ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ

|
Google Oneindia Kannada News

ಮಂಡ್ಯ, ಡಿಸೆಂಬರ್ 22: ವಿಷ ಸೇವಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಸಮೀಪದ ಕಬ್ಬಾರೆಯಲ್ಲಿ ಜರುಗಿದೆ.

ಸಾಲದ ಹೊರೆ ತಾಳಲಾರದೆ ಮೈಸೂರಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಸಾಲದ ಹೊರೆ ತಾಳಲಾರದೆ ಮೈಸೂರಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ

ಕಬ್ಬಾರೆ ಗ್ರಾಮದ ನಿವಾಸಿ ಬೋರೇಗೌಡ ಆತ್ಮಹತ್ಯೆ ಮಾಡಿಕೊಂಡ ರೈತರಾಗಿದ್ದು, ಇವರು ವವಿಧ ಬ್ಯಾಂಕುಗಳಲ್ಲಿ 4ಲಕ್ಷ ಚಿನ್ನಾಭರಣ ಸಾಲ ಪಡೆದಿದ್ದರು. ಅಲ್ಲದೆ ಲೇವಾದೇವಿದಾರರಿಂದ 3ಲಕ್ಷ ಹೆಚ್ಚುವರಿ ಸಾಲ ಪಡೆದಿದ್ದರು. 3ಎಕರೆ ಜಮೀನಿನಲ್ಲಿ ಕಬ್ಬು ಟಮೋಟೋ ಬೆಳೆದು ನಷ್ಟಹೊಂದಿದ ಪರಿಣಾಮ ಮನನೊಂದು ಕ್ರಿಮಿನಾಶಕ ಸೇವಿಸಿದ್ದರು.

Farmer commits suicide by consuming poison in Mandya

ಇವರನ್ನು ಪಟ್ಟಣ, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಸಾವನ್ನಪ್ಪಿದರು. ಮೃತರ ಪತ್ನಿ ವನಿತಾ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲಿಸರು ಪ್ರಕರಣ ದಾಖಲಿಸಿದ್ದಾರೆ.

ಮೃತ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಜೆಡಿಎಸ್ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಬ್ಯಾಡರಹಳ್ಳಿ ಶಿವಕುಮಾರ್ ಆಗ್ರಹಿಸಿದ್ದಾರೆ.

English summary
A farmer committed suicide after consuming poison in Kabbare village in Maddur taluk, Mandya district on Dec 21st. He was suffering from financial burden sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X