ದೇವೇಗೌಡರ ಅಭಿಮಾನಿಯಿಂದ ಮಂಡ್ಯದಲ್ಲಿ ಅಪ್ಪಾಜಿ ಕ್ಯಾಂಟೀನ್
ಮಂಡ್ಯ, ಜನವರಿ 30: ಈಗಾಗಲೇ ಸರ್ಕಾರ ಇಂದಿರಾ ಕ್ಯಾಂಟೀನ್ನ್ನು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ತೆರೆಯುತ್ತಿದ್ದರೆ, ಇದೀಗ ಜೆಡಿಎಸ್ ಅಭಿಮಾನಿಯೊಬ್ಬರು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.
ಚುನಾವಣೆ ಹತ್ತಿರ ಬರುತ್ತಿರುವ ಸಮಯದಲ್ಲೇ ಸರ್ಕಾರ ಇಂದಿರಾ ಮೊಬೈಲ್ ಕ್ಯಾಂಟೀನ್ ಸೇರಿದಂತೆ, ಜಿಲ್ಲಾ ಕೇಂದ್ರಗಳಲ್ಲಿ ಕ್ಯಾಂಟೀನ್ ತೆರೆಯುತ್ತಿದ್ದರೆ, ಜೆಡಿಎಸ್ ಪಕ್ಷದ ಮುಖಂಡರು ಕೂಡ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದೆ. ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಶರವಣ ಅವರು ತೆರೆದಿರುವ ಅಪ್ಪಾಜಿ ಕ್ಯಾಂಟೀನ್ ಉತ್ತಮವಾಗಿ ನಡೆಯುತ್ತಿದ್ದರೆ, ಪಾಂಡವಪುರ ಪಟ್ಟಣದಲ್ಲಿ ಸೋಮವಾರ(ಜ.29)ದಿಂದ ಅಪ್ಪಾಜಿ ಕ್ಯಾಂಟೀನ್ ಆರಂಭಗೊಂಡಿದೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ಕ್ಯಾಂಟೀನ್ ಆರಂಭಗೊಂಡಿದ್ದು, ಇದನ್ನು ದೇವೇಗೌಡರ ಅಭಿಮಾನಿ ಗೊರವಲೆ ನಾಗೇಶ್ ಅವರು ಆರಂಭಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ನಾನು ಕಳೆದ 20 ವರ್ಷದಿಂದ ದೇವೇಗೌಡ ಅಭಿಮಾನಿಯಾಗಿ ಜೆಡಿಎಸ್ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಹೀಗಾಗಿ ಎಚ್.ಡಿ.ದೇವೇಗೌಡರ ಹೆಸರಿನಲ್ಲಿ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಊಟ, ತಿಂಡಿ ನೀಡುತ್ತಿರುವುದಾಗಿ ಹೇಳಿದರಲ್ಲದೆ, 10 ರೂ.ಗೆ ಚೌಚೌಬಾತ್, ಪಲಾವ್, ಚಿತ್ರಾನ್ನ, ಬಿಸಿಬೇಳೆ ಬಾತ್, ಖಾಲಿ ದೋಸೆ, ಸೆಟ್ದೋಸೆ, ಚಪಾತಿ, ಮುದ್ದೆ, ಅನ್ನಸಾಂಬಾರ್ ಹಾಗೂ ಮೊಸರನ್ನ, ಒಂದು ಇಡ್ಲಿ, ಒಂದು ವಡೆ, ಎರಡು ಬಜ್ಜಿಯನ್ನು ಕೇವಲ 5 ರೂ.ಗೆ ನೀಡುತ್ತಿರುವುದಾಗಿ ಹೇಳಿದರು.
ಅಪ್ಪಾಜಿ ಕ್ಯಾಂಟಿನ್ ಗೆ ಸಂಸದ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಊಟ, ತಿಂಡಿ ಕೊಡುವುದಕ್ಕಾಗಿ ಜಿಲ್ಲೆಯಲ್ಲಿ ನಮ್ಮ ನಾಯಕರಾದ ಎಚ್.ಡಿ.ದೇವೇಗೌಡರ ಹೆಸರಿನಲ್ಲಿ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿರುವುದು ಶ್ಲಾಘನೀಯ ವಿಚಾರವಾಗಿದೆ ಎಂದರು.

ಒಟ್ಟಾರೆ ಪಾಂಡವಪುರದಲ್ಲಿ ಅಪ್ಪಾಜಿ ಕ್ಯಾಂಟೀನ್ ಆರಂಭವಾಗಿರುವುದರಿಂದ ಬಡಜನತೆಗೆ ಹೆಚ್ಚಿನ ಅನುಕೂಲವಾಗಿದ್ದು, ಕ್ಯಾಂಟೀನ್ ಗೆ ಮೊದಲ ದಿನ ನೂಕುನುಗ್ಗಲಿದ್ದದ್ದು ಕಂಡುಬಂತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications