ಮದ್ದೂರಿನಲ್ಲಿ ಗುಂಪು ಘರ್ಷಣೆ: ಇಬ್ಬರ ಕೊಲೆ, ಐವರ ಬಂಧನ
ಮದ್ದೂರು, ಡಿಸೆಂಬರ್ 26: ಚುನಾವಣೆಗೆ ಹಾಕಿದ್ದ ಫ್ಲೆಕ್ಸ್ ಹರಿದ ಘಟನೆ ಕುರಿತು ಮದ್ದೂರು ತಾಲ್ಲೂಕಿನ ತೊಪ್ಪನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು ಈ ಕುರಿತು ಐವರನ್ನು ಬಂಧಿಸಲಾಗಿದೆ
ತೊಪ್ಪನಹಳ್ಳಿಯ ಪುಟ್ಟಸ್ವಾಮಿ ಅವರ ಮಗ ನಂದೀಶ್ (18), ಹೊನ್ನಯ್ಯ ಅವರ ಮಗ ಮುತ್ತುರಾಜು ಆಲಿಯಾಸ್ ಕೋಟಿ (45) ಚುನಾವಣೆಯ ಗುಂಪು ಘರ್ಷಣೆಗೆ ಬಲಿಯಾದವರು.[ರಾತ್ರೋರಾತ್ರಿ ಟಿಪ್ಪು ಚೌಕ್ ನಿರ್ಮಾಣ: ಗುಂಪು ಘರ್ಷಣೆ]
ಕೊಲೆಯಾಗಿರುವ ನಂದೀಶ್, ಮುತ್ತುರಾಜು ಮತ್ತು ರಾಮಲಿಂಗು ನೇತೃತ್ವದ ಮತ್ತೊಂದು ಗುಂಪಿನ ನಡುವೆ ಕಳೆದ ಗ್ರಾ.ಪಂ ಚುನಾವಣೆ ಸಮಯದಲ್ಲಿ ಜಗಳ ನಡೆದಿತ್ತು. ಅಲ್ಲದೆ ಐದು ದಿನಗಳ ಹಿಂದೆ ನೀರಿಗಾಗಿ ಇದೇ ಎರಡು ಗುಂಪುಗಳ ನಡುವೆ ಕದನವೂ ಜರುಗಿತ್ತು ಎಂದು ಮಂಡ್ಯ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.

ಗ್ರಾಮದಲ್ಲಿ ದ್ವೇಷಕ್ಕೆ ಕಾರಣ ಹಾಕಿದ್ದ ಫ್ಲೆಕ್ಸ್ ಅನ್ನು ಶನಿವಾರ ರಾತ್ರಿ ಹರಿದು ಹಾಕಿರುವುದು ಎನ್ನಲಾಗಿದ್ದು ಆದರೆ ಭಾನುವಾರ ಸಂಜೆ ಗುಂಪು ಘರ್ಷಣೆ ನಡೆದಿದ್ದು, ಇಬ್ಬರ ಕೊಲೆಯಲ್ಲಿ ಪರ್ಯವಸಾನವಾಗಿತ್ತು. ಈ ಸಂಬಂಧ ಎಸ್ಪಿ ವಿಚಾರಣೆ ನಡೆಸಿದ್ದು ಐವರನ್ನು ಬಂಧಿಸಲಾಗಿದೆ.[ಬೆಳಗಾವಿಯಲ್ಲಿ ಗುಂಪು ಘರ್ಷಣೆ, 12 ಜನರಿಗೆ ಗಾಯ]
ಘಟನೆ ನಂತರ ತೊಪ್ಪನಹಳ್ಳಿ ಡಿವೈಎಸ್ ಪಿ ತೀವ್ರ ಭದ್ರತೆಗೆ ಸೂಚಿಸಿದ್ದು, ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications