ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ ರಾಜಣ್ಣ ವಿರುದ್ದ ಕಾಂಗ್ರೆಸ್ ಕ್ರಮಕ್ಕೆ ಆಗ್ರಹ
ಮಂಡ್ಯ, ಜು. 2: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಲಘು ಹೇಳಿಕೆ ನೀಡಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿ.ಎಸ್. ಪುಟ್ಟರಾಜು ಒತ್ತಾಯಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡು ಕಂಡ ಮುತ್ಸದ್ದಿ ರಾಜಕಾರಣಿ ದೇವೇಗೌಡರು. ಜಿಲ್ಲಾ ಪಂಚಾಯಿತಿ ಸದಸ್ಯರಾಗಲು, ಶಾಸಕರಾಗಲು ದೇವೇಗೌಡರ ಸಹಿಯುಳ್ಳ ಬಿ ಫಾರಂ ರಾಜಣ್ಣನವರಿಗೆ ಬೇಕಾಗಿತ್ತು. ಈಗ ಎಲ್ಲವನ್ನೂ ಅನುಭವಿಸಿದ ಮೇಲೆ ಇಂತಹ ನಿಕೃಷ್ಟ ಮಾತುಗಳನ್ನಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂದಿರಾಗಾಂಧಿ, ವಾಜಪೇಯಿ ಅವರ ಸಮಕಾಲೀನರಾಗಿರುವ ದೇವೇಗೌಡರು ರಾಷ್ಟ್ರದ ಅಭ್ಯುದಯಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದನ್ನು ತಿಳಿದೂ ಒಬ್ಬರು ಸಾಯುವಂತಹ ಮಾತನಾಡಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದರು.
ದೇವೇಗೌಡರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಶನಿವಾರ ಪಾಂಡವಪುರ ಮತ್ತು ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜುಲೈ 3ರಂದು ಮಂಡ್ಯ, ಮಳವಳ್ಳಿ ಹಾಗೂ ನಾಗಮಂಗಲ ತಾಲೂಕಿನಲ್ಲೂ ಬೃಹತ್ ಪ್ರತಿಟನೆ ನಡೆಯಲಿದೆ. ಸೋಮವಾರ ಮದ್ದೂರು ಮತ್ತು ಶ್ರೀರಂಗಪಟ್ಟಣಲ್ಲಿ ಅಲ್ಲಿನ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆಯಲಿವೆ.

ಹಿರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಸಲ್ಲದು
ರಾಜಕಾರಣಿಗಳು ಮತ್ತೊಬ್ಬರ ಕಾಲೆಳೆಯಲು ಟೀಕೆ ಟಿಪ್ಪಣಿಗಳನ್ನು ಮಾಡುತ್ತಾರೆ. ಆದರೆ ಇಂತಹ ಕೀಳು ಮಟ್ಟದ ಹೇಳಿಕೆಯನ್ನು ನೀಡಿ ಹಿರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡುವುದಿಲ್ಲ. ರಾಜಣ್ಣನ ಹೇಳಿಕೆಯಿಂದ ಈ ನಾಡಿನ ಜನತೆಗೆ, ದೇವೇಗೌಡರ ಅಭಿಮಾನಿಗಳಿಗೆ ಅಪಾರವಾದ ನೋವು ಉಂಟಾಗಿದೆ. ಇಂತಹ ಮನುಷ್ಯನನ್ನು ಕಾಂಗ್ರೆಸ್ ಪಕ್ಷ ಇನ್ನೂ ಇಟ್ಟುಕೊಡಿದೆ ಎಂದು ಕಿಡಿಕಾರಿದರು.

ಎಚ್.ಡಿ. ದೇವೇಗೌಡರು ಸೂರ್ಯ ಇದ್ದಂಗೆ
ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವ ರಾಜಣ್ಣನ ಕ್ರಮ ಖಂಡಿಸಿ ಇಂದು ಪಾಂಡವಪುರ ಮತ್ತು ಕೆ.ಆರ್.ಪೇಟೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿದೆ. ಭಾನುವಾರ ಮಂಡ್ಯ, ಮಳವಳ್ಳಿ ಹಾಗೂ ನಾಗಮಂಗಲ ತಾಲೂಕಿನಲ್ಲೂ ಬೃಹತ್ ಪ್ರತಿಟನೆ ನಡೆಯಲಿದೆ. ಸೋಮವಾರ ಮದ್ದೂರು ಮತ್ತು ಶ್ರೀರಂಗಪಟ್ಟಣಲ್ಲಿ ಅಲ್ಲಿನ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.
ಎಚ್.ಡಿ. ದೇವೇಗೌಡರು ಸೂರ್ಯ ಇದಂತೆ. ಸೂರ್ಯನನ್ನು ನೋಡಿ ಉಗಿದರೆ ಅದು ನಮ್ಮ ಮುಖಕ್ಕೇ ಬೀಳುವುದು ಎಂದು ರಾಜಣ್ಣನಂತರವರು ಅರಿತುಕೊಳ್ಳಬೇಕು. ನಡೆಯುತ್ತಿದ್ದ ಆನೆಯನ್ನು ಕಂಡ ನಾಯಿಗಳು ಬೊಗಳುತ್ತವೆ. ರಾಜಣ್ಣನಂತಹವರು ಆನೆಯ ಲದ್ದಿಯನ್ನೂ ಮುಟ್ಟಲು ಸಾಧ್ಯವಿಲ್ಲ, ವಿಕೃತ ಮನಸ್ಸಿನವರು ಮಾತನಾಡುತ್ತಾರೆ. ಅವರ ಶಾಪ ನಿಮ್ಮನ್ನು ಬಿಡದು, ಇನ್ನೂ ನೂರ್ಕಾಲ ಬಾಳಿ ಬದುಕುತ್ತಾರೆ. ಶತಾಯುಷಿಗಳಾಗಿ ನಾಡಿನ ಅನೇಕ ನಮ್ಮಂತಹವರಿಗೆ ಮಾರ್ಗದರ್ಶನ ಮಾಡುತ್ತಾರೆ ಎಂದು ತಿಳಿಸಿದರು.

ಹೇಳಿಕೆಗೆ ಶಾಸಕ ಎಂ.ಶ್ರೀನಿವಾಸ್ ಖಂಡನೆ
ಶಾಸಕ ಎಂ.ಶ್ರೀನಿವಾಸ್ ಮಾತನಾಡಿ, ದೇವೇಗೌಡರ ಕಾರ್ಯವನ್ನು ಮೆಚ್ಚಿದ ವಿರೋಧ ಪಕ್ಷಗಳು ಎಚ್.ಡಿ. ದೇವೇಗೌಡರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಲು ಹೊರಟಿದ್ದವು. ಅಂತಹ ವ್ಯಕ್ತಿತ್ವ ಹೊಂದಿರುವ ಧೀಮಂತ ನಾಯಕನ ಬಗ್ಗೆ ರಾಜಣ್ಣ ಲಘುವಾಗಿ ಮಾತನಾಡಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ದೇವೇಗೌಡರಂತಹ ಹಿರಿಯ ಮುತ್ಸದ್ದಿ ರಾಜಕಾರಣಿಗಳ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದರು. ಒಬ್ಬ ವ್ಯಕ್ತಿಯ ಸಾವನ್ನು ನಿರೀಕ್ಷೆ ಮಾಡುತ್ತಾರೆ ಎಂದರೆ ಅವರ ಮನಸ್ಥಿತಿ ಹೇಗಿದೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಜಾತಶತೃ ನಾಯಕನ ಬಗ್ಗೆ ಹೇಳಿಕೆಗೆ ಖಂಡನೀಯ
ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮಾತನಾಡಿ, "ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಕೆ.ಎನ್. ರಾಜಣ್ಣ ಒಬ್ಬ ಅನಾಗರೀಕ ವ್ಯಕ್ತಿ. ದೇಶದ ಪ್ರಧಾನಿಗಳೇ ದೇವೇಗೌಡರನ್ನು ಪಾರ್ಲಿಮೆಂಟಿನ ಬಾಗಿಲ ಬಳಿ ತೆರಳಿ ಕರೆದೊಯ್ಯುತ್ತಾರೆ. ಅಂತಹ ಅಜಾತಶತೃ ನಾಯಕನ ಬಗ್ಗೆ ಹೀಯಾಳಿಸಿ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ," ಎಂದರು.
ರಾಷ್ಟ್ರ ಕಂಡ ಅಪ್ರತಿಮ ನಾಯಕನಾಗಿರುವ ದೇವೇಗೌಡರು ಕೇವಲ ಆರೇಳು ವರ್ಷಗಳ ಕಾಲ ಮಾತ್ರ ಅಧಿಕಾರ ಉಂಡವರು. ಉಳಿದ ಅವಧಿಯ ಆರು ದಶಕಗಳ ಕಾಲ ದೇಶದ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿದವರು. ಕೃಷ್ಣ ಯೋಜನೆಗಾಗಿ 16 ಸಾವಿರ ಕೋಟಿ ನೀಡಿದರು. ಈ ದೇಶದ ನೀರಾವರಿ ಯೋಜನೆಗಾಗಿ ಒಂದೂವರೆ ಲಕ್ಷ ಕೋಟಿ ರೂ.ಗಳು ಸರ್ಕಾರ ನೀಡುವಂತೆ ಮಾಡಿದವರು. ಇಂತಹ ನಾಯಕರ ಬಗ್ಗೆ ಲಘು ಹೇಳಿಕೆ ನೀಡಿರುವ ರಾಜಣ್ಣನನ್ನು ಕಾಂಗ್ರೆಸ್ ಪಕ್ಷ ಪ್ರಾಥಮಿಕ ಸದಸ್ಯತ್ವದಿಂದಲೇ ಕಿತ್ತುಹಾಕಬೇಕು ಎಂದು ಕಿಡಿಕಾರಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ಮುಖಂಡ ಲಿಂಗರಾಜು ಗೋಷ್ಠಿಯಲ್ಲಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications