ಮಂಡ್ಯ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಅವರ ಕೊಡುಗೆ ಅಪಾರ
ಮಂಡ್ಯ, ಡಿಸೆಂಬರ್, 27: 20ನೇ ಶತಮಾನದಲ್ಲಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಜನ್ಮ ತಳೆಯದಿದ್ದರೆ ಆಧುನಿಕ ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊರತೆಯಾಗುತ್ತಿತ್ತು ಎಂಬುದನ್ನು ನಾವೆಲ್ಲರೂ ಅರಿಯಬೇಕಿದೆ ಎಂದು ಖ್ಯಾತ ಸಾಹಿತಿ ಡಾ. ರಾಗೌ ಮಂಡ್ಯದಲ್ಲಿ ಹೇಳಿದರು.
ನಗರದ ಕರ್ನಾಟಕ ಸಂಘದ ಆವರಣದಲ್ಲಿ ಆಯೋಜಿಸಿದ್ದ ಕುವೆಂಪು ಜನ್ಮೋತ್ಸವದ ಅಂಗವಾಗಿ ಶ್ರೀ ರಾಮಾಯಣ ದರ್ಶನಂ-ವಿಭಿನ್ನ ಆಯಾಮಗಳು ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, 1930ರಲ್ಲಿ ಕಾನೂನು ಸುಬ್ಬಮ್ಮ ಹೆಗ್ಗಡತಿ ಕಾದಂಬರಿಯನ್ನು ಕುವೆಂಪು ಅವರು ಬರೆಯದೇ ಹೋಗಿದ್ದರೆ ಕನ್ನಡ ಸಾಹಿತ್ಯದ ಕಾದಂಬರಿ ಕ್ಷೇತ್ರ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಿರುತ್ತಿರಲಿಲ್ಲ. ಕುವೆಂಪು ಅವರು ಬರೆಯುವ ಕಾಲಕ್ಕೆ ಕಾನೂರು ಸುಬ್ಬಮ್ಮ ಹೆಗ್ಗಡತಿ ಅಷ್ಟೊಂದು ಅಗತ್ಯವಾಗಿತ್ತು. ಹಾಗಾಗಿ ಒಂದು ಯುಗದ ಪಲ್ಲಟಕ್ಕೆ ಕುವೆಂಪು ಕಾರಣರಾದರು ಎಂಬುದನ್ನು ನಾವು ಕಂಡ ಇತಿಹಾಸ ಸ್ಪಷ್ಟಪಡಿಸುತ್ತದೆ ಎಂದು ಹೇಳಿದರು.

ಕುವೆಂಪು ಅವರ ಕೊಡುಗೆ ಅಪಾರವಾಗಿದೆ
ಜಗತ್ತಿನಲ್ಲಿ ಬದುಕಿಗಾಗಿ ಸಾಹಿತ್ಯ ಮತ್ತು ಸಾಹಿತ್ಯಕ್ಕಾಗಿ ಬದುಕು ಎಂಬ ಎರಡು ಮುಖಗಳನ್ನು ಕಾಣಬಹುದು. ಆದರೆ, ಕುವೆಂಪು ಅವರು ಬದುಕಿದಂತೆ ಬರೆದ ಮತ್ತು ಬರೆದಂತೆಯೇ ಬದುಕಿದವರಲ್ಲಿ ಅಗ್ರಗಣ್ಯರಾಗಿ ಕಂಡುಬರುತ್ತಾರೆ. ಶ್ರೀಸಾಮಾನ್ಯ ಎಂಬ ಪದವನ್ನು ಪ್ರಥಮವಾಗಿ ಪ್ರಯೋಗಿಸಿದವರೇ ಕುವೆಂಪು ಆಗಿದ್ದಾರೆ. ಹಾಗಾಗಿ ಅವರಿಗೆ ದೊಡ್ಡ ದೊಡ್ಡ ಕೃತಿಗಳು ಹೇಗೋ, ಸಣ್ಣ ಕೈಪಿಡಿಗಳೂ ಕೂಡ ಅಷ್ಟೇ ಮೌಲಿಕವಾಗಿ ಕಾಣುತ್ತಿದ್ದವು. ಹಾಗಾಗಿ ಅವರು ಸಾಮಾನ್ಯನನ್ನೂ ಮುಖ್ಯವಾಗಿ ಕಂಡ ವ್ಯಕ್ತಿತ್ವ ಹೊಂದಿದ್ದರು ಎಂದು ವಿವರಿಸಿದರು. 70ರ ದಶಕದಿಂದ ಈಚೆಗೆ ನಾವು ದಲಿತ ಪ್ರಜ್ಞೆಯನ್ನು ಕಾಣುತ್ತಾ ಬಂದಿದ್ದೇವೆ. ಆದರೆ, ಕುವೆಂಪು ಅವರ ರಾಮಾಯಣ ದರ್ಶನಂ ಕೃತಿಯಲ್ಲೇ ಶೋಷಿತರ, ಧಮನಿತರ ಬಗೆಗಿನ ಕಾಳಜಿಯನ್ನು ಕಾಣಬಹುದಾಗಿದೆ. ಮತ್ತು ಸಾಮಾನ್ಯರ ದೃಷ್ಟಿಯಲ್ಲಿ ವ್ಯವಸ್ಥೆಯನ್ನು ಆಕ್ರೋಶಿಸುವ ಪಾತ್ರಗಳನ್ನು ಸೃಷ್ಟಿಸಿ ಸಮಾಜವನ್ನು ಎಚ್ಚರಿಸಿದ್ದ ವೈಚಾರಿಕ ಪ್ರಜ್ಞೆ ಕೂಡ ಕುವೆಂಪು ಅವರದ್ದೇ ಆಗಿದೆ ಎಂದರು.
ರಾಮಾಯಣ ದರ್ಶನಂ ಸಾರದ ಬಗ್ಗೆ ವಿವರ
ಇನ್ನು ಒಂದು ಶತಮಾನ ಕಳೆದರೂ ಕೂಡ ರಾಮಾಯಣ ದರ್ಶನಂ ಕೃತಿ ಇನ್ನಷ್ಟು ಹೆಚ್ಚು ಪ್ರಚಲಿತವಾಗುತ್ತಲೇ ಇರುತ್ತದೆ. ಸಾಮಾಜಿಕ ಪ್ರಜ್ಞೆಯಲ್ಲಿ ಅದು ಕಳೆದುಹೋಗುವುದಿಲ್ಲ. ಏಕೆಂದರೆ, ಶ್ರೇಷ್ಠತೆ ಮತ್ತು ಜನಪ್ರಿಯತೆ ಆಗಲು ಯಾವುದು ಮಾನದಂಡ ಎಂಬುದನ್ನು ವಿಶ್ಲೇಷಿಸಬೇಕು. ಬದಲಾದ ಮಾನದಂಡಗಳಲ್ಲಿಯೂ ಬದಲಾಗದ ನೆಲೆಯನ್ನು ಹೊಂದಿರುವುದು ಶ್ರೇಷ್ಠತೆಯಾಗಿದೆ. ಮತ್ತು ಜನಪ್ರಿಯತೆ ಅಂತಲೂ ನಾವು ಬಣ್ಣಿಸಬಹುದು. ಪ್ರಸ್ತುತ ಸಾಹಿತ್ಯ ಓದುವ ವಿದ್ಯಾರ್ಥಿಗಳಲ್ಲಿ ವೈಚಾರಿಕತೆಯ ವೀಕ್ಷಣೆ ಅತ್ಯಂತ ಅಗತ್ಯವಾಗಿದೆ. ಕೇವಲ ಓದು ಎಂಬುದು ಸಾಂದರ್ಭಿಕವಾದರೂ, ಮನೋವೈಜ್ಞಾನಿಕ ದೃಷ್ಟಿಯಲ್ಲಿ ವೈಚಾರಿಕ ಲೇಖಕರ ಲೇಖನಗಳನ್ನು ನಾವು ಪರಿಗಣಿಸಬೇಕಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಡಾ. ವಿಜಯಕುಮಾರಿ ಕರಿಕಲ್ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ, ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಕೆಂಪಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications