ಮಾರಕ ಕೊರೊನಾ ವೈರಸ್‌ಗೆ ವೈದ್ಯ ಡಾ. ನವೀನ್ ಬಲಿ!

ಬೆಂಗಳೂರು, ಅ. 09: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೊರೊನಾ ವಾರಿಯರ್ ಒಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಮಾರಕ ಕೊರೊನಾ ರೋಗಕ್ಕೆ ವೈದ್ಯರು ಬಲಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯ ಡಾ. ವಿನಯ್ ಕೊರೊನಾ ವೈರಸ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಕೆ.ಆರ್. ಪೇಟೆ. ತಾಲೂಕಿನ ಬಳ್ಳೇಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಡಾ‌. ವಿನಯ್(58) ಅವರು ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಮೈಸೂರಿನ ಕೊವಿಡ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊವಿಡ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಡಾ. ವಿನಯ್ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Dr. Vinay (58) who working as a doctor at Bellakere PHC has died of coronavirus

ಕೊರೊನಾ ವೈರಸ್‌ಗೆ ಈ ವರೆಗೆ ರಾಜ್ಯದಲ್ಲಿ 9,675 ಜನರು ಕೊರೊನಾ ವೈರಸ್‌ಗೆ ತುತ್ತಾಗಿ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 117 ಜನರು ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 1,17,143 ಸಕ್ರಿಯ ಸೋಂಕಿತರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+