ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ; ಡಾ. ಸಿ.ಎನ್. ಮಂಜುನಾಥ್ ಹೇಳಿದ್ದೇನು?
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಜನರ ಒತ್ತಡ ಇದೆ. ಆದರೆ ನಾನು ಇನ್ನು ತೀರ್ಮಾನ ಮಾಡಿಲ್ಲ ಎಂದರು.

ನನ್ನ ಪ್ರಕಾರ ಲೋಕಸಭೆ ಬೇರೆ, ರಾಜಕೀಯವೇ ಬೇರೆ, ನಾನು ಇನ್ನು ಸ್ಪರ್ಧೆ ಬಗ್ಗೆ ಆಲೋಚನೆ ಮಾಡುತ್ತಿದ್ದೇನೆ. ಇದರ ಬಗ್ಗೆ ಸ್ಪಷ್ಟವಾದ ನಿಲುವು ತೆಗೆದುಕೊಂಡು ತಿಳಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸ್ನೇಹಿತರು, ಹಿತೈಷಿಗಳು ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದಂತೆ ರಾಜಕೀಯ ಕ್ಷೇತ್ರದಲ್ಲೂ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ನನ್ನ ಸ್ಪರ್ಧೆ ಬಗ್ಗೆ ಜನರು ಚರ್ಚೆ ಮಾಡುತ್ತಿದ್ದಾರೆ. ಮಾಧ್ಯಮ ಸುದ್ಧಿ ಮಾಡುತ್ತಿವೆ. ಆದರೆ, ರಾಜಕೀಯಕ್ಕೆ ಹೋಗಬೇಕಾ ಅಥವಾ ಬೇಡವಾ ಎಂಬ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಇಡೀ ರಾಷ್ಟ್ರದಲ್ಲಿ ಜಯದೇವ ಸಂಸ್ಥೆಯನ್ನು ಮಾದರಿ ಸಂಸ್ಥೆಯಾಗಿ ಅಭಿವೃದ್ಧಿಗೊಳಿಸಿದ್ದೇವೆ. ಈ ಸರ್ಕಾರ ಹಾಗೂ ಹಿಂದಿನ ಸರ್ಕಾರ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೂ ಯಾವ ಕಾರಣಕ್ಕೆ ತನಿಖೆ ಮಾಡಬೇಕು ಅಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಂದ್ರ ಆರೋಗ್ಯ ಸ್ಥಾಯಿ ಸಮಿತಿ ನಮ್ಮ ಕೆಲಸ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಆಸ್ಪತ್ರೆ ಕಾರ್ಯವೈಖರಿ ನೋಡಿ ಓನರ್ ಯಾರು ಅಂದಿದ್ದರು. ಸರ್ಕಾರಕ್ಕೆ ಈ ಸಂಸ್ಥೆ ಶೋಕೇಸ್ ಆಗಿದೆ ಎಂದಿದ್ದರು. ಜಯದೇವ ರೀತಿ ಸರ್ಕಾರಿ ಸಂಸ್ಥೆಗಳನ್ನು ಯಾಕೆ ಅಭಿವೃದ್ಧಿ ಮಾಡಬಾರದು ಎಂದು ಸರ್ಕಾರವೇ ತಿಳಿಸಿತ್ತು. ಆದರೂ ತನಿಖೆ ಏಕೆ ಎಂಬುದು ತಿಳಿದಿಲ್ಲ ಎಂದು ಹೇಳಿದರು.
ಡಾ. ಸಿ.ಎನ್. ಮಂಜುನಾಥ್ ಪತ್ನಿ ಅನಸೂಯ ಮಾತನಾಡಿ, ನಾನು ಹುಟ್ಟುತ್ತಲೇ ರಾಜಕೀಯ ನೋಡಿಕೊಂಡು ಬಂದಿದೇನೆ. ನಾನು ಹುಟ್ಟಿದ ಮರು ದಿನನೇ ನನ್ನ ತಂದೆ ಶಾಸಕರಾಗಿದ್ದರು. ಸದ್ಯ ನನ್ನ ಪತಿ ವೈದ್ಯರಾಗಿ ಸೇವೆ ಮಾಡಿದ್ದು ನೆಮ್ಮದಿ ತಂದಿ ಎಂದರು.
ಅವರು ರಾಜಕೀಯಕ್ಕೆ ಬರುವ ಬಗ್ಗೆ ಆಲೋಚನೆ ಮಾಡಲು ಸಮಯ ಸಿಕ್ಕಿಲ್ಲ. ಜನಸೇವೆ ಮಾಡಿದ್ದರ ಬಗ್ಗೆ ಸಂತೋಷವಾಗಿದೆ. ಅದರ ಅಸ್ವಾದನೆ ಮಾಡೋಕೆ ಬಿಡುತ್ತಿಲ್ಲ. ಪದೇ ಪದೇ ಹೊರಗಡೆಯಿಂದ ಒತ್ತಡ ಹೆಚ್ಚಾಗುತ್ತಿದೆ ಎಂದು ಉತ್ತರಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications