ ಜೀವನದಲ್ಲಿ ಮನಸ್ಸು ನಿರಾಳವಾಗಿದೆ. ಯಾವುದೇ ಒತ್ತಡಗಳಿಲ್ಲ. ಪತ್ರಿಕೆ, ಪುಸ್ತಕ ಓದುವುದು ಮತ್ತು ದೃಶ್ಯ ಮಾಧ್ಯಮಗಳಲ್ಲಿ ಬರುವ ಸುದ್ದಿ ಸ್ವಾರಸ್ಯಗಳನ್ನು ನೋಡುವ ಮೂಲಕ ನೆಮ್ಮದಿಯಾಗಿ ಕಾಲಕಳೆಯುತ್ತಾ ರಾಜಕೀಯ ಜಂಜಾಟದಿಂದ ದೂರವಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮುಖಂಡರಾದ ಕೆ.ಆರ್.ಮಹೇಶ್, ನಾಗರಾಜು, ಸಿ.ನಾಗೇಗೌಡ, ವಿಜಯ್, ಶಿವಲಿಂಗಯ್ಯ, ತಮ್ಮಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+